22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ವಾರ್ಷಿಕ ಮಹಾಸಭೆ, ಹಿರಿಯ ನಾಗರಿಕರಿಗೆ ಸನ್ಮಾನ

ಬೆಳ್ತಂಗಡಿ: ಸಂಘದ ಸದಸ್ಯರಾದ ಅಚ್ಚಿನಡ್ಕ ವೀರಮ್ಮನವರು ಬೆಳ್ತಂಗಡಿಯಲ್ಲಿ ಕೆಲ್ಲಗುತ್ತು ಪರಿಸರದಲ್ಲಿ ಉದಾರ ಕೊಡುಗೆಯಾಗಿ ನೀಡಿದ ಹತ್ತು ಸೆಂಟ್ಸ್ ನಿವೇಶನದಲ್ಲಿ ಒಂದು ವರ್ಷದೊಳಗೆ ಸುಸಜ್ಜಿತ ನೂತನ ಕಟ್ಟಡ ನಿರ್ಮಿಸಿ ಉದ್ಘಾಟನಾ ಸಮಾರಂಭವನ್ನು ವೈಭವದಿಂದ ಆಯೋಜಿಸಲಾಗುವುದು ಎಂದು ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ಬೆಳ್ತಂಗಡಿ ತಾಲ್ಲೂಕು ಘಟಕದ ಅಧ್ಯಕ್ಷ ಹಾಗೂ ನಿವೃತ್ತ ಶಿಕ್ಷಣಾಧಿಕಾರಿ ಬಿ. ವಿಠಲ ಶೆಟ್ಟಿ ಹೇಳಿದರು.


ಅವರು ಎ.6ರಂದು ಬೆಳ್ತಂಗಡಿಯಲ್ಲಿ ರಾಜ್ಯ ಸರ್ಕಾರಿ ನೌಕರರ ಸಭಾಭವನದಲ್ಲಿ ನಡೆದ ಸಂಘದ ಮಹಾಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ನೂತನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ರಾಜ್ಯಮಟ್ಟದ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಅವರು ಪ್ರಕಟಿಸಿದರು.


ಸಂಘದ ಹಿರಿಯ ಸದಸ್ಯರುಗಳಾದ ಎಂ.ಕೆ. ಆರಿಗ, ಮಹಾಬಲ ಹೆಗ್ಡೆ, ಲಲಿತ, ಬಾಬುಗೌಡ, ಆಗ್ನೇಸ್ ಡೇಸಾ, ದೇವಪ್ಪ ಗೌಡ, ಪ್ರೊ. ಕೆ. ವಿಷ್ಣುಮೂರ್ತಿ ಭಟ್, ವಿಕ್ಟರ್ ಮೊರಾಸ್, ನಿವೃತ್ತ ಉಪನ್ಯಾಸ ಸುಬ್ರಹ್ಮಣ್ಯ ಮಧ್ಯಸ್ತ, ಸೋಮನಾಥ ಮಯ್ಯ ಅಳದಂಗಡಿ, ಜುಲಿಯಾನಾ ಲೋಬೊ, ಪ್ರೊ. ಉದಯಕುಮಾರ ಮಲ್ಲ, ಬೆಳ್ತಂಗಡಿ, ಬಾಬು ಪೂಜಾರಿ ಕೆದ್ದು, ರಾಮ ಕಾರಂತ, ಉಜಿರೆ, ಬಾಬು ಗೌಡ, ಮುಂಡಾಜೆ ಮೊದಲಾದರನ್ನು ಗೌರವಿಸಲಾಯಿತು.


ಇತ್ತೀಚೆಗೆ ನಿಧನರಾದ ಪ್ರೊ. ನಾ’ ವುಜಿರೆ ಅವರಿಗೆ ಆರ್.ಯನ್. ಪೂವಣಿ ಹಾಗೂ ನಿವೃತ್ತ ಶಿಕ್ಷಕ ಜಯರಾಜ ಕಾಡ, ಕುತ್ಲೂರು ಅವರಿಗೆ ವಸಂತರಾವ್ ನುಡಿನಮನ ಸಲ್ಲಿಸಿದರು. ಕೋಶಾಧಿಕಾರಿ ಜಗನ್ನಿವಾಸ ರಾವ್ ಮತ್ತು ಉಪಾಧ್ಯಕ್ಷರಾದ ಕುಸುಮಾವತಿ ಉಪಸ್ಥಿತರಿದ್ದರು.


ಕಾರ್ಯದರ್ಶಿ ಪದ್ಮಕುಮರ್ ವರದಿ ಸಾದರಪಡಿಸಿದರು. ಸಂಘದ  ಉಪಾಧ್ಯಕ್ಷ ಸನ್ಮತ್ ಕುಮಾರ್ ನಾರಾವಿ ಸ್ವಾಗತಿಸಿದರು. ಪದ್ಮಕುಮಾರ್ ಧನ್ಯವಾದವಿತ್ತರು.

Related posts

ಫೆ.12-16: ಚಾರ್ಮಾಡಿ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಆರಾಟ್ ಉತ್ಸವ

Suddi Udaya

ಗೇರುಕಟ್ಟೆ ಪತಂಜಲಿ ಯೋಗ ಶಾಖೆಯಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya

ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ಎನ್ ಸಿಸಿ. ಎನ್‌ಎಸ್‌ಎಸ್. ರೇಂಜರ್ಸ್ ರೋವರ್ಸ್ ಮತ್ತು ರೆಡ್ ಕ್ರಾಸ್ ಘಟಕಗಳ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷ ಡಾ.ರಾಜಶೇಖರ ಕೋಟ್ಯಾನ್ ರವರ ನೇತೃತ್ವದಲ್ಲಿ ಮುದರಂಗಡಿಯಲ್ಲಿ ಸನ್ಮಾನ

Suddi Udaya

ಗುರುವಾಯನಕೆರೆ ಪಾಲಡ್ಕ ಒಕ್ಕೂಟದ ಬೆಳ್ಳಿ ಹಬ್ಬ ಕಾರ್ಯಕ್ರಮ

Suddi Udaya

ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ ಉಜಿರೆ, ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ಬೆಳ್ತಂಗಡಿ ಹಾಗೂ ರೋಟರಿ ಕ್ಲಬ್‌ ಬೆಳ್ತಂಗಡಿ ವತಿಯಿಂದ ಯಶೋ’ ಯಕ್ಷನಮನ-ಗಾನ-ನೃತ್ಯ-ಚಿತ್ರ

Suddi Udaya
error: Content is protected !!