September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಇಂದಿನಿಂದ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಠಬಂಧ ಬ್ರಹ್ಮಕಲಶೋತ್ಸವ: ಸಂಜೆ ಹೊರೆಕಾಣಿಕೆ ವೈಭವ ಹಾಗೂ ಒಂದು ಸಾವಿರ ಅಧಿಕ ಮಕ್ಕಳಿಂದ ನೃತ್ಯ ಭಜನೆ

ಬೆಳ್ತಂಗಡಿ: ಇತಿಹಾಸ ಪ್ರಸಿದ್ದ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಎ.8ರಿಂದ ಎ.17ರವರೆಗೆ ವೇದಮೂರ್ತಿ ಉದಯ ಪಾಂಗಣ್ಣಾಯರವರ ನೇತೃತ್ವದಲ್ಲಿ ವಿಜೃಂಭಣೆಯ ಅಷ್ಠಬಂಧ ಬ್ರಹ್ಮಕಲಶೋತ್ಸವ ನೆರವೇರಲಿದೆ.

ಈಗಾಗಲೇ ಸಂಭ್ರಮದ ಬ್ರಹ್ಮಕಲಶೋತ್ಸವಕ್ಕೆ ಸಿದ್ಧತೆಗಳು ಪೂರ್ಣಗೊಂಡಿದ್ದು ಇಂದು ಸಂಜೆ 4ಗಂಟೆಗೆ ಹೊರೆಕಾಣಿಕೆಯ ಭವ್ಯ ಮೆರವಣಿಗೆಯು ದೇವಸ್ಥಾನಕ್ಕೆ ಸಂಬಂಧಪಟ್ಟ ಪಡಂಗಡಿ, ಕುವೆಟ್ಟು, ಸೋಣಂದೂರು, ಓಡಿಲ್ನಾಳ, ಗ್ರಾಮದಿಂದ ಹಸಿರುವಾಣಿ ಹೊರೆ ಕಾಣಿಕೆ ಮದ್ದಡ್ಕ ಶ್ರೀ ರಾಮ ಭಜನಾ ಮಂದಿರಕ್ಕೆ ಬಂದು ಅಲ್ಲಿಂದ ಸುಮಾರು ಒಂದು ಸಾವಿರಕ್ಕಿಂತಲೂ ಅಧಿಕ ಮಕ್ಕಳಿಂದ ನೃತ್ಯ ಭಜನೆಯ ಮೂಲಕ ಹೊರೆಕಾಣಿಕೆ ಮೆರವಣಿಗೆ ನಡೆಯಲಿದೆ. ಶ್ರೀಮತಿ ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಕುಟುಂಬಸ್ಥರು ಕೊಡುಗೆ ನೀಡಿದ ನೂತನ ಮಹಾದ್ವಾರವನ್ನು ಮಾತೃಶ್ರೀ ಶ್ರೀಮತಿ ಕಾಶಿ ಶೆಟ್ಟಿ ನವಶಕ್ತಿ ಉದ್ಘಾಟಿಸಲಿದ್ದಾರೆ.

5 ಗಂಟೆಗೆ ಉಗ್ರಾಣ ಮಹೂರ್ತ ಉದ್ಘಾಟನೆಯನ್ನು ಶಿವಶಂಕರ್ ನಾಯಕ್ ನೆರವೇರಿಸಲಿದ್ದಾರೆ. ರಾತ್ರಿ 7.30 ರಿಂದ ಧಾರ್ಮಿಕ ಸಭಾ ಕಾರ್ಯಕ್ರಮವು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಶಶಿಧರ್ ಶೆಟ್ಟಿ ನವಶಕ್ತಿ ಬರೋಡ ಸಭಾಧ್ಯಕ್ಷತೆಯಲ್ಲಿ ನಡೆಯಲಿದೆ. ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಶ್ರೀ ಧಾಮ ಮಾಣಿಲ ಆಶೀರ್ವಚನ ನೀಡಲಿದ್ದಾರೆ. ಸಭಾ ಕಾರ್ಯಕ್ರಮವನ್ನು ಅಳದಂಗಡಿ ಅರಮನೆಯ ಡಾ. ಪದ್ಮಪ್ರಸಾದ್ ಅಜಿಲರು ಉದ್ಘಾಟಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಪ್ರತಾಪ್ ಸಿಂಹ ನಾಯಕ್, ಹರೀಶ್ ಕುಮಾ‌ರ್, ಪ್ರಭಾಕರ ಬಂಗೇರ, ತಹಶೀಲ್ದಾರ್ ಪ್ರಥ್ವಿಸಾನಿಕಂ, ವಿಜಯ ಶೆಟ್ಟಿ ಪಣಕಜೆ ಮುಂಬಾಯಿ, ಸುಮಂತ್ ಕುಮಾರ್ ಜೈನ್, ಮೋಹನ್ ಕುಮಾರ್ ಲಕ್ಷ್ಮೀ ಗ್ರೂಪ್ಸ್ ಉಜಿರೆ, ಪ್ರಶಾಂತ್ ಸುವರ್ಣ, ಶೇಖ‌ರ್ ಶೆಟ್ಟಿ ಉದ್ಯಮಿಗಳು ಮಯೂರ ಗುರುವಾಯನಕೆರೆ, ಪುನೀತ್ ಕುಮಾ‌ರ್, ಅತುಲ್ ಬಂಗೇರ ಹಲೇಜಿ, ದಿನೇಶ್ ಶೆಟ್ಟಿ ಉದ್ಯಮಿ ಪುಣೆ, ಬಸವನ ಗೌಡ ಮಾನ್ವಿ ಬಸವೇಶ್ವರ ರೈಸ್ ಮಿಲ್ ರಾಯಚೂರು, ಬಾಲಕೃಷ್ಣ ಶೆಟ್ಟಿ ಕಾರ್ಯಾಣ, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಚೈತೇಶ್ ಇಳಂತಿಲ ಭಾಗವಹಿಸಲಿದ್ದಾರೆ. ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.

Related posts

ಪುಂಜಾಲಕಟ್ಟೆ ಕಬಡ್ಡಿ ಪಂದ್ಯಾಟ: ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆಯ ಬಾಲಕರ ತಂಡಕ್ಕೆ ಪ್ರಶಸ್ತಿ

Suddi Udaya

ಜಾನಪದ ಕಡಲೋತ್ಸವ: ಜಿಲ್ಲಾ ಪರಿಷತ್ ಪ್ರಶಸ್ತಿಗೆ ಕೊಕ್ಕಡದ ಕಿಟ್ಟ ಮಲೆಕುಡಿಯ ರವರು ಆಯ್ಕೆ

Suddi Udaya

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ವತಿಯಿಂದ ನಮ್ಮ ಮಣ್ಣು ನಮ್ಮ ದೇಶ ಕಾರ್ಯಕ್ರಮ

Suddi Udaya

ಸಿಯೋನ್ ಆಶ್ರಮದಲ್ಲಿ ಉಚಿತ ಶ್ರವಣದೋಷ ತಪಾಸಣಾ ಶಿಬಿರ

Suddi Udaya

ನಾರಾವಿ: ಸಂತ ಅಂತೋನಿ ಪ.ಪೂ. ಕಾಲೇಜಿನ ಪ್ರಥಮ ಪ.ಪೂ. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮತ್ತು ಸ್ವಾಗತ ಕಾರ್ಯಕ್ರಮ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬಕ್ರೀದ್ ಆಚರಣೆ

Suddi Udaya
error: Content is protected !!