September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ : ಬೆರ್ಕೆಯಲ್ಲಿ ಒಂಟಿ ಸಲಗ ದಾಳಿ: ಅಪಾರ ಕೃಷಿ ಹಾನಿ

ಬೆಳ್ತಂಗಡಿ: ಕಲ್ಮಂಜ ಗ್ರಾಮದ ಬೆರ್ಕೆ ಎಂಬಲ್ಲಿ ಎಂ.ಎಸ್. ಪ್ರಕಾಶ್ ಎಂಬವರ ತೋಟಕ್ಕೆ ಎ.6ರಂದು ತಡರಾತ್ರಿ ಒಂಟಿ ಸಲಗ ಪ್ರವೇಶಿಸಿ ಕೃಷಿಹಾನಿ ಉಂಟುಮಾಡಿದೆ.


ಸಲಗವು ಸುಮಾರು 40ಕ್ಕಿಂತ ಅಧಿಕ ಬಾಳೆ ಗಿಡ 5 ಅಡಕೆ ಮರಗಳನ್ನು ಧ್ವಂಸಗೊಳಿಸಿದೆ.
ಕಳೆದ ಸುಮಾರು ಎರಡು ತಿಂಗಳ ಹಿಂದೆ ಇದೇ ತೋಟಕ್ಕೆ ಪ್ರವೇಶಿಸಿದ್ದ ಕಾಡಾನೆ ಆಗ ಈಚಲ ಮರವನ್ನು ಮುರಿದು ಹಾಕಿತ್ತು. ಮನೆಯವರು ಅದನ್ನು ಹಾಗೆ ಬಿಟ್ಟಿದ್ದರು. ಈ ಈಚಲ ಮರವನ್ನು ಆನೆ ಶನಿವಾರ ಸಂಪೂರ್ಣ ಪುಡಿಗಟ್ಟಿದೆ.
ತಿಂಗಳ ಹಿಂದೆ ಕಾಡಾನೆಗಳು ಚಾರ್ಮಾಡಿ, ಮುಂಡಾಜೆ, ಕಡಿರುದ್ಯಾವರ, ಕಲ್ಮಂಜ,ಬೆಳಾಲು, ಗೇರುಕಟ್ಟೆ ಮೊದಲಾದ ಕಡೆ ಸಾಕಷ್ಟು ದಾಂಧಲೆ ನಡೆಸಿ ಉಪ್ಪಿನಂಗಡಿ ಭಾಗದಲ್ಲಿಯು ಪ್ರತ್ಯಕ್ಷವಾಗಿದ್ದು, ಇದೀಗ ಮತ್ತೆ ಕಾಡಾನೆ ಉಪಟಳ ಈ ಭಾಗಗಳಲ್ಲಿ ಕಾಣಿಸಿಕೊಂಡಿದೆ.

Related posts

ಕಕ್ಕಿಂಜೆ ಶ್ರೀ  ಕೃಷ್ಣ ಆಸ್ಪತ್ರೆಯಲ್ಲಿ  ಯೋಗಕ್ಷೇಮ,ವಿಸ್ತೃತ ವಸತಿ ಸಮುಚ್ಚಯ  ಮತ್ತು ನೂತನ ಅಂಬ್ಯುಲೆನ್ಸ್ ಲೋಕಾರ್ಪಣೆ 

Suddi Udaya

ಶಿಬಾಜೆಯಲ್ಲಿ ಹಿಂದೂಗಳ ಮೇಲೆ ನಡೆದ ದೌರ್ಜನ್ಯದ ಪ್ರಯುಕ್ತ ಬೃಹತ್ ಪ್ರತಿಭಟನೆ

Suddi Udaya

ಉಜಿರೆ: ಸ್ಕೂಟರ್ ನಿಯಂತ್ರಣ ತಪ್ಪಿ ಬಿದ್ದು ಗಾಯಗೊಂಡಿದ್ದ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ನೂತನ ಉಪರಾಷ್ಟ್ರಪತಿಯಾಗಿ ಎ ನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್

Suddi Udaya

ಮಚ್ಚಿನ: ಮುಡಿಪಿರೆ ರಸ್ತೆ ದುರಸ್ತಿ

Suddi Udaya

ಬಿಜೆಪಿ ಬಜಿರೆ ಗ್ರಾಮದ ಬೂತ್ ಸಂಖ್ಯೆ 139ರ ಅಧ್ಯಕ್ಷರಾಗಿ ಚಂದ್ರಶೇಖರ, ಕಾರ್ಯದರ್ಶಿಯಾಗಿ ರಮಾನಾಥ ಪೂಜಾರಿ ಆಯ್ಕೆ

Suddi Udaya
error: Content is protected !!