April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ವಾರ್ಷಿಕ ಮಹಾಸಭೆ, ಹಿರಿಯ ನಾಗರಿಕರಿಗೆ ಸನ್ಮಾನ

ಬೆಳ್ತಂಗಡಿ: ಸಂಘದ ಸದಸ್ಯರಾದ ಅಚ್ಚಿನಡ್ಕ ವೀರಮ್ಮನವರು ಬೆಳ್ತಂಗಡಿಯಲ್ಲಿ ಕೆಲ್ಲಗುತ್ತು ಪರಿಸರದಲ್ಲಿ ಉದಾರ ಕೊಡುಗೆಯಾಗಿ ನೀಡಿದ ಹತ್ತು ಸೆಂಟ್ಸ್ ನಿವೇಶನದಲ್ಲಿ ಒಂದು ವರ್ಷದೊಳಗೆ ಸುಸಜ್ಜಿತ ನೂತನ ಕಟ್ಟಡ ನಿರ್ಮಿಸಿ ಉದ್ಘಾಟನಾ ಸಮಾರಂಭವನ್ನು ವೈಭವದಿಂದ ಆಯೋಜಿಸಲಾಗುವುದು ಎಂದು ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ಬೆಳ್ತಂಗಡಿ ತಾಲ್ಲೂಕು ಘಟಕದ ಅಧ್ಯಕ್ಷ ಹಾಗೂ ನಿವೃತ್ತ ಶಿಕ್ಷಣಾಧಿಕಾರಿ ಬಿ. ವಿಠಲ ಶೆಟ್ಟಿ ಹೇಳಿದರು.


ಅವರು ಎ.6ರಂದು ಬೆಳ್ತಂಗಡಿಯಲ್ಲಿ ರಾಜ್ಯ ಸರ್ಕಾರಿ ನೌಕರರ ಸಭಾಭವನದಲ್ಲಿ ನಡೆದ ಸಂಘದ ಮಹಾಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ನೂತನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ರಾಜ್ಯಮಟ್ಟದ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಅವರು ಪ್ರಕಟಿಸಿದರು.


ಸಂಘದ ಹಿರಿಯ ಸದಸ್ಯರುಗಳಾದ ಎಂ.ಕೆ. ಆರಿಗ, ಮಹಾಬಲ ಹೆಗ್ಡೆ, ಲಲಿತ, ಬಾಬುಗೌಡ, ಆಗ್ನೇಸ್ ಡೇಸಾ, ದೇವಪ್ಪ ಗೌಡ, ಪ್ರೊ. ಕೆ. ವಿಷ್ಣುಮೂರ್ತಿ ಭಟ್, ವಿಕ್ಟರ್ ಮೊರಾಸ್, ನಿವೃತ್ತ ಉಪನ್ಯಾಸ ಸುಬ್ರಹ್ಮಣ್ಯ ಮಧ್ಯಸ್ತ, ಸೋಮನಾಥ ಮಯ್ಯ ಅಳದಂಗಡಿ, ಜುಲಿಯಾನಾ ಲೋಬೊ, ಪ್ರೊ. ಉದಯಕುಮಾರ ಮಲ್ಲ, ಬೆಳ್ತಂಗಡಿ, ಬಾಬು ಪೂಜಾರಿ ಕೆದ್ದು, ರಾಮ ಕಾರಂತ, ಉಜಿರೆ, ಬಾಬು ಗೌಡ, ಮುಂಡಾಜೆ ಮೊದಲಾದರನ್ನು ಗೌರವಿಸಲಾಯಿತು.


ಇತ್ತೀಚೆಗೆ ನಿಧನರಾದ ಪ್ರೊ. ನಾ’ ವುಜಿರೆ ಅವರಿಗೆ ಆರ್.ಯನ್. ಪೂವಣಿ ಹಾಗೂ ನಿವೃತ್ತ ಶಿಕ್ಷಕ ಜಯರಾಜ ಕಾಡ, ಕುತ್ಲೂರು ಅವರಿಗೆ ವಸಂತರಾವ್ ನುಡಿನಮನ ಸಲ್ಲಿಸಿದರು. ಕೋಶಾಧಿಕಾರಿ ಜಗನ್ನಿವಾಸ ರಾವ್ ಮತ್ತು ಉಪಾಧ್ಯಕ್ಷರಾದ ಕುಸುಮಾವತಿ ಉಪಸ್ಥಿತರಿದ್ದರು.


ಕಾರ್ಯದರ್ಶಿ ಪದ್ಮಕುಮರ್ ವರದಿ ಸಾದರಪಡಿಸಿದರು. ಸಂಘದ  ಉಪಾಧ್ಯಕ್ಷ ಸನ್ಮತ್ ಕುಮಾರ್ ನಾರಾವಿ ಸ್ವಾಗತಿಸಿದರು. ಪದ್ಮಕುಮಾರ್ ಧನ್ಯವಾದವಿತ್ತರು.

Related posts

ಶಿಶಿಲ ಶ್ರೀ ಗಡಿ ಚಾಮುಂಡಿ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ: ವಾಸ್ತು ಬಲಿ ಹೋಮ, ದುರ್ಗಾನಮಸ್ಕಾರ ಪೂಜೆ

Suddi Udaya

ಕೊಕ್ಕಡ ಡೇವಿಡ್ ಜೈಮಿ ರವರ ಮನೆಗೆ ಡೆಪ್ಯೂಟಿ ರಬ್ಬರ್ ಪ್ರೊಡಕ್ಷನ್ ಕಮೀಷನರ್ ಭೇಟಿ

Suddi Udaya

ರಾಜ್ಯದಲ್ಲಿ ಸ್ವಷ್ಟ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬಿಜೆಪಿಯ ಯಾವುದೇ ಶಾಸಕರು ಕಾಂಗ್ರೆಸ್‌ ಪಕ್ಷಕೆ ಹೋಗುತ್ತಿಲ್ಲ: ಈಶ್ವರಪ್ಪ

Suddi Udaya

ಪೆರಾಲ್ಡಕಟ್ಟೆಯಲ್ಲಿ ಶಿವರಾತ್ರಿಯ ದಿನ ಯುವಕರ ತಂಡದಿಂದ ರಸ್ತೆಯಲ್ಲಿ ಕೀಟಲೆ: ಪ್ರಶ್ನಿಸಿದ ಪೊಲೀಸ್ ಮೇಲೆ ಹಲ್ಲೆ ಆರೋಪ; ಮೂವರ ಬಂಧನ

Suddi Udaya

ಜೂ.21: ವೇಣೂರು ವಿದ್ಯುತ್ ನಿಲುಗಡೆ

Suddi Udaya

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಶಾರದ ಮಂಟಪ ಉಜಿರೆ 17ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ, ಪೂರ್ವಭಾವಿ ಸಭೆ

Suddi Udaya
error: Content is protected !!