23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಎ.13,ವಿಷು ಕಣಿ ಆಚರಣಾ ಸಮಿತಿಯಿಂದ ಕೇರಳ ಸಂಪ್ರಾದಾಯಿಕ ವಿಷು ಕಣಿ ಆಚರಣೆ: ಕೇರಳ ಚೆಂಡೆ ಪ್ರದರ್ಶನ, ಪೂಕಳಂ, ಮನೋರಂಜನಾ ಕಾರ್ಯಕ್ರಮ, 32 ಬಗೆಯ ಉಟೋಪಚಾರ

ಬೆಳ್ತಂಗಡಿ:ವಿಷು ಕಣಿ ಆಚರಣಾ ಸಮಿತಿಯಿಂದ 3 ನೇ ವರ್ಷದ ಕೇರಳ ಸಾಂಪ್ರದಾಯಿಕ ವಿಷು ಕಣಿ ಆಚರಣೆಯು ಉಜಿರೆ ಶ್ರೀ ಕೃಷ್ಣಾನುಗ್ರಹ ಸಭಾಭವನದಲ್ಲಿ ಎ.13 ರಂದು ನಡೆಯಲಿದೆ.ಕಳೆದ ಎರಡು ವರ್ಷದ ಹಿಂದೆ ಉಜಿರೆಯಲ್ಲಿ ನಡೆದ ವಿಷು ಕಣಿ ಆಚರಣೆಯಲ್ಲಿ ಬೆಳ್ತಂಗಡಿ ತಾಲೂಕಿನ ಸಾವಿರಾರು ಜನರು ಭಾಗವಹಿಸಿದ್ದರು‌.ವಿಷು ಹಬ್ಬ ಕೃಷಿ ಪ್ರಧಾನ ಹಬ್ಬವಾಗಿದ್ದು ಮನೆಮಂದಿ ವಿಷು ಕಣಿ ಇಟ್ಟು ಬೆಳಗ್ಗೆ ಬೇಗ ಎದ್ದು ಹೆಚ್ಚಿನ ಮನೆ, ದೇವಸ್ಥಾನ, ದೈವಸ್ಥಾನಗಳಲ್ಲಿ ಪೂಜೆ ನಡೆಸುತ್ತಾರೆ.ಬಾಳೆಹಣ್ಣು, ಎಳನೀರು, ಹಲಸಿನ ಹಣ್ಣು, ಕನ್ನಡಿ, ತಂಬಿಗೆಯಲ್ಲಿ ನೀರು, ಎಲೆಅಡಿಕೆ, ಹಣ, ಕುಂಕುಮ,ಚಿನ್ನದ ಒಡವೆ ಮೊದಲಾದ ಸುವಸ್ತುಗಳನ್ನು ಜೋಡಿಸಿ ವಿಷು ಕಣಿ ಮಾಡಲಾಗುತ್ತದೆ.ಈ ಸಂದರ್ಭ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ-ಪುನಸ್ಕಾರ ನಡೆಯುತ್ತದೆ. ಸಾವಿರಾರು ಭಕ್ತರು ಪಾಲ್ಗೊಂಡು ಶ್ರೀ ದೇವರ ದರುಶನ ಪಡೆದು ಅನ್ನಪ್ರಸಾದ ಸ್ವೀಕರಿಸುತ್ತಾರೆ.ಬಹುತೇಕ ಮನೆಗಳಲ್ಲಿ ವಿಷುಕಣಿ ಇಟ್ಟು ಕುಟುಂಬದ ಸದಸ್ಯರೆಲ್ಲರೂ ಜತೆ ಸೇರಿ ಹಬ್ಬ ಆಚರಿಸಿ ಸಿಹಿಯೂಟ ಮಾಡುತ್ತಾರೆ. ಈ ಬಾರಿ ಬೆಳ್ತಂಗಡಿ ತಾಲೂಕು ವಿಷು ಕಣಿ ಆಚರಣಾ ಸಮಿತಿ ವಿನೂತನವಾಗಿ ಹಬ್ಬವನ್ನು ಆಚರಿಸಲು ನಿರ್ದರಿಸಿದೆ. ವಿಶೇಷ ಕೇರಳ ಚೆಂಡೆ ಪ್ರದರ್ಶನ,ಪೂಕಳಂ,ಕೇರಳದ ನುರಿತ ಕಲಾವಿದರಿಂದ ವಿವಿಧ ಮನೋರಂಜನಾ ಕಾರ್ಯಕ್ರಮ, ಕೇರಳ ಸಾಂಪ್ರಾದಾಯಿಕ ಶೈಲಿಯ 32 ಬಗೆಯ ಉಟೋಪಚಾರ ಇದೆಯೆಂದು ಕಾರ್ಯಕ್ರಮ ಆಯೋಜಕರು ತಿಳಿಸಿದ್ದಾರೆ.

Related posts

ಮೇ. 25ರಿಂದ ಮೆಟ್ರಿಕ್ ನಂತರ ಹಾಗೂ ಪೂರ್ವದ ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಸಲ್ಲಿಕೆ

Suddi Udaya

ಪಡಂಗಡಿ ಯುವಕ, ಎಲೆಕ್ಟ್ರಿಷಿಯನ್ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಎಸ್.ಎಸ್.ಎಲ್.ಸಿ -ಪಿಯುಸಿ ನಂತರ ಭವಿಷ್ಯದ ಸರಿ ದಾರಿ – ಎ.26: ಅನುಗ್ರಹ ಟ್ರೈನಿಂಗ್ ಕಾಲೇಜ್ ನಲ್ಲಿ ಉಚಿತ ಮಾರ್ಗದರ್ಶನ ಕಾರ್ಯಾಗಾರ

Suddi Udaya

ಕನ್ಯಾಡಿ ಸೇವಾಭಾರತಿಯಿಂದ ದೀಪಾವಳಿ ಸ್ನೇಹ ಮಿಲನ – 2025

Suddi Udaya

ಲಾಯಿಲ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂಘ ಉದ್ಘಾಟನೆ

Suddi Udaya

ಗುರಿಪಳ್ಳ: ಸಂಜೀವ ಶೆಟ್ಟಿ ನಿಧನ

Suddi Udaya
error: Content is protected !!