23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ವೇಣೂರು: ಪಲ್ಗುಣಿ ನದಿಯಿಂದ ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ: ಆರೋಪಿಗಳ ಸಹಿತ ಪಿಕಪ್‌ ವಾಹನ ವಶ

ವೇಣೂರು :ಇಲ್ಲಿಯ ಪಲ್ಗುಣಿ ನದಿಯಲ್ಲಿ ಅಕ್ರಮವಾಗಿ, ಮರಳು ಕಳ್ಳತನ ಮಾಡಿ ಸಾಗಾಟ ಮಾಡುತ್ತಿದ್ದ ಸ್ಥಳಕ್ಕೆ ವೇಣೂರು ಪೊಲೀಸರು ದಾಳಿ ನಡೆಸಿ ವಾಹನಗಳನ್ನು ಹಾಗೂ ಆರೋಪಿಗಳನ್ನು ವಶಕ್ಕೆ ಪಡೆದ ಘಟನೆ ಎ.7ರಂದು ವರದಿಯಾಗಿದೆ.

ಎ.07 ರಂದು ರಾತ್ರಿ ಬೆಳ್ತಂಗಡಿ ತಾಲೂಕು ವೇಣೂರು ಗ್ರಾಮದ ಪಲ್ಗುಣಿ ನದಿಯಲ್ಲಿ ಅಕ್ರಮವಾಗಿ, ಮರಳು ಕಳ್ಳತನ ಮಾಡಿ ಸಾಗಾಟ ಮಾಡುತ್ತಿರುವುದಾಗಿ ಮಾಹಿತಿ ಬಂದ‌ ಮೇರೆಗೆ, ಶ್ರೀಶೈಲ್‌ ಡಿ ಮುರಗೋಡ್‌ ಪಿ.ಎಸ್‌.ಐ ವೇಣೂರು ಪೊಲೀಸ್ ಠಾಣೆರವರು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ಹೋದಾಗ, ವೇಣೂರು ಡ್ಯಾಂ ಬಳಿ ಪಲ್ಗುಣಿ ನದಿಯಲ್ಲಿ, ಆಪಾದಿತರಾದ ಕರಿಮಣೇಲು ಗ್ರಾಮ, ಬೆಳ್ತಂಗಡಿ ನಿವಾಸಿ ಸತೀಶ್‌ (44) ಮತ್ತು ಮೂಡುಕೋಡಿ ಗ್ರಾಮ, ಬೆಳ್ತಂಗಡಿ ನವೀನ್‌ [35] ಎಂಬವರು, ನದಿಯಿಂದ ಮರಳು ತೆಗೆದು, ಕೆ ಎ 12 5150 ಹಾಗೂ ಕೆ ಎ 19 ಎಎ 4650ನೇ ಪಿಕಪ್‌ ಗಳಲ್ಲಿ ತಲಾ 30 ಬುಟ್ಟಿಗಳಷ್ಟು ಮರಳನ್ನು ತುಂಬಿಸಿರುವುದು ಕಂಡುಬಂದಿರುತ್ತದೆ.

ಆರೋಪಿಗಳು ಸಂಬಂಧಪಟ್ಟ ಇಲಾಖೆಯಿಂದ ಯಾವುದೇ ಅನುಮತಿಯನ್ನು ಪಡೆಯದೇ ಅನಧೀಕೃತವಾಗಿ ನದಿಯಿಂದ ಅಕ್ರಮವಾಗಿ ಮರಳನ್ನು ಕಳವು ಮಾಡಿಕೊಂಡು ಸಾಗಾಟ ಮಾಡುತ್ತಿರುವುದು ಕಂಡು ಬಂದ ಮೇರೆಗೆ, ವಾಹನಗಳನ್ನು ಹಾಗೂ ಆರೋಪಿಗಳನ್ನು ವಶಕ್ಕೆ ಪಡೆದು, ವೇಣೂರು ಠಾಣೆಯಲ್ಲಿ ಅಕ್ರ: 37/2024 ಕಲಂ: 379 ಜೊತೆಗೆ 34 ಐಪಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಕಳೆಂಜ ಗ್ರಾ.ಪಂ. ಹಾಗೂ ಜನನಿ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ

Suddi Udaya

ಪತ್ನಿಯನ್ನು ಬಸ್ಸು ಹತ್ತಿಸಿ, ಸ್ಕೂಟಿಯಲ್ಲಿ ಬರುತ್ತೇನೆಂದು ಹೇಳಿದ ಪತಿ: ಹೆಬ್ಬರಿಗೆ ಸಮೀಪ ಅನುಮಾನಾಸ್ಪದವಾಗಿ ಶವ ಪತ್ತೆ:

Suddi Udaya

ಖ್ಯಾತ ಕಲಾವಿದ ಗಣೇಶ್ ಗುಂಪಲಾಜೆರವರಿಗೆ ಗಣೇಶೋತ್ಸವದ ಗಣಪತಿ ರಚನೆಯಲ್ಲಿ ಪ್ರಥಮ ಸ್ಥಾನ

Suddi Udaya

26 ನೇ ವರ್ಷದ ಭಜನಾ ತರಭೇತಿ ಕಮ್ಮಟದ ಸಮಾರೋಪ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಿ ಭಾವದ ಭಜನೆಯ ಝೇಂಕಾರ

Suddi Udaya

ಚಾರ್ಮಾಡಿ : ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಗದೇವರಿಗೆ ವಿಶೇಷ ಪೂಜೆ

Suddi Udaya

ಇಂದಬೆಟ್ಟು: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರಿಂದ ಕಾರ್ಯಕರ್ತರೊಂದಿಗೆ ಸಮಾಲೋಚನೆ ಸಭೆ

Suddi Udaya
error: Content is protected !!