September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ವೇಣೂರು: ಪಲ್ಗುಣಿ ನದಿಯಿಂದ ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ: ಆರೋಪಿಗಳ ಸಹಿತ ಪಿಕಪ್‌ ವಾಹನ ವಶ

ವೇಣೂರು :ಇಲ್ಲಿಯ ಪಲ್ಗುಣಿ ನದಿಯಲ್ಲಿ ಅಕ್ರಮವಾಗಿ, ಮರಳು ಕಳ್ಳತನ ಮಾಡಿ ಸಾಗಾಟ ಮಾಡುತ್ತಿದ್ದ ಸ್ಥಳಕ್ಕೆ ವೇಣೂರು ಪೊಲೀಸರು ದಾಳಿ ನಡೆಸಿ ವಾಹನಗಳನ್ನು ಹಾಗೂ ಆರೋಪಿಗಳನ್ನು ವಶಕ್ಕೆ ಪಡೆದ ಘಟನೆ ಎ.7ರಂದು ವರದಿಯಾಗಿದೆ.

ಎ.07 ರಂದು ರಾತ್ರಿ ಬೆಳ್ತಂಗಡಿ ತಾಲೂಕು ವೇಣೂರು ಗ್ರಾಮದ ಪಲ್ಗುಣಿ ನದಿಯಲ್ಲಿ ಅಕ್ರಮವಾಗಿ, ಮರಳು ಕಳ್ಳತನ ಮಾಡಿ ಸಾಗಾಟ ಮಾಡುತ್ತಿರುವುದಾಗಿ ಮಾಹಿತಿ ಬಂದ‌ ಮೇರೆಗೆ, ಶ್ರೀಶೈಲ್‌ ಡಿ ಮುರಗೋಡ್‌ ಪಿ.ಎಸ್‌.ಐ ವೇಣೂರು ಪೊಲೀಸ್ ಠಾಣೆರವರು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ಹೋದಾಗ, ವೇಣೂರು ಡ್ಯಾಂ ಬಳಿ ಪಲ್ಗುಣಿ ನದಿಯಲ್ಲಿ, ಆಪಾದಿತರಾದ ಕರಿಮಣೇಲು ಗ್ರಾಮ, ಬೆಳ್ತಂಗಡಿ ನಿವಾಸಿ ಸತೀಶ್‌ (44) ಮತ್ತು ಮೂಡುಕೋಡಿ ಗ್ರಾಮ, ಬೆಳ್ತಂಗಡಿ ನವೀನ್‌ [35] ಎಂಬವರು, ನದಿಯಿಂದ ಮರಳು ತೆಗೆದು, ಕೆ ಎ 12 5150 ಹಾಗೂ ಕೆ ಎ 19 ಎಎ 4650ನೇ ಪಿಕಪ್‌ ಗಳಲ್ಲಿ ತಲಾ 30 ಬುಟ್ಟಿಗಳಷ್ಟು ಮರಳನ್ನು ತುಂಬಿಸಿರುವುದು ಕಂಡುಬಂದಿರುತ್ತದೆ.

ಆರೋಪಿಗಳು ಸಂಬಂಧಪಟ್ಟ ಇಲಾಖೆಯಿಂದ ಯಾವುದೇ ಅನುಮತಿಯನ್ನು ಪಡೆಯದೇ ಅನಧೀಕೃತವಾಗಿ ನದಿಯಿಂದ ಅಕ್ರಮವಾಗಿ ಮರಳನ್ನು ಕಳವು ಮಾಡಿಕೊಂಡು ಸಾಗಾಟ ಮಾಡುತ್ತಿರುವುದು ಕಂಡು ಬಂದ ಮೇರೆಗೆ, ವಾಹನಗಳನ್ನು ಹಾಗೂ ಆರೋಪಿಗಳನ್ನು ವಶಕ್ಕೆ ಪಡೆದು, ವೇಣೂರು ಠಾಣೆಯಲ್ಲಿ ಅಕ್ರ: 37/2024 ಕಲಂ: 379 ಜೊತೆಗೆ 34 ಐಪಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಕುಕ್ಕೇಡಿ ಸ್ಫೋಟ ಪ್ರಕರಣ: ಮೃತ ಕುಟುಂಬಕ್ಕೆ ಬೆಳ್ತಂಗಡಿ ಕೆಎಸ್ಎಂಸಿಎ ಯಿಂದ ಸಹಾಯ ಹಸ್ತ

Suddi Udaya

ಚಿನ್ನದ ಕರಿಮಣಿ ಸರ ಕಳೆದುಹೋಗಿದೆ: ಸಿಕ್ಕಿದ್ದಲ್ಲಿ ಹಿಂತಿರುಗಿಸುವಂತೆ ಮನವಿ

Suddi Udaya

ಗರ್ಡಾಡಿ: ಸತ್ಯ ಶೋಧಕ ವೇದಿಕೆಯಿಂದ ಹಚ್ಚಾಡಿ ಅಂಗನವಾಡಿ ಕೇಂದ್ರದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟದಲ್ಲಿ ಆಟಿಕೋಲ: ನೂರಾರು ಭಕ್ತರಿಂದ ಶ್ರೀ ದೈವದ ದರ್ಶನ, ವಿಶೇಷ ಸೇವೆ

Suddi Udaya

ಬೆಳಾಲು ಗ್ರಾ.ಪಂ. ವತಿಯಿಂದ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಮನೆ ಮನೆ ಜಾಥಾ ಅಭಿಯಾನ ಮತ್ತು ಸ್ವಚ್ಚತಾ ಕಾರ್ಯಕ್ರಮ

Suddi Udaya

ಯಕ್ಷಭಾರತಿಯಿಂದ ಯಕ್ಷಗಾನ ನಾಟ್ಯ ತರಬೇತಿ ಆರಂಭ

Suddi Udaya
error: Content is protected !!