September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಷ್ಠಬಂಧ ಬ್ರಹ್ಮಕಲಶೋತ್ಸವ: ವೈಭಯುತ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಗಮನ‌ ಸೆಳೆದ ಕುಣಿತ ಭಜನೆ

ಬೆಳ್ತಂಗಡಿ: ಇತಿಹಾಸ ಪ್ರಸಿದ್ದ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಎ.8ರಿಂದ ಎ.17ರವರೆಗೆ ವೇದಮೂರ್ತಿ ಉದಯ ಪಾಂಗಣ್ಣಾಯರವರ ನೇತೃತ್ವದಲ್ಲಿ ವಿಜೃಂಭಣೆಯ ಅಷ್ಠಬಂಧ ಬ್ರಹ್ಮಕಲಶೋತ್ಸವ ನೆರವೇರಲಿದೆ.

ಇಂದು ಸಂಜೆ ಹೊರೆಕಾಣಿಕೆಯ ಭವ್ಯ ಮೆರವಣಿಗೆಯು ದೇವಸ್ಥಾನಕ್ಕೆ ಸಂಬಂಧಪಟ್ಟ ಪಡಂಗಡಿ, ಕುವೆಟ್ಟು, ಸೋಣಂದೂರು, ಓಡಿಲ್ನಾಳ, ಗ್ರಾಮದಿಂದ ಹಸಿರುವಾಣಿ ಹೊರೆಕಾಣಿಕಯು ಕಿನಿ ಗೋಳಿ ಬಂದು ಸುಮಾರು ಒಂದು ಸಾವಿರಕ್ಕಿಂತಲೂ ಅಧಿಕ ಮಕ್ಕಳಿಂದ ನೃತ್ಯ ಭಜನೆಯ ಮೂಲಕ ಹೊರೆಕಾಣಿಕೆ ಮೆರವಣಿಗೆ ವೈಭಯುತವಾಗಿ ನಡೆಯಿತು. ಶ್ರೀಮತಿ ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಕುಟುಂಬಸ್ಥರು ಕೊಡುಗೆ ನೀಡಿದ ನೂತನ ಮಹಾದ್ವಾರವನ್ನು ಮಾತೃಶ್ರೀ ಶ್ರೀಮತಿ ಕಾಶಿ ಶೆಟ್ಟಿ ನವಶಕ್ತಿ ಉದ್ಘಾಟಿಸಿದರು.

ಹೊರೆಕಾಣಿಕೆಯಲ್ಲಿ ನೂರಾರು ವಾಹನಗಳ ಮೂಲಕ ಕ್ಷೇತ್ರಕ್ಕೆ ಸಾಗಿ ಬಂತು. ವಿವಿಧ ಭಜನಾ ತಂಡಗಳ ಕುಣಿತಾ ಭಜನೆ ಎಲ್ಲರ ಗಮನ ಸೆಳೆಯಿತು. ಚೆಂಡೆ, ಕೀಲು ಕುದುರೆ, ವಾದ್ಯ ಘೋಷ, ವಿವಿಧ ವೇಷ ಭೂಷಣಗಳೊಂದಿಗೆ ಹಸಿರುವಾಣಿ ಹೊರೆಕಾಣಿಕೆ ವೈಭವಯುತವಾಗಿ ನಡೆಯಿತು.

ನಂತರ ಉಗ್ರಾಣ ಮಹೂರ್ತ ಉದ್ಘಾಟನೆಯನ್ನು ಶಿವಶಂಕರ್ ನಾಯಕ್ ನೆರವೇರಿಸಿದರು.

ಈ ಸಂದರ್ಭದಲ್ಲಿ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಎಮ್. ರಘುರಾಮ ಭಟ್ ಮಠ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಸಂತೋಷ್ ಕುಮಾರ್ ಜೈನ್, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಶಶಿಧರ ಶೆಟ್ಟಿ ಬರೋಡ, ಆಡಳಿತಾಧಿಕಾರಿ ರಾಘವೇಂದ್ರ ಪಾಟೀಲ್, ಕೋಶಾಧಿಕಾರಿ ವಸಂತ ಗೌಡ ವರಕಬೆ, ಪ್ರಧಾನ ಕಾರ್ಯದರ್ಶಿ ಚಿದಾನಂದ ಇಡ್ಯ, ಸೇವಾ ಸಮಿತಿಯ ಅಧ್ಯಕ್ಷ ಪ್ರಭಾಕರ ಶೆಟ್ಟಿ ಉಪ್ಪಡ್ಕ, ಹೊರೆಕಾಣಿಕೆ ಸಮಿತಿ ಸಂಚಾಲಕ ದಯಾನಂದ ಕುಲಾಲ್ ಪುತ್ಯೆ, ಸಹ ಸಂಚಾಲಕ ಪ್ರದೀಪ್ ಶೆಟ್ಟಿ ಪಾಡ್ಯಾರಮಜಲು, ವಿವಿಧ ಸಮಿತಿಯ ಪದಾಧಿಕಾರಿಗಳು ಮತ್ತು ಸದಸ್ಯರು ಹಾಗೂ ಊರ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Related posts

ನ 27: ಎಕ್ಸೆಲ್ ಶಿಕ್ಷಣ ಸಂಸ್ಥೆಯಲ್ಲಿ ಅಕ್ಷರೋತ್ಸವ-ರಾಷ್ಟ್ರ ಮಟ್ಟದ ಕವಿಗೋಷ್ಠಿಗೆ ಕವನಗಳ ಆಹ್ವಾನ

Suddi Udaya

ಬಂದಾರು: ಬೈಹುಲ್ಲು ಸಾಗಾಟದ ಲಾರಿಗೆ ಬೆಂಕಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಣ್ಣೀರುಪಂತ ವಲಯದ ಭಜನಾ ಮಂಡಳಿಯ ಸಭೆ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರೌಢಶಾಲಾ ವಿಭಾಗ ಹಾಗೂ ಪದವಿಪೂರ್ವ ಕಾಲೇಜು ಜಂಟಿಯಾಗಿ ಗಣರಾಜ್ಯೋತ್ಸವ ಆಚರಣೆ

Suddi Udaya

ಗ್ರಾಮೀಣ ಮಹಿಳೆಯರ ಆರೋಗ್ಯ ರಕ್ಷಣೆಗಾಗಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಸ್ತ್ರೀರೋಗ ಮತ್ತು ಬಂಜೆತನ ತಪಾಸಣೆ

Suddi Udaya

ಮೊಗ್ರು: ಲಕ್ಷ್ಮಿ ನಾರಾಯಣ ಭಜನಾ ಮಂದಿರ ಹಾಗೂ ಎಲ್.ಎನ್. ಫ್ರೆಂಡ್ಸ್ ಊಂತನಾಜೆ ಇದರ ಆಶ್ರಯದಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ – ಎಲ್. ಎನ್. ಟ್ರೋಫಿ -2024

Suddi Udaya
error: Content is protected !!