23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎ.15: ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಹಾಗೂ ಶ್ರೀ ದೇವಿ ಮಹಿಳಾ ಕೇಂದ್ರದ 25 ನೇ ವರ್ಷದ ಬೆಳ್ಳಿಹಬ್ಬ ಸಂಭ್ರಮ: ಏಕಾಹ ಭಜನಾ ಕಾರ್ಯಕ್ರಮ ಮತ್ತು 45 ಭಜನಾ ತಂಡಗಳಿಂದ ಭಜನಾ ಕಮ್ಮಟೋತ್ಸವ, ಸಾಧಕರಿಗೆ ಸನ್ಮಾನ

ಶಿರ್ಲಾಲು : ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ, ಶ್ರೀ ದೇವಿ ಮಹಿಳಾ ಕೇಂದ್ರದ 25ನೇ ವರ್ಷದ ಬೆಳ್ಳಿಹಬ್ಬದ ಪ್ರಯುಕ್ತ ಏಕಾಹ ಭಜನಾ ಕಾರ್ಯಕ್ರಮ ಮತ್ತು ಸುಮಾರು 45 ಭಜನಾ ತಂಡಗಳಿಂದ ಭಜನಾ ಕಮ್ಮಟೋತ್ಸವ ಎ.15 ರಂದು ಶ್ರೀ ಲೋಕನಾಥೇಶ್ವರ ದೇವಸ್ಥಾನ ಬದ್ಯಾರುನಲ್ಲಿ ನಡೆಯಲಿದೆ ಎಂದು ಸಮಿತಿ ಅಧ್ಯಕ್ಷ ಜಗನ್ನಾಥ ಕುಲಾಲ್ ಬೈರೊಟ್ಟು ತಿಳಿಸಿದರು.

ಅವರು ಎ.8 ರಂದು ಬೆಳ್ತಂಗಡಿ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ವಿಶೇಷವಾಗಿ ತಾಲೂಕಿನ ಸುಮಾರು 45 ತಂಡಗಳು ಭಜನಾ ಕಮ್ಮಟೋತ್ಸವದಲ್ಲಿ ಭಾಗವಹಿಸಲಿದೆ. ದೇವರಿಗೆ ವಿಶೇಷ ರಂಗಪೂಜೆ, ಕಿರುತೆರೆ ನಿರ್ದೇಶಕ ಸುಭಾಶ್ ಅರ್ವ ಭಜನಾ ತರಬೇತುದಾರ ವಿ.ಹರೀಶ್ ನೆರಿಯ ಹಾಗೂ ಸಮಿತಿಯ ಮಾಜಿ ಅಧ್ಯಕ್ಷ, ಕಾರ್ಯದರ್ಶಿಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಶ್ರೀ ಲೋಕನಾಥೇಶ್ವರ ದೇವಸ್ಥಾನ ಬದ್ಯಾರು ಶಿರ್ಲಾಲು, ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ, ಶ್ರೀ ದೇವಿ ಮಹಿಳಾ ಕೇಂದ್ರ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವೃದ್ದಿ ಯೋಜನೆ ಶಿರ್ಲಾಲು ಇದರ ಸಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದರು.

ಬೆಳಿಗ್ಗೆ ಪೂಜೆ, ಏಕಾಹ ಭಜನಾ ಕಾರ್ಯಕ್ರಮ ಮಧ್ಯಾಹ್ನ ಮಹಾಪೂಜೆ, ತೀರ್ಥಪ್ರಸಾದ, ಅನ್ನಸಂತರ್ಪಣೆ, ಸಂಜೆ ಬೆಳ್ಳಿಹಬ್ಬದ ಕಾರ್ಯಕ್ರಮ , ಸಂಜೆ 6.00 ಭಜನಾ ಕಮ್ಮಟೋತ್ಸವ ನಡೆಯಲಿದೆ.ಸಂಜೆ ನಡೆಯುವ ಸಭಾಕಾರ್ಯಕ್ರಮದಲ್ಲಿ ಪಾಂಗಾಲ್ದಾಡಿ ಬ್ರಹ್ಮಶ್ರೀ ವೇದಮೂರ್ತಿ ನಡ್ವಂತಾಡಿ ಶ್ರೀಪಾದ ಪಾಂಗಾಣ್ಣಯ ತಂತ್ರಿಗಳು ಆಶೀರ್ವಚನ ನೀಡಲಿದ್ದಾರೆ.ಉದ್ಘಾಟನೆಯನ್ನು ಅಳದಂಗಡಿ ಅರಮನೆ ತಿಮ್ಮಣ್ಣರಸರಾದ ಡಾ। ಪದ್ಮಪ್ರಸಾದ ಅಜಿಲರು ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿವಿಧ ಕ್ಷೇತ್ರದ ಗಣ್ಯರು ಭಾಗವಹಿಸಲಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಲೋಕನಾಥೇಶ್ವರ ಭಜನಾ ಮಂಡಳಿ ಪ್ರಧಾನ ಕಾರ್ಯದರ್ಶಿ ಸದಾಶಿವ ಶಿವಗಿರಿ, ಭಜನಾ ಮಂಡಳಿ ಮಾಜಿ‌ ಅಧ್ಯಕ್ಷರಾದ ಅಶೋಕ್ ಬುಡಂಗೊಟ್ಟು,ರಾಜೇಶ್ ಕುಲಾಲ್ ಬೈರೊಟ್ಟು ಉಪಸ್ಥಿತರಿದ್ದರು.

Related posts

ಬೋಳಿಯಾರಿನಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಹಲ್ಲೆ ಪ್ರಕರಣ: ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜ

Suddi Udaya

ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ಮತ್ತು ನವಗುಳಿಗ ಕ್ಷೇತ್ರದಲ್ಲಿ ಜಾತ್ರಾ ಮಹೋತ್ಸವ: ರಂಗ ಮಂಟಪ ಲೋಕಾರ್ಪಣೆ, ನವದುರ್ಗೆಯರ ಮೂರ್ತಿ ಪ್ರತಿಷ್ಠೆ, ದೇವರ ಪ್ರಭಾವಳಿ ಸಮರ್ಪಣೆ: ಇಂದು (ಫೆ.5) ನವ ಗುಳಿಗಗಳ ವಿಶೇಷ ಗಗ್ಗರ ಸೇವೆ

Suddi Udaya

ಪಡಂಗಡಿ: ಕರುವಿನ ಮೇಲೆ ಚಿರತೆ ದಾಳಿ

Suddi Udaya

ಗುರುವಾಯನಕೆರೆ ವೈಭವ್ ಹಾರ್ಡ್ ವೇರ್ ನಲ್ಲಿ ಸ್ವಾತಂತ್ರೋತ್ಸವ ಆಚರಣೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಬೆಹರಿನ್ ಇಂಡಿಯಾ ಇಂಟರ್ನ್ಯಾಷನಲ್ ಆವಾರ್ಡ್- 2024

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರ ಬಿಡುಗಡೆ

Suddi Udaya
error: Content is protected !!