April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಎ.13,ವಿಷು ಕಣಿ ಆಚರಣಾ ಸಮಿತಿಯಿಂದ ಕೇರಳ ಸಂಪ್ರಾದಾಯಿಕ ವಿಷು ಕಣಿ ಆಚರಣೆ: ಕೇರಳ ಚೆಂಡೆ ಪ್ರದರ್ಶನ, ಪೂಕಳಂ, ಮನೋರಂಜನಾ ಕಾರ್ಯಕ್ರಮ, 32 ಬಗೆಯ ಉಟೋಪಚಾರ

ಬೆಳ್ತಂಗಡಿ:ವಿಷು ಕಣಿ ಆಚರಣಾ ಸಮಿತಿಯಿಂದ 3 ನೇ ವರ್ಷದ ಕೇರಳ ಸಾಂಪ್ರದಾಯಿಕ ವಿಷು ಕಣಿ ಆಚರಣೆಯು ಉಜಿರೆ ಶ್ರೀ ಕೃಷ್ಣಾನುಗ್ರಹ ಸಭಾಭವನದಲ್ಲಿ ಎ.13 ರಂದು ನಡೆಯಲಿದೆ.ಕಳೆದ ಎರಡು ವರ್ಷದ ಹಿಂದೆ ಉಜಿರೆಯಲ್ಲಿ ನಡೆದ ವಿಷು ಕಣಿ ಆಚರಣೆಯಲ್ಲಿ ಬೆಳ್ತಂಗಡಿ ತಾಲೂಕಿನ ಸಾವಿರಾರು ಜನರು ಭಾಗವಹಿಸಿದ್ದರು‌.ವಿಷು ಹಬ್ಬ ಕೃಷಿ ಪ್ರಧಾನ ಹಬ್ಬವಾಗಿದ್ದು ಮನೆಮಂದಿ ವಿಷು ಕಣಿ ಇಟ್ಟು ಬೆಳಗ್ಗೆ ಬೇಗ ಎದ್ದು ಹೆಚ್ಚಿನ ಮನೆ, ದೇವಸ್ಥಾನ, ದೈವಸ್ಥಾನಗಳಲ್ಲಿ ಪೂಜೆ ನಡೆಸುತ್ತಾರೆ.ಬಾಳೆಹಣ್ಣು, ಎಳನೀರು, ಹಲಸಿನ ಹಣ್ಣು, ಕನ್ನಡಿ, ತಂಬಿಗೆಯಲ್ಲಿ ನೀರು, ಎಲೆಅಡಿಕೆ, ಹಣ, ಕುಂಕುಮ,ಚಿನ್ನದ ಒಡವೆ ಮೊದಲಾದ ಸುವಸ್ತುಗಳನ್ನು ಜೋಡಿಸಿ ವಿಷು ಕಣಿ ಮಾಡಲಾಗುತ್ತದೆ.ಈ ಸಂದರ್ಭ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ-ಪುನಸ್ಕಾರ ನಡೆಯುತ್ತದೆ. ಸಾವಿರಾರು ಭಕ್ತರು ಪಾಲ್ಗೊಂಡು ಶ್ರೀ ದೇವರ ದರುಶನ ಪಡೆದು ಅನ್ನಪ್ರಸಾದ ಸ್ವೀಕರಿಸುತ್ತಾರೆ.ಬಹುತೇಕ ಮನೆಗಳಲ್ಲಿ ವಿಷುಕಣಿ ಇಟ್ಟು ಕುಟುಂಬದ ಸದಸ್ಯರೆಲ್ಲರೂ ಜತೆ ಸೇರಿ ಹಬ್ಬ ಆಚರಿಸಿ ಸಿಹಿಯೂಟ ಮಾಡುತ್ತಾರೆ. ಈ ಬಾರಿ ಬೆಳ್ತಂಗಡಿ ತಾಲೂಕು ವಿಷು ಕಣಿ ಆಚರಣಾ ಸಮಿತಿ ವಿನೂತನವಾಗಿ ಹಬ್ಬವನ್ನು ಆಚರಿಸಲು ನಿರ್ದರಿಸಿದೆ. ವಿಶೇಷ ಕೇರಳ ಚೆಂಡೆ ಪ್ರದರ್ಶನ,ಪೂಕಳಂ,ಕೇರಳದ ನುರಿತ ಕಲಾವಿದರಿಂದ ವಿವಿಧ ಮನೋರಂಜನಾ ಕಾರ್ಯಕ್ರಮ, ಕೇರಳ ಸಾಂಪ್ರಾದಾಯಿಕ ಶೈಲಿಯ 32 ಬಗೆಯ ಉಟೋಪಚಾರ ಇದೆಯೆಂದು ಕಾರ್ಯಕ್ರಮ ಆಯೋಜಕರು ತಿಳಿಸಿದ್ದಾರೆ.

Related posts

ಕೊಕ್ಕಡ ಕಪಿಲಾ ಜೇಸಿಗೆ ವಲಯ ಉಪಾಧ್ಯಕ್ಷರ ಭೇಟಿ

Suddi Udaya

ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ಕರಿಮಣಿ ಉತ್ಸವ: 500 ವೆರೈಟಿಯ ಕರಿಮಣಿ ಉತ್ಸವ ಇನ್ನೂ ಕೇವಲ 6 ದಿನ ಬಾಕಿ

Suddi Udaya

ಮರೋಡಿ: ಸಾರ್ವಜನಿಕ ಸೇವೆಗಾಗಿ ದಾನಿಗಳಿಂದ ₹ 8 ಲಕ್ಷ ವೆಚ್ಚದಲ್ಲಿ ಆಂಬುಲೆನ್ಸ್‌ ವಾಹನ ಲೋಕಾರ್ಪಣೆ

Suddi Udaya

ಚಂದ್ರಯಾನ -3 ಯಶಸ್ವಿಯಾಗಲೆಂದು ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ

Suddi Udaya

ಲಾಯಿಲ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂಘ ಉದ್ಘಾಟನೆ

Suddi Udaya

ವೇಣೂರು : ಭಗವಾನ್ ಬಾಹುಬಲಿ ಸ್ವಾಮಿ ಮೂರ್ತಿಗೆ ಹೆಲಿಕಾಪ್ಟರ್ ಮೂಲಕ ಪುಪ್ಷವ್ರಷ್ಟಿ

Suddi Udaya
error: Content is protected !!