ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎ.10: ಧರ್ಮಸ್ಥಳ ಗೀತ ನೃತ್ಯಾಲಯ ನೃತ್ಯ ತರಬೇತಿ ಕೇಂದ್ರ ಪ್ರಸ್ತುತಪಡಿಸುವ “ನೃತ್ಯ ರಶ್ಮಿ ನೃತ್ಯೋತ್ಸವ ಹಾಗೂ ಗುರುವಂದನೆ” ಮತ್ತು ಪ್ರಥಮ ವರ್ಷದ ಸಂಭ್ರಮ

ಧರ್ಮಸ್ಥಳ: ಇಲ್ಲಿಯ ಜೋಡುಸ್ಥಾನ ಗೀತ ನೃತ್ಯಾಲಯ ನೃತ್ಯ ತರಬೇತಿ ಕೇಂದ್ರ ಪ್ರಸ್ತುತಪಡಿಸುವ “ನೃತ್ಯ ರಶ್ಮಿ ನೃತ್ಯೋತ್ಸವ ಹಾಗೂ ಗುರುವಂದನೆ” ಪ್ರಥಮ ವರ್ಷದ ಸಂಭ್ರಮವು ಎ.10 ರಂದು ಸಂಜೆ 5.45 ರಿಂದ ರಾತ್ರಿ 9.00 ರವರೆಗೆ ಧರ್ಮಸ್ಥಳ ಮಹೋತ್ಸವ ಸಭಾಭವನದಲ್ಲಿ ನಡೆಯಲಿದೆ.

ಕಾರ್ಯಕ್ರಮದ ದೀಪ ಪ್ರಜ್ವಲನೆಯನ್ನು ಮಂಗಳೂರು ಕದ್ರಿ ನೃತ್ಯ ಭಾರತಿ ಕಲಾಶ್ರೀ ಗುರು ಶ್ರೀಮತಿ ಗೀತಾ ಸರಳಾಯ ನೆರವೇರಿಸಲಿದ್ದಾರೆ.

ಅಧ್ಯಕ್ಷತೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಮಾತೃಶ್ರೀ ಹೇಮಾವತಿ ವೀ. ಹೆಗ್ಗಡೆಯವರು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಡಿ. ಹರ್ಷೇಂದ್ರ ಕುಮಾರ್, ಮಂಗಳೂರು ಕದ್ರಿ ನೃತ್ಯ ಭಾರತಿ ವಿದುಷಿ ರಶ್ಮಿ ಚಿದಾನಂದ್ ಭಾಗವಹಿಸಲಿದ್ದಾರೆ.

ಉಜಿರೆ ವಾಣಿಶ್ರೀ ನೃತ್ಯ ಕೇಂದ್ರದ ಶ್ರೀಮತಿ ಶಾಂತ ಪಡುವೆಟ್ನಾಯ ರಿಗೆ ನೃತ್ಯ ದೀಪ ಪ್ರಶಸ್ತಿ ಪ್ರದಾನ ನಡೆಯಲಿದೆಯೆಂದು ಅದ್ಯಕ್ಷೆ ವಿದುಷಿ ಕು.ಚೈತ್ರಾ ಎಮ್,ಉಪಾಧ್ಯಕ್ಷೆ ಮೀನಾಕ್ಷಿ ಜಿ ಭಟ್,ಗೌರವ ಸಲಹೆಗಾರ ಸುಬ್ರಹ್ಮಣ್ಯ ಪ್ರಸಾದ್ ತಿಳಿಸಿದ್ದಾರೆ.

Related posts

ಮ್ಯಾಂಗೋ ಜ್ಯೂಸ್‌ನಲ್ಲಿ ಇಲಿ ಪಾಷಾಣ ಸೇವಿಸಿದ್ದ ಯುವಕ ಮೊಹಮ್ಮದ್ ಫೈಝಲ್‌ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ಮಚ್ಚಿನ ಅಂಗನವಾಡಿ ಕೇಂದ್ರದಲ್ಲಿ ಪರಿಸರ ದಿನಾಚರಣೆ

Suddi Udaya

ಕುವೆಟ್ಟು : ಪಯ್ಯೊಟ್ಟು ನಿವಾಸಿ ಸೀತಾರಾಮ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ : ಅಕ್ರಮ ಮರಳು ಅಡ್ಡೆ ಮೇಲೆ ಬೆಳ್ತಂಗಡಿ ಪೊಲೀಸ್ ದಾಳಿ

Suddi Udaya

ಯುಟ್ಯೂಬರ್ ಸಮೀರ್ ಎಂ.ಡಿಗೆ ಮಂಗಳೂರಿನ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು

Suddi Udaya

ಟೀಂ ಅಭಯಹಸ್ತ ವತಿಯಿಂದ ಸರ್ಕಾರಿ ಶಾಲೆಗಳಲ್ಲಿ ಸ್ಪರ್ಧಾ ಕಾರ್ಯಕ್ರಮಗಳ ಆಯೋಜನೆ

Suddi Udaya
error: Content is protected !!