24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ವಾರ್ಷಿಕ ಮಹಾಸಭೆ, ಹಿರಿಯ ನಾಗರಿಕರಿಗೆ ಸನ್ಮಾನ

ಬೆಳ್ತಂಗಡಿ: ಸಂಘದ ಸದಸ್ಯರಾದ ಅಚ್ಚಿನಡ್ಕ ವೀರಮ್ಮನವರು ಬೆಳ್ತಂಗಡಿಯಲ್ಲಿ ಕೆಲ್ಲಗುತ್ತು ಪರಿಸರದಲ್ಲಿ ಉದಾರ ಕೊಡುಗೆಯಾಗಿ ನೀಡಿದ ಹತ್ತು ಸೆಂಟ್ಸ್ ನಿವೇಶನದಲ್ಲಿ ಒಂದು ವರ್ಷದೊಳಗೆ ಸುಸಜ್ಜಿತ ನೂತನ ಕಟ್ಟಡ ನಿರ್ಮಿಸಿ ಉದ್ಘಾಟನಾ ಸಮಾರಂಭವನ್ನು ವೈಭವದಿಂದ ಆಯೋಜಿಸಲಾಗುವುದು ಎಂದು ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ಬೆಳ್ತಂಗಡಿ ತಾಲ್ಲೂಕು ಘಟಕದ ಅಧ್ಯಕ್ಷ ಹಾಗೂ ನಿವೃತ್ತ ಶಿಕ್ಷಣಾಧಿಕಾರಿ ಬಿ. ವಿಠಲ ಶೆಟ್ಟಿ ಹೇಳಿದರು.


ಅವರು ಎ.6ರಂದು ಬೆಳ್ತಂಗಡಿಯಲ್ಲಿ ರಾಜ್ಯ ಸರ್ಕಾರಿ ನೌಕರರ ಸಭಾಭವನದಲ್ಲಿ ನಡೆದ ಸಂಘದ ಮಹಾಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ನೂತನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ರಾಜ್ಯಮಟ್ಟದ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಅವರು ಪ್ರಕಟಿಸಿದರು.


ಸಂಘದ ಹಿರಿಯ ಸದಸ್ಯರುಗಳಾದ ಎಂ.ಕೆ. ಆರಿಗ, ಮಹಾಬಲ ಹೆಗ್ಡೆ, ಲಲಿತ, ಬಾಬುಗೌಡ, ಆಗ್ನೇಸ್ ಡೇಸಾ, ದೇವಪ್ಪ ಗೌಡ, ಪ್ರೊ. ಕೆ. ವಿಷ್ಣುಮೂರ್ತಿ ಭಟ್, ವಿಕ್ಟರ್ ಮೊರಾಸ್, ನಿವೃತ್ತ ಉಪನ್ಯಾಸ ಸುಬ್ರಹ್ಮಣ್ಯ ಮಧ್ಯಸ್ತ, ಸೋಮನಾಥ ಮಯ್ಯ ಅಳದಂಗಡಿ, ಜುಲಿಯಾನಾ ಲೋಬೊ, ಪ್ರೊ. ಉದಯಕುಮಾರ ಮಲ್ಲ, ಬೆಳ್ತಂಗಡಿ, ಬಾಬು ಪೂಜಾರಿ ಕೆದ್ದು, ರಾಮ ಕಾರಂತ, ಉಜಿರೆ, ಬಾಬು ಗೌಡ, ಮುಂಡಾಜೆ ಮೊದಲಾದರನ್ನು ಗೌರವಿಸಲಾಯಿತು.


ಇತ್ತೀಚೆಗೆ ನಿಧನರಾದ ಪ್ರೊ. ನಾ’ ವುಜಿರೆ ಅವರಿಗೆ ಆರ್.ಯನ್. ಪೂವಣಿ ಹಾಗೂ ನಿವೃತ್ತ ಶಿಕ್ಷಕ ಜಯರಾಜ ಕಾಡ, ಕುತ್ಲೂರು ಅವರಿಗೆ ವಸಂತರಾವ್ ನುಡಿನಮನ ಸಲ್ಲಿಸಿದರು. ಕೋಶಾಧಿಕಾರಿ ಜಗನ್ನಿವಾಸ ರಾವ್ ಮತ್ತು ಉಪಾಧ್ಯಕ್ಷರಾದ ಕುಸುಮಾವತಿ ಉಪಸ್ಥಿತರಿದ್ದರು.


ಕಾರ್ಯದರ್ಶಿ ಪದ್ಮಕುಮರ್ ವರದಿ ಸಾದರಪಡಿಸಿದರು. ಸಂಘದ  ಉಪಾಧ್ಯಕ್ಷ ಸನ್ಮತ್ ಕುಮಾರ್ ನಾರಾವಿ ಸ್ವಾಗತಿಸಿದರು. ಪದ್ಮಕುಮಾರ್ ಧನ್ಯವಾದವಿತ್ತರು.

Related posts

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬಕ್ರೀದ್ ಆಚರಣೆ

Suddi Udaya

ಅಳದಂಗಡಿ ಅರಣ್ಯ ಇಲಾಖೆ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಹಾಗೂ ಬೀಜ ಬಿತ್ತನೆ ಕಾರ್ಯಕ್ರಮ

Suddi Udaya

ಇಂದು ಧರ್ಮಸ್ಥಳದಲ್ಲಿ ಸಾಮೂಹಿಕ ವಿವಾಹ, ವಧು-ವರರಿಗೆ ಸೀರೆ, ಧೋತಿ ವಿತರಣೆ

Suddi Udaya

ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

Suddi Udaya

ನಾಲ್ಕೂರು: ಸೂಳಬೆಟ್ಟು ಶ್ರೀ ಕೃಷ್ಣ ಕುಣಿತ ಭಜನಾ ಮಂಡಳಿ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ಮರುಮೌಲ್ಯ ಮಾಪನದಲ್ಲಿ ಶ್ರೀ ಧ.ಮಂ.ಪ.ಪೂ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿನಿ ಕು. ಅನನ್ಯ ರಾಜ್ಯಕ್ಕೆ 9ನೇ ರ‍್ಯಾಂಕ್

Suddi Udaya
error: Content is protected !!