ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು : ಒಂದೇ ವರ್ಷದ ಅಡಿಕೆ ಸಸಿಯಲ್ಲಿ ಮೂಡಿದ ಚೊಚ್ಚಲ ಹಿಂಗಾರ; ಶಾಲಾ ತೋಟದಲ್ಲಿ ಹೀಗೊಂದು ಪ್ರಕೃತಿ ವೈಚಿತ್ರ್ಯ

ಬಂದಾರು : ಸರಕಾರಿ ಶಾಲೆಯ ಅಡಿಕೆ ತೋಟದಲ್ಲಿ ಒಂದೇ ವರ್ಷದ ಅಡಿಕೆ ಸಸಿಯೊಂದರಲ್ಲಿ ಕಾಂಡದ ತುದಿಯ ಗರಿಗಳ ಮಧ್ಯ ಭಾಗದಲ್ಲಿ ಚೊಚ್ಚಲ ಹಿಂಗಾರ ಮೂಡಿದ ಪ್ರಕೃತಿ ವೈಚಿತ್ರ್ಯವೊಂದು ಬಂದಾರು ಬಳಿ ಕಂಡು ಬಂದಿದೆ.

ಹೌದು, ಬೆಳ್ತಂಗಡಿ ತಾಲೂಕು ಬಂದಾರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ಒಂದು ವರ್ಷದ ಮಂಗಳ ತಳಿಯ ಅಡಿಕೆ ತೋಟದ ಅಡಿಕೆ ಸಸಿಯೊಂದರಲ್ಲಿ ಗರಿ ಮೂಡುವ ಕಾಂಡದ ತುದಿಯಲ್ಲಿ ಹೊಚ್ಚ ಹೊಸ ಹಿಂಗಾರವೇ ಚಿಗುರಿ ಅರಳಿದೆ. ಇದೀಗ ಕಡಲೆ ಕಾಳಿನ ಗಾತ್ರದಲ್ಲಿ ಎಳೆ ಅಡಿಕೆ ಕಾಯಿಯೂ ಬೆಳೆಯುತ್ತಿದೆ.ನೆಟ್ಟ ಒಂದೇ ವರ್ಷಕ್ಕೆ ಅಡಿಕೆ ಸಸಿಯಲ್ಲಿ ಕಂಡು ಬಂದ ಈ ಪ್ರಕೃತಿ ವೈಚಿತ್ರ್ಯದ ಬಗ್ಗೆ ಕುತೂಹಲ ಮೂಡಿದ್ದು ಹಿಂಗಾರದ ಮುಂದಿನ ಬೆಳವಣಿಗೆ ಬಗ್ಗೆ ಕಾತರದಿಂದ ಕಾಯುವಂತಾಗಿದೆ.

ಅಚುಶ್ರೀ ಬಾಂಗೇರು.

Related posts

ಧರ್ಮಸ್ಥಳ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಂದ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ಉಜಿರೆ ಎಸ್. ಡಿ.ಎಂ ಕಾಲೇಜು : ಎನ್ ಎಸ್ ಎಸ್ ಘಟಕಕ್ಕೆ ಸುವರ್ಣ ಸಂಭ್ರಮ: ಅ.5:ಹಿರಿಯ ಸ್ವಯಂಸೇವಕರ ಒಗ್ಗೂಡುವಿಕೆಯಲ್ಲಿ ‘ ಸುವರ್ಣ ಸಮ್ಮಿಲನ ‘ ಕಾರ್ಯಕ್ರಮ

Suddi Udaya

ಬಂಗೇರ ಬ್ರಿಗೇಡ್ ವೇಣೂರು ವ್ಯಾಪ್ತಿಯ ಸಮಿತಿ ರಚನೆ: ಅಧ್ಯಕ್ಷರಾಗಿ ಬಾಲಕೃಷ್ಣ ಭಟ್, ಪ್ರ. ಕಾರ್ಯದರ್ಶಿಯಾಗಿ ಲಕ್ಷ್ಮಣ ಪೂಜಾರಿ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶುದ್ಧಜಲ ಅಭಿಯಾನ: ಡಾ| ಡಿ ವೀರೇಂದ್ರ ಹೆಗ್ಗಡೆಯವರಿಂದ ಕರಪತ್ರ ಬಿಡುಗಡೆ

Suddi Udaya

ಪಡಂಗಡಿ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಎಸ್ ಎಸ್ ಎಲ್ ಸಿ ಮರು ಮೌಲ್ಯಮಾಪನ ಫಲಿತಾಂಶ: ಶ್ರೀಧ.ಮ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya
error: Content is protected !!