23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ : ಬೆರ್ಕೆಯಲ್ಲಿ ಒಂಟಿ ಸಲಗ ದಾಳಿ: ಅಪಾರ ಕೃಷಿ ಹಾನಿ

ಬೆಳ್ತಂಗಡಿ: ಕಲ್ಮಂಜ ಗ್ರಾಮದ ಬೆರ್ಕೆ ಎಂಬಲ್ಲಿ ಎಂ.ಎಸ್. ಪ್ರಕಾಶ್ ಎಂಬವರ ತೋಟಕ್ಕೆ ಎ.6ರಂದು ತಡರಾತ್ರಿ ಒಂಟಿ ಸಲಗ ಪ್ರವೇಶಿಸಿ ಕೃಷಿಹಾನಿ ಉಂಟುಮಾಡಿದೆ.


ಸಲಗವು ಸುಮಾರು 40ಕ್ಕಿಂತ ಅಧಿಕ ಬಾಳೆ ಗಿಡ 5 ಅಡಕೆ ಮರಗಳನ್ನು ಧ್ವಂಸಗೊಳಿಸಿದೆ.
ಕಳೆದ ಸುಮಾರು ಎರಡು ತಿಂಗಳ ಹಿಂದೆ ಇದೇ ತೋಟಕ್ಕೆ ಪ್ರವೇಶಿಸಿದ್ದ ಕಾಡಾನೆ ಆಗ ಈಚಲ ಮರವನ್ನು ಮುರಿದು ಹಾಕಿತ್ತು. ಮನೆಯವರು ಅದನ್ನು ಹಾಗೆ ಬಿಟ್ಟಿದ್ದರು. ಈ ಈಚಲ ಮರವನ್ನು ಆನೆ ಶನಿವಾರ ಸಂಪೂರ್ಣ ಪುಡಿಗಟ್ಟಿದೆ.
ತಿಂಗಳ ಹಿಂದೆ ಕಾಡಾನೆಗಳು ಚಾರ್ಮಾಡಿ, ಮುಂಡಾಜೆ, ಕಡಿರುದ್ಯಾವರ, ಕಲ್ಮಂಜ,ಬೆಳಾಲು, ಗೇರುಕಟ್ಟೆ ಮೊದಲಾದ ಕಡೆ ಸಾಕಷ್ಟು ದಾಂಧಲೆ ನಡೆಸಿ ಉಪ್ಪಿನಂಗಡಿ ಭಾಗದಲ್ಲಿಯು ಪ್ರತ್ಯಕ್ಷವಾಗಿದ್ದು, ಇದೀಗ ಮತ್ತೆ ಕಾಡಾನೆ ಉಪಟಳ ಈ ಭಾಗಗಳಲ್ಲಿ ಕಾಣಿಸಿಕೊಂಡಿದೆ.

Related posts

ಕೊಯ್ಯೂರು: ದೆoತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಳದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಕನ್ಯಾಡಿ -I : ಮೇರ್‍ಲ ನಿವಾಸಿ ಕೃಷಿಕ ಸಾಂತಪ್ಪ ಗೌಡ ನಿಧನ

Suddi Udaya

ಪಟ್ಟೂರು ಕಾನೂನು ಬಾಹಿರ ಮನೆ ಜಪ್ತಿ : ತಪ್ಪಿತಸ್ತ ಅಧಿಕಾರಿ ಮೇಲೆ ಕ್ರಮಕ್ಕೆ ಮುಸ್ಲಿಂ ಒಕ್ಕೂಟ ಬೆಳ್ತಂಗಡಿ ಆಗ್ರಹ: ನೂತನ ಡಿವೈಎಸ್‌ಪಿ ಜೊತೆ ಮುಸ್ಲಿಂ ಮುಖಂಡರ ಮಾತುಕತೆ

Suddi Udaya

ಬಂದಾರು ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷೆ ಹಾಗೂ ಉಪಾಧ್ಯಕ್ಷರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಮಿಜಾರುಗುತ್ತು ಆನಂದ ಆಳ್ವ ರವರ ನಿಧನಕ್ಕೆ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ರಕ್ಷಿತ್ ಶಿವರಾಮ್ ರವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದ ಅಂಗವಾಗಿ ಕಾಂಗ್ರೆಸ್ ಕಾರ್ಯಕರ್ತರ ಸಭೆ

Suddi Udaya
error: Content is protected !!