23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಎ.13,ವಿಷು ಕಣಿ ಆಚರಣಾ ಸಮಿತಿಯಿಂದ ಕೇರಳ ಸಂಪ್ರಾದಾಯಿಕ ವಿಷು ಕಣಿ ಆಚರಣೆ: ಕೇರಳ ಚೆಂಡೆ ಪ್ರದರ್ಶನ, ಪೂಕಳಂ, ಮನೋರಂಜನಾ ಕಾರ್ಯಕ್ರಮ, 32 ಬಗೆಯ ಉಟೋಪಚಾರ

ಬೆಳ್ತಂಗಡಿ:ವಿಷು ಕಣಿ ಆಚರಣಾ ಸಮಿತಿಯಿಂದ 3 ನೇ ವರ್ಷದ ಕೇರಳ ಸಾಂಪ್ರದಾಯಿಕ ವಿಷು ಕಣಿ ಆಚರಣೆಯು ಉಜಿರೆ ಶ್ರೀ ಕೃಷ್ಣಾನುಗ್ರಹ ಸಭಾಭವನದಲ್ಲಿ ಎ.13 ರಂದು ನಡೆಯಲಿದೆ.ಕಳೆದ ಎರಡು ವರ್ಷದ ಹಿಂದೆ ಉಜಿರೆಯಲ್ಲಿ ನಡೆದ ವಿಷು ಕಣಿ ಆಚರಣೆಯಲ್ಲಿ ಬೆಳ್ತಂಗಡಿ ತಾಲೂಕಿನ ಸಾವಿರಾರು ಜನರು ಭಾಗವಹಿಸಿದ್ದರು‌.ವಿಷು ಹಬ್ಬ ಕೃಷಿ ಪ್ರಧಾನ ಹಬ್ಬವಾಗಿದ್ದು ಮನೆಮಂದಿ ವಿಷು ಕಣಿ ಇಟ್ಟು ಬೆಳಗ್ಗೆ ಬೇಗ ಎದ್ದು ಹೆಚ್ಚಿನ ಮನೆ, ದೇವಸ್ಥಾನ, ದೈವಸ್ಥಾನಗಳಲ್ಲಿ ಪೂಜೆ ನಡೆಸುತ್ತಾರೆ.ಬಾಳೆಹಣ್ಣು, ಎಳನೀರು, ಹಲಸಿನ ಹಣ್ಣು, ಕನ್ನಡಿ, ತಂಬಿಗೆಯಲ್ಲಿ ನೀರು, ಎಲೆಅಡಿಕೆ, ಹಣ, ಕುಂಕುಮ,ಚಿನ್ನದ ಒಡವೆ ಮೊದಲಾದ ಸುವಸ್ತುಗಳನ್ನು ಜೋಡಿಸಿ ವಿಷು ಕಣಿ ಮಾಡಲಾಗುತ್ತದೆ.ಈ ಸಂದರ್ಭ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ-ಪುನಸ್ಕಾರ ನಡೆಯುತ್ತದೆ. ಸಾವಿರಾರು ಭಕ್ತರು ಪಾಲ್ಗೊಂಡು ಶ್ರೀ ದೇವರ ದರುಶನ ಪಡೆದು ಅನ್ನಪ್ರಸಾದ ಸ್ವೀಕರಿಸುತ್ತಾರೆ.ಬಹುತೇಕ ಮನೆಗಳಲ್ಲಿ ವಿಷುಕಣಿ ಇಟ್ಟು ಕುಟುಂಬದ ಸದಸ್ಯರೆಲ್ಲರೂ ಜತೆ ಸೇರಿ ಹಬ್ಬ ಆಚರಿಸಿ ಸಿಹಿಯೂಟ ಮಾಡುತ್ತಾರೆ. ಈ ಬಾರಿ ಬೆಳ್ತಂಗಡಿ ತಾಲೂಕು ವಿಷು ಕಣಿ ಆಚರಣಾ ಸಮಿತಿ ವಿನೂತನವಾಗಿ ಹಬ್ಬವನ್ನು ಆಚರಿಸಲು ನಿರ್ದರಿಸಿದೆ. ವಿಶೇಷ ಕೇರಳ ಚೆಂಡೆ ಪ್ರದರ್ಶನ,ಪೂಕಳಂ,ಕೇರಳದ ನುರಿತ ಕಲಾವಿದರಿಂದ ವಿವಿಧ ಮನೋರಂಜನಾ ಕಾರ್ಯಕ್ರಮ, ಕೇರಳ ಸಾಂಪ್ರಾದಾಯಿಕ ಶೈಲಿಯ 32 ಬಗೆಯ ಉಟೋಪಚಾರ ಇದೆಯೆಂದು ಕಾರ್ಯಕ್ರಮ ಆಯೋಜಕರು ತಿಳಿಸಿದ್ದಾರೆ.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ ಮತ್ತು ಲಯನ್ ಸೇವಾ ಟ್ರಸ್ಟ್ ವತಿಯಿಂದ ವಿವಿಧ ಸಂಸ್ಥೆಗಳಿಗೆ ರೂ. 1ಲಕ್ಷ ಸಹಾಯಧನ

Suddi Udaya

ಮಚ್ಚಿನ: ಭಾಗ್ಯಶ್ರೀ ಮಿತ್ರ ಮಂಡಳಿ ನೆತ್ತರ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸಂತೋಷ್ ಮಚ್ಚಗುರಿ

Suddi Udaya

ಮುಂಡಾಜೆ: ಚಿತ್ಪಾವನ ಸಂಘಟನೆಯ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸುಶ್ಮಾ ಶಶಾಂಕ ಭಿಡೆ

Suddi Udaya

ಪರೀಕ ಶ್ರೀ ಧ.ಮಂ. ಯೋಗ ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಖ್ಯವನದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಿ ಸೀತಾರಾಮ ತೋಳ್ಪಾಡಿತ್ತಾರವರಿಗೆ ಅಭಿನಂದನಾ ಸಮಾರಂಭ

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಶಾಸಕ ಹರೀಶ್ ಪೂಂಜರವರಿಗೆ ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡ ಮತ್ತು ಸಭಾಭವನ ಉದ್ಘಾಟನೆಯ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 50453 ಅಂತರದಿಂದ ಭಾರಿ ಮುನ್ನಡೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಹಿನ್ನಡೆ

Suddi Udaya
error: Content is protected !!