April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎ.10: ಧರ್ಮಸ್ಥಳ ಗೀತ ನೃತ್ಯಾಲಯ ನೃತ್ಯ ತರಬೇತಿ ಕೇಂದ್ರ ಪ್ರಸ್ತುತಪಡಿಸುವ “ನೃತ್ಯ ರಶ್ಮಿ ನೃತ್ಯೋತ್ಸವ ಹಾಗೂ ಗುರುವಂದನೆ” ಮತ್ತು ಪ್ರಥಮ ವರ್ಷದ ಸಂಭ್ರಮ

ಧರ್ಮಸ್ಥಳ: ಇಲ್ಲಿಯ ಜೋಡುಸ್ಥಾನ ಗೀತ ನೃತ್ಯಾಲಯ ನೃತ್ಯ ತರಬೇತಿ ಕೇಂದ್ರ ಪ್ರಸ್ತುತಪಡಿಸುವ “ನೃತ್ಯ ರಶ್ಮಿ ನೃತ್ಯೋತ್ಸವ ಹಾಗೂ ಗುರುವಂದನೆ” ಪ್ರಥಮ ವರ್ಷದ ಸಂಭ್ರಮವು ಎ.10 ರಂದು ಸಂಜೆ 5.45 ರಿಂದ ರಾತ್ರಿ 9.00 ರವರೆಗೆ ಧರ್ಮಸ್ಥಳ ಮಹೋತ್ಸವ ಸಭಾಭವನದಲ್ಲಿ ನಡೆಯಲಿದೆ.

ಕಾರ್ಯಕ್ರಮದ ದೀಪ ಪ್ರಜ್ವಲನೆಯನ್ನು ಮಂಗಳೂರು ಕದ್ರಿ ನೃತ್ಯ ಭಾರತಿ ಕಲಾಶ್ರೀ ಗುರು ಶ್ರೀಮತಿ ಗೀತಾ ಸರಳಾಯ ನೆರವೇರಿಸಲಿದ್ದಾರೆ.

ಅಧ್ಯಕ್ಷತೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಮಾತೃಶ್ರೀ ಹೇಮಾವತಿ ವೀ. ಹೆಗ್ಗಡೆಯವರು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಡಿ. ಹರ್ಷೇಂದ್ರ ಕುಮಾರ್, ಮಂಗಳೂರು ಕದ್ರಿ ನೃತ್ಯ ಭಾರತಿ ವಿದುಷಿ ರಶ್ಮಿ ಚಿದಾನಂದ್ ಭಾಗವಹಿಸಲಿದ್ದಾರೆ.

ಉಜಿರೆ ವಾಣಿಶ್ರೀ ನೃತ್ಯ ಕೇಂದ್ರದ ಶ್ರೀಮತಿ ಶಾಂತ ಪಡುವೆಟ್ನಾಯ ರಿಗೆ ನೃತ್ಯ ದೀಪ ಪ್ರಶಸ್ತಿ ಪ್ರದಾನ ನಡೆಯಲಿದೆಯೆಂದು ಅದ್ಯಕ್ಷೆ ವಿದುಷಿ ಕು.ಚೈತ್ರಾ ಎಮ್,ಉಪಾಧ್ಯಕ್ಷೆ ಮೀನಾಕ್ಷಿ ಜಿ ಭಟ್,ಗೌರವ ಸಲಹೆಗಾರ ಸುಬ್ರಹ್ಮಣ್ಯ ಪ್ರಸಾದ್ ತಿಳಿಸಿದ್ದಾರೆ.

Related posts

ಓಡಿಲ್ನಾಳ 149 ಬೂತ್ ಸಮಿತಿ ಅಧ್ಯಕ್ಷರಾಗಿ ಉಮೇಶ್ ಕುಲಾಲ್, ಕಾರ್ಯದರ್ಶಿಯಾಗಿ ಸಂತೋಷ್ ಆರ್ ಗೌಡ ಆಯ್ಕೆ

Suddi Udaya

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ: ರೂ. 2. 43 ಲಕ್ಷ ನಿವ್ವಳ ಲಾಭ.

Suddi Udaya

ನಾರಾವಿ: ಹಿರ್ತೋಟ್ಟು ಮೀನಗುಂಡಿಗೆ ವಿಷ: ಅಪಾರ ಪ್ರಮಾಣದ ಮೀನುಗಳ ಸಾವು

Suddi Udaya

ವೇಣೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕಾರ್ಯಕ್ರಮ

Suddi Udaya

ಪೆರೋಡಿತ್ತಾಯಕಟ್ಟೆ ಸ.ಉ.ಪ್ರಾ. ಶಾಲೆಯಲ್ಲಿ ಮೆಟ್ರಿ ಕ್ ಮೇಳ

Suddi Udaya

ಸುಪ್ರೀಂ ಕೋರ್ಟ್ ಹಿರಿಯ ವಕೀಲರಾಗಿ ಶೇಖರ್ ಗೌಡ ದೇವಸ ಸವಣಾಲು ನೇಮಕ

Suddi Udaya
error: Content is protected !!