July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ವೇಣೂರು: ಪಲ್ಗುಣಿ ನದಿಯಿಂದ ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ: ಆರೋಪಿಗಳ ಸಹಿತ ಪಿಕಪ್‌ ವಾಹನ ವಶ

ವೇಣೂರು :ಇಲ್ಲಿಯ ಪಲ್ಗುಣಿ ನದಿಯಲ್ಲಿ ಅಕ್ರಮವಾಗಿ, ಮರಳು ಕಳ್ಳತನ ಮಾಡಿ ಸಾಗಾಟ ಮಾಡುತ್ತಿದ್ದ ಸ್ಥಳಕ್ಕೆ ವೇಣೂರು ಪೊಲೀಸರು ದಾಳಿ ನಡೆಸಿ ವಾಹನಗಳನ್ನು ಹಾಗೂ ಆರೋಪಿಗಳನ್ನು ವಶಕ್ಕೆ ಪಡೆದ ಘಟನೆ ಎ.7ರಂದು ವರದಿಯಾಗಿದೆ.

ಎ.07 ರಂದು ರಾತ್ರಿ ಬೆಳ್ತಂಗಡಿ ತಾಲೂಕು ವೇಣೂರು ಗ್ರಾಮದ ಪಲ್ಗುಣಿ ನದಿಯಲ್ಲಿ ಅಕ್ರಮವಾಗಿ, ಮರಳು ಕಳ್ಳತನ ಮಾಡಿ ಸಾಗಾಟ ಮಾಡುತ್ತಿರುವುದಾಗಿ ಮಾಹಿತಿ ಬಂದ‌ ಮೇರೆಗೆ, ಶ್ರೀಶೈಲ್‌ ಡಿ ಮುರಗೋಡ್‌ ಪಿ.ಎಸ್‌.ಐ ವೇಣೂರು ಪೊಲೀಸ್ ಠಾಣೆರವರು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ಹೋದಾಗ, ವೇಣೂರು ಡ್ಯಾಂ ಬಳಿ ಪಲ್ಗುಣಿ ನದಿಯಲ್ಲಿ, ಆಪಾದಿತರಾದ ಕರಿಮಣೇಲು ಗ್ರಾಮ, ಬೆಳ್ತಂಗಡಿ ನಿವಾಸಿ ಸತೀಶ್‌ (44) ಮತ್ತು ಮೂಡುಕೋಡಿ ಗ್ರಾಮ, ಬೆಳ್ತಂಗಡಿ ನವೀನ್‌ [35] ಎಂಬವರು, ನದಿಯಿಂದ ಮರಳು ತೆಗೆದು, ಕೆ ಎ 12 5150 ಹಾಗೂ ಕೆ ಎ 19 ಎಎ 4650ನೇ ಪಿಕಪ್‌ ಗಳಲ್ಲಿ ತಲಾ 30 ಬುಟ್ಟಿಗಳಷ್ಟು ಮರಳನ್ನು ತುಂಬಿಸಿರುವುದು ಕಂಡುಬಂದಿರುತ್ತದೆ.

ಆರೋಪಿಗಳು ಸಂಬಂಧಪಟ್ಟ ಇಲಾಖೆಯಿಂದ ಯಾವುದೇ ಅನುಮತಿಯನ್ನು ಪಡೆಯದೇ ಅನಧೀಕೃತವಾಗಿ ನದಿಯಿಂದ ಅಕ್ರಮವಾಗಿ ಮರಳನ್ನು ಕಳವು ಮಾಡಿಕೊಂಡು ಸಾಗಾಟ ಮಾಡುತ್ತಿರುವುದು ಕಂಡು ಬಂದ ಮೇರೆಗೆ, ವಾಹನಗಳನ್ನು ಹಾಗೂ ಆರೋಪಿಗಳನ್ನು ವಶಕ್ಕೆ ಪಡೆದು, ವೇಣೂರು ಠಾಣೆಯಲ್ಲಿ ಅಕ್ರ: 37/2024 ಕಲಂ: 379 ಜೊತೆಗೆ 34 ಐಪಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಬಳಂಜ ಬೊಂಟ್ರೋಟ್ಟುಗುತ್ತು ದೈವಸ್ಥಾನದಲ್ಲಿ ವಾರ್ಷಿಕ ಪ್ರತಿಷ್ಠಾ ವರ್ಧಂತಿ ನೇಮೋತ್ಸವ, ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ಸಂತ ಅಂತೋನಿ ಚರ್ಚ್ ನ ಅಸಕ್ತ ಕುಟುಂಬಕ್ಕೆ ಮನೆ ಹಸ್ತಾಂತರ

Suddi Udaya

ಕಕ್ಕಿಂಜೆಯ ವೃದ್ಧ ದಂಪತಿಗಳ ಕೊಲೆ ಪ್ರಕರಣ: ಆರೋಪಿ ಗದಗದ ರಾಜುಗೆ ಜೀವಾವಧಿ ಶಿಕ್ಷೆ ಪ್ರಕಟ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ವನಮಹೋತ್ಸವ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.1.85ಕೋಟಿ ನಿವ್ವಳ ಲಾಭ, ಶೇ.14 ಡಿವಿಡೆಂಟ್ ಘೋಷಣೆ

Suddi Udaya

ಮೃತ ಬಾಲಕ ಸುಮಂತ್ ಮನೆಗೆ ವಿಹಿಂಪ ಪ್ರಮುಖರ ಭೇಟಿ

Suddi Udaya
error: Content is protected !!