22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ : ಬೆರ್ಕೆಯಲ್ಲಿ ಒಂಟಿ ಸಲಗ ದಾಳಿ: ಅಪಾರ ಕೃಷಿ ಹಾನಿ

ಬೆಳ್ತಂಗಡಿ: ಕಲ್ಮಂಜ ಗ್ರಾಮದ ಬೆರ್ಕೆ ಎಂಬಲ್ಲಿ ಎಂ.ಎಸ್. ಪ್ರಕಾಶ್ ಎಂಬವರ ತೋಟಕ್ಕೆ ಎ.6ರಂದು ತಡರಾತ್ರಿ ಒಂಟಿ ಸಲಗ ಪ್ರವೇಶಿಸಿ ಕೃಷಿಹಾನಿ ಉಂಟುಮಾಡಿದೆ.


ಸಲಗವು ಸುಮಾರು 40ಕ್ಕಿಂತ ಅಧಿಕ ಬಾಳೆ ಗಿಡ 5 ಅಡಕೆ ಮರಗಳನ್ನು ಧ್ವಂಸಗೊಳಿಸಿದೆ.
ಕಳೆದ ಸುಮಾರು ಎರಡು ತಿಂಗಳ ಹಿಂದೆ ಇದೇ ತೋಟಕ್ಕೆ ಪ್ರವೇಶಿಸಿದ್ದ ಕಾಡಾನೆ ಆಗ ಈಚಲ ಮರವನ್ನು ಮುರಿದು ಹಾಕಿತ್ತು. ಮನೆಯವರು ಅದನ್ನು ಹಾಗೆ ಬಿಟ್ಟಿದ್ದರು. ಈ ಈಚಲ ಮರವನ್ನು ಆನೆ ಶನಿವಾರ ಸಂಪೂರ್ಣ ಪುಡಿಗಟ್ಟಿದೆ.
ತಿಂಗಳ ಹಿಂದೆ ಕಾಡಾನೆಗಳು ಚಾರ್ಮಾಡಿ, ಮುಂಡಾಜೆ, ಕಡಿರುದ್ಯಾವರ, ಕಲ್ಮಂಜ,ಬೆಳಾಲು, ಗೇರುಕಟ್ಟೆ ಮೊದಲಾದ ಕಡೆ ಸಾಕಷ್ಟು ದಾಂಧಲೆ ನಡೆಸಿ ಉಪ್ಪಿನಂಗಡಿ ಭಾಗದಲ್ಲಿಯು ಪ್ರತ್ಯಕ್ಷವಾಗಿದ್ದು, ಇದೀಗ ಮತ್ತೆ ಕಾಡಾನೆ ಉಪಟಳ ಈ ಭಾಗಗಳಲ್ಲಿ ಕಾಣಿಸಿಕೊಂಡಿದೆ.

Related posts

ಬೆಳ್ತಂಗಡಿ: ಎಸ್‌ಡಿಪಿಐ ಕಾರ್ಯಕರ್ತರಿಂದ ಅಕ್ಬರ್ ಬೆಳ್ತಂಗಡಿ ಪರ ಮತಯಾಚನೆ

Suddi Udaya

ನಾಲ್ಕೂರುನಲ್ಲಿ ಮನೆಗೆ ಧರೆ ಕುಸಿತ: ಬಿರುಕು ಬಿಟ್ಟ ಮನೆಯ ಗೋಡೆ

Suddi Udaya

ಬೆಳ್ತಂಗಡಿ ಧರ್ಮಾಧ್ಯಕ್ಷ ಲಾರೆನ್ಸ್ ಮುಕ್ಕುಝೀ ಯವರನ್ನು ಮಾಜಿ ಸಚಿವ ಮತ್ತು ಕೆಪಿಸಿಸಿ ಉಪಾಧ್ಯಕ್ಷರು ಗಂಗಾಧರ ಗೌಡ ಭೇಟಿ

Suddi Udaya

ಉಜಿರೆ ಮೈಸೂರು ಗಾರ್ಮೆಂಟ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ಪ್ರತಿ ರೂ 1 ಸಾವಿರ ಖರೀದಿಯೊಂದಿಗೆ ಆಕರ್ಷಕ ಗಿಪ್ಟ್

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನ ಆಚರಣೆ

Suddi Udaya

ಶಿಶಿಲ ಗ್ರಾಮ ಪಂಚಾಯತ್‌ ಗ್ರಾಮ ಸಭೆ

Suddi Udaya
error: Content is protected !!