25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ವಾರ್ಷಿಕ ಮಹಾಸಭೆ, ಹಿರಿಯ ನಾಗರಿಕರಿಗೆ ಸನ್ಮಾನ

ಬೆಳ್ತಂಗಡಿ: ಸಂಘದ ಸದಸ್ಯರಾದ ಅಚ್ಚಿನಡ್ಕ ವೀರಮ್ಮನವರು ಬೆಳ್ತಂಗಡಿಯಲ್ಲಿ ಕೆಲ್ಲಗುತ್ತು ಪರಿಸರದಲ್ಲಿ ಉದಾರ ಕೊಡುಗೆಯಾಗಿ ನೀಡಿದ ಹತ್ತು ಸೆಂಟ್ಸ್ ನಿವೇಶನದಲ್ಲಿ ಒಂದು ವರ್ಷದೊಳಗೆ ಸುಸಜ್ಜಿತ ನೂತನ ಕಟ್ಟಡ ನಿರ್ಮಿಸಿ ಉದ್ಘಾಟನಾ ಸಮಾರಂಭವನ್ನು ವೈಭವದಿಂದ ಆಯೋಜಿಸಲಾಗುವುದು ಎಂದು ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ಬೆಳ್ತಂಗಡಿ ತಾಲ್ಲೂಕು ಘಟಕದ ಅಧ್ಯಕ್ಷ ಹಾಗೂ ನಿವೃತ್ತ ಶಿಕ್ಷಣಾಧಿಕಾರಿ ಬಿ. ವಿಠಲ ಶೆಟ್ಟಿ ಹೇಳಿದರು.


ಅವರು ಎ.6ರಂದು ಬೆಳ್ತಂಗಡಿಯಲ್ಲಿ ರಾಜ್ಯ ಸರ್ಕಾರಿ ನೌಕರರ ಸಭಾಭವನದಲ್ಲಿ ನಡೆದ ಸಂಘದ ಮಹಾಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ನೂತನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ರಾಜ್ಯಮಟ್ಟದ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಅವರು ಪ್ರಕಟಿಸಿದರು.


ಸಂಘದ ಹಿರಿಯ ಸದಸ್ಯರುಗಳಾದ ಎಂ.ಕೆ. ಆರಿಗ, ಮಹಾಬಲ ಹೆಗ್ಡೆ, ಲಲಿತ, ಬಾಬುಗೌಡ, ಆಗ್ನೇಸ್ ಡೇಸಾ, ದೇವಪ್ಪ ಗೌಡ, ಪ್ರೊ. ಕೆ. ವಿಷ್ಣುಮೂರ್ತಿ ಭಟ್, ವಿಕ್ಟರ್ ಮೊರಾಸ್, ನಿವೃತ್ತ ಉಪನ್ಯಾಸ ಸುಬ್ರಹ್ಮಣ್ಯ ಮಧ್ಯಸ್ತ, ಸೋಮನಾಥ ಮಯ್ಯ ಅಳದಂಗಡಿ, ಜುಲಿಯಾನಾ ಲೋಬೊ, ಪ್ರೊ. ಉದಯಕುಮಾರ ಮಲ್ಲ, ಬೆಳ್ತಂಗಡಿ, ಬಾಬು ಪೂಜಾರಿ ಕೆದ್ದು, ರಾಮ ಕಾರಂತ, ಉಜಿರೆ, ಬಾಬು ಗೌಡ, ಮುಂಡಾಜೆ ಮೊದಲಾದರನ್ನು ಗೌರವಿಸಲಾಯಿತು.


ಇತ್ತೀಚೆಗೆ ನಿಧನರಾದ ಪ್ರೊ. ನಾ’ ವುಜಿರೆ ಅವರಿಗೆ ಆರ್.ಯನ್. ಪೂವಣಿ ಹಾಗೂ ನಿವೃತ್ತ ಶಿಕ್ಷಕ ಜಯರಾಜ ಕಾಡ, ಕುತ್ಲೂರು ಅವರಿಗೆ ವಸಂತರಾವ್ ನುಡಿನಮನ ಸಲ್ಲಿಸಿದರು. ಕೋಶಾಧಿಕಾರಿ ಜಗನ್ನಿವಾಸ ರಾವ್ ಮತ್ತು ಉಪಾಧ್ಯಕ್ಷರಾದ ಕುಸುಮಾವತಿ ಉಪಸ್ಥಿತರಿದ್ದರು.


ಕಾರ್ಯದರ್ಶಿ ಪದ್ಮಕುಮರ್ ವರದಿ ಸಾದರಪಡಿಸಿದರು. ಸಂಘದ  ಉಪಾಧ್ಯಕ್ಷ ಸನ್ಮತ್ ಕುಮಾರ್ ನಾರಾವಿ ಸ್ವಾಗತಿಸಿದರು. ಪದ್ಮಕುಮಾರ್ ಧನ್ಯವಾದವಿತ್ತರು.

Related posts

ಕಡಿರುದ್ಯಾವರ: ಅಕ್ರಮ ಮರಳು ಸಂಗ್ರಹ ಪತ್ತೆ: ಪ್ರಕರಣ ದಾಖಲು

Suddi Udaya

ಉಜಿರೆ ಎಸ್. ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಹ್ಯಾಪಿ ಕ್ಲಾಸ್ರೂಮ್’

Suddi Udaya

ಅಳದಂಗಡಿ:ನಿಸ್ವಾರ್ಥ ಸೇವೆಗೆ ಸ್ಪೂರ್ತಿಯ ಸೆಲೆಯಾದ ರವಿಕಟಪಾಡಿ: ಕಿರ್ತನ್ ಅವರ ವೈದ್ಯಕೀಯ ಚಿಕಿತ್ಸೆಗೆ ರೂ.10 ಸಾವಿರ ಹಸ್ತಾಂತರ

Suddi Udaya

ಫೆ. 26ರಿಂದ ಮಾ.4: ಬೆಳಾಲು ಮಾಯ ಮಹಾದೇವ ದೇವಸ್ಥಾನದ ವಾರ್ಷಿಕ ಜಾತ್ರೆ

Suddi Udaya

ಸಿಎ ಪರೀಕ್ಷೆಯಲ್ಲಿ ಸುಕನ್ಯಾ ಕಾಮತ್ ಉತ್ತೀರ್ಣ

Suddi Udaya

ಸಂಪೂರ್ಣ ಹಾಳಾದ ಧರ್ಮಸ್ಥಳ-ಮುಳಿಕ್ಕಾರು ರಸ್ತೆ: ಶಾಲಾ ಮಕ್ಕಳು ಸಂಚರಿಸಲು ಪರದಾಡುವ ಸ್ಥಿತಿ ನಿರ್ಮಾಣ, ಅಲ್ಲಲ್ಲಿ ಹೂತು ಹೋಗುವ ವಾಹನಗಳು

Suddi Udaya
error: Content is protected !!