30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಹಾಡುಹಗಲೇ ಚಾರ್ಮಾಡಿ ಘಾಟಿಯಲ್ಲಿ ಸಂಚರಿಸಿ ಆತಂಕ ಸೃಷ್ಟಿದ ಕಾಡಾನೆ: ಬೈಕ್ ಸವಾರ ಅಪಾಯದಿಂದ ಪಾರು

ಪೋಟೋ ಚಾರ್ಮಾಡಿ: ಹಾಡುಹಗಲೇ ಚಾರ್ಮಾಡಿ ಘಾಟಿಯ ಒಂಬತ್ತನೇ ತಿರುವಿನ ಸಮೀಪ ಒಂಟಿ ಸಲಗ ಓಡಾಟ ನಡೆಸಿರುವುದು ಎ.8 ಸೋಮವಾರ ಮಧ್ಯಾಹ್ನ 12ರ ಸುಮಾರಿಗೆ ಕಂಡು ಬಂದಿದ್ದು, ವಾಹನ ಚಾಲಕರಲ್ಲಿ ಆತಂಕ ಸೃಷ್ಟಿಸಿತು.

ಕಳೆದ ಸುಮಾರು ಎರಡು ತಿಂಗಳ ಹಿಂದೆಯೂ ಕಾಡಾನೆ ನಾಲ್ಕಾರು ಬಾರಿ ಘಾಟಿ ಪರಿಸರದಲ್ಲಿ ಹಗಲಲ್ಲೆ ಸಂಚರಿಸಿತ್ತು. ಸೋಮವಾರ ನೆರಿಯದ ಬಾಂಜಾರು ಮಲೆ ಕಡೆಯಿಂದ ಆಗಮಿಸಿದ ಕಾಡಾನೆ ಕೆಲವು ಹೊತ್ತು ರಸ್ತೆ ಬದಿಯಲ್ಲಿ ನಿಂತುಕೊಂಡು ಬಳಿಕ ಅಲ್ಲಿಂದ ತೆರಳಿ ರಸ್ತೆಯಲ್ಲಿ ಒಂದಿಷ್ಟು ಹೊತ್ತು ಸಂಚರಿಸಿ ಮತ್ತೆ ನೆರಿಯ ಕಾಡಿನ ಕಡೆಗೆ ತೆರಳಿದೆ. ಪಾರಾದ ಬೈಕ್ ಸವಾರ:ರಸ್ತೆ ಬದಿ ಆನೆಯನ್ನು ಗಮನಿಸಿದ ವಾಹನ ಸವಾರರು ಆನೆ ದಾಟಿ ಹೋಗಲು ಅನುಕೂಲವಾಗುವಂತೆ ಇಕ್ಕೆಲಗಳಲ್ಲೂ ವಾಹನಗಳನ್ನು ನಿಲ್ಲಿಸಿದ್ದರು.ಆದರೆ ರಸ್ತೆಯ ಒಂದು ಬದಿಯಲ್ಲಿ ವಾಹನಗಳಿಲ್ಲದ ಕಾರಣ ಆನೆ ಇರುವುದನ್ನು ತಿಳಿಯದ ಬೈಕ್ ಸವಾರರೊಬ್ಬ ಆನೆ ದಾಟುತ್ತಿರುವ ಸಮಯದಲ್ಲೇ ಸಂಚರಿಸಿದ್ದು ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾನೆ. ಉಳಿದ ವಾಹನ ಸವಾರರು ಆನೆ ಇರುವುದರ ಬಗ್ಗೆ ಆತನ ಗಮನಕ್ಕೆ ತಂದರೂ, ಅದನ್ನು ಲೆಕ್ಕಿಸದೆ ಆತ ಸಂಚಾರ ನಡೆಸಿದ್ದಾನೆ.

ಈ ದೃಶ್ಯವನ್ನು ಪ್ರಯಾಣಿಕರು ವಿಡಿಯೋ ಚಿತ್ರೀಕರಣ ಮಾಡಿದ್ದು,ಅದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಚಾರ್ಮಾಡಿ ಕಡೆಗೆ ಬಂದ ಆನೆ: ಶನಿವಾರ ರಾತ್ರಿ ಕಾಡಾನೆ ಕಲ್ಮಂಜದ ತೋಟವೊಂದರಲ್ಲಿ ದಾಂಧಲೆ ನಡೆಸಿದ್ದು ಬಳಿಕ ಭಾನುವಾರ ರಾತ್ರಿ ಚಾರ್ಮಾಡಿ ಬಳಿ ಕಂಡುಬಂದಿದ್ದು ಸ್ಥಳೀಯರು ಹಾಗು ಇಲಾಖೆಯವರು ಸೇರಿ ಆನೆಯನ್ನು ಕಾಡಿಗಟ್ಟಿದ್ದರು. ಈ ಸಮಯ ಅದು ನೆರಿಯ ಕಾಡಿನ ಓಡಿತ್ತು. ಅದರ ಬಳಿಕ ಸೋಮವಾರ ನೆರಿಯದ ಬಾಂಜಾರು ಮಲೆ ಮೂಲಕ ಚಾರ್ಮಾಡಿ ಘಾಟಿಗೆ ತೆರಳಿರುವ ಶಂಕೆ ವ್ಯಕ್ತವಾಗಿದೆ. ಕಲ್ಮಂಜದಲ್ಲಿ ದಾಂಧಲೆ ನಡೆಸಿದ ಆನೆ ಚಾರ್ಮಾಡಿ ಘಾಟಿಯಲ್ಲಿ ಪ್ರತ್ಯಕ್ಷವಾಗಿರುವ ಅನುಮಾನಗಳು ಮೂಡಿವೆ.

ಪ್ರಸ್ತುತ ಕಾಡಿನ ಕೆರೆಗಳು, ನೇತ್ರಾವತಿ ನದಿ ಸಂಪೂರ್ಣ ಬತ್ತಿ ಹೋಗಿದ್ದು, ಕೇವಲ ಮೃತ್ಯುಂಜಯ ನದಿಯಲ್ಲಿ ಮಾತ್ರ ನೀರು ಹರಿಯುತ್ತಿದ್ದು, ಈ ನದಿ ಹರಿಯುವ ನೆರಿಯ,ಚಾರ್ಮಾಡಿ ಈ ಭಾಗದಲ್ಲಿ ಕಾಡಾನೆ ಆಶ್ರಯ ಪಡೆದಿರುವ ಸಾಧ್ಯತೆ ಇದೆ.

Related posts

ನಡ ಮೂಡಾಯಿಬೆಟ್ಟು ಹಂದಿ ಸಾಕಾಣಾ ಕೇಂದ್ರದಿಂದ ಹಂದಿಯನ್ನು ಎಳೆದೊಯ್ದ ಚಿರತೆ

Suddi Udaya

ಸಿರಿ ಸಂಸ್ಥೆಯಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ಹಾಗೂ ಸಿರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶದ ಪೂರ್ವಭಾವಿ ಸಭೆ

Suddi Udaya

ದೀಕ್ಷಾನ್ವಯ : ಎಸ್.ಡಿ.ಎಂ. ಬಿ.ಎಡ್ ಕಾಲೇಜಿನ ಪ್ರಾರಂಭೋತ್ಸವ

Suddi Udaya

ಉಜಿರೆ ರೋಡ್ ಶೋ ಹಿನ್ನೆಲೆಯಲ್ಲಿ ಮಹಿಳೆಯರಿಗೆ ಸೀರೆ ವಿತರಣೆ ಆರೋಪ: ಸೂಕ್ತ ತನಿಖೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ದೂರು : ಲೋಕೇಶ್ವರಿ ವಿನಯಚಂದ್ರ

Suddi Udaya

ಗಾಂಧಿ ಗ್ರಾಮ ಪ್ರಶಸ್ತಿ ಪುರಸ್ಕೃತ ಬಳಂಜ ಗ್ರಾಮ ಪಂಚಾಯತ್ ಗೆ ಪ್ರತಿಷ್ಠಿತ ಶಿವರಾಮ ಕಾರಂತ ಪ್ರಶಸ್ತಿ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರವರಿಂದ ಪ್ರಶಸ್ತಿ ಪ್ರದಾನ

Suddi Udaya
error: Content is protected !!