25.5 C
ಪುತ್ತೂರು, ಬೆಳ್ತಂಗಡಿ
July 23, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

ಪುದುವೆಟ್ಟು :ಇಲ್ಲಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಕರ ಸಭೆಯನ್ನು ಎ.6 ರಂದು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದ ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪಗೌಡ ರವರು ಬೇಸಿಗೆ ಶಿಬಿರದಲ್ಲಿ ವಿದ್ಯಾರ್ಥಿ ಪೋಷಕರು ಮನೆಯಲ್ಲಿ ಮಕ್ಕಳನ್ನು ಯಾವ ರೀತಿ ನೋಡಿಕೊಳ್ಳಬೇಕು, ರಜೆಯಲ್ಲಿ ಮಕ್ಕಳು ಮನೆಯಲ್ಲಿ ಮಾಡಬೇಕಾದ ಚಟುವಟಿಕೆಗಳ ಬಗ್ಗೆ ಸಭೆಯಲ್ಲಿ ತಿಳಿಸಿಕೊಟ್ಟರು.

ಸಭಾ ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಟಿಕ್ಕಾ ಸಾಹೇಬ್ ಮಾತನಾಡಿ ಈ ವರ್ಷ ಶಾಲೆಯಲ್ಲಿ ಹಲವಾರು ಕಾರ್ಯಕ್ರಮಗಳನ್ನು ಆಯೋಜನೆ ಮಾಡಿದ್ದಾರೆ ಈ ಕಾರ್ಯಕ್ರಮದ ಸದುಪಯೋಗವನ್ನು ವಿದ್ಯಾರ್ಥಿಗಳು ರಜೆಯ ದಿನಗಳಲ್ಲಿ ಅನುಭವಿಸಬೇಕು ಎಂದು ತಿಳಿಸಿಕೊಟ್ಟರು.

ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪೋಷಕ ಬಂಧುಗಳು ಆಗಮಿಸಿ ಶಾಲೆಯ ಶೈಕ್ಷಣಿಕ ಪ್ರಗತಿಗೆ ಸೂಕ್ತ ಮಾರ್ಗದರ್ಶನವನ್ನು ನೀಡಿ ಕಾರ್ಯಕ್ರಮವನ್ನು ಚಂದಗಾಣಿಸಿಕೊಟ್ಟರು.

ಆಗಮಿಸಿದ ಪೋಷಕ ಬಂಧುಗಳನ್ನು ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪಗೌಡ ಸ್ವಾಗತಿಸಿ, ಕಾರ್ಯಕ್ರಮವನ್ನು ಶಾಲೆಯ ಹಿರಿಯ ಶಿಕ್ಷಕಿ ಶ್ರೀಮತಿ ತೇಜಾವತಿಯವರು ನಿರೂಪಿಸಿದರು. ಈ ಸಂದರ್ಭದಲ್ಲಿ ಶಾಲೆಯ ಎಲ್ಲಾ ಶಿಕ್ಷಕರು ಉಪಸ್ಥಿತರಿದ್ದು ಸಹಕರಿಸಿದರು.

Related posts

ಬೆಳಾಲು ಎನ್ ಎಸ್ ಎಸ್ ಶಿಬಿರಾರ್ಥಿ ಮತ್ತು ಪಂಚಾಯತ್ ವತಿಯಿಂದ ಸ್ವಚ್ಛತಾ ಅಭಿಯಾನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ 2023ನೇ ವರ್ಷದ ಚಟುವಟಿಕೆಗಳು ಸಂಪನ್ನ

Suddi Udaya

ಧರ್ಮಸ್ಥಳ ಶ್ರೀ ಧ.ಮಂ. ಭಜನಾ ಪರಿಷತ್ ಇದರ ಅಧ್ಯಕ್ಷರಾಗಿ ಆಯ್ಕೆಯಾದ ಚಂದ್ರಶೇಖರ್ ಸಾಲ್ಯಾನ್ ಕೊಯ್ಯೂರು ರವರಿಗೆ ತಾಲೂಕು ಭಜನಾ ಪರಿಷತ್ ವತಿಯಿಂದ ಅಭಿನಂದನೆ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ಅಧ್ಯಕ್ಷ ದೀಪಕ್ ಜಿ. ರವರಿಗೆ ಸಮಾಜ ರತ್ನ ಪ್ರಶಸ್ತಿ

Suddi Udaya

ಡಿ.10 -11: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ

Suddi Udaya

ಬೆಳ್ತಂಗಡಿ: ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿ ಮಾನವೀಯತೆ ಮೆರೆದ ಸುಧೀರ್ ಜೈನ್ ಬಳಂಜ

Suddi Udaya
error: Content is protected !!