September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ : ಬೆರ್ಕೆಯಲ್ಲಿ ಒಂಟಿ ಸಲಗ ದಾಳಿ: ಅಪಾರ ಕೃಷಿ ಹಾನಿ

ಬೆಳ್ತಂಗಡಿ: ಕಲ್ಮಂಜ ಗ್ರಾಮದ ಬೆರ್ಕೆ ಎಂಬಲ್ಲಿ ಎಂ.ಎಸ್. ಪ್ರಕಾಶ್ ಎಂಬವರ ತೋಟಕ್ಕೆ ಎ.6ರಂದು ತಡರಾತ್ರಿ ಒಂಟಿ ಸಲಗ ಪ್ರವೇಶಿಸಿ ಕೃಷಿಹಾನಿ ಉಂಟುಮಾಡಿದೆ.


ಸಲಗವು ಸುಮಾರು 40ಕ್ಕಿಂತ ಅಧಿಕ ಬಾಳೆ ಗಿಡ 5 ಅಡಕೆ ಮರಗಳನ್ನು ಧ್ವಂಸಗೊಳಿಸಿದೆ.
ಕಳೆದ ಸುಮಾರು ಎರಡು ತಿಂಗಳ ಹಿಂದೆ ಇದೇ ತೋಟಕ್ಕೆ ಪ್ರವೇಶಿಸಿದ್ದ ಕಾಡಾನೆ ಆಗ ಈಚಲ ಮರವನ್ನು ಮುರಿದು ಹಾಕಿತ್ತು. ಮನೆಯವರು ಅದನ್ನು ಹಾಗೆ ಬಿಟ್ಟಿದ್ದರು. ಈ ಈಚಲ ಮರವನ್ನು ಆನೆ ಶನಿವಾರ ಸಂಪೂರ್ಣ ಪುಡಿಗಟ್ಟಿದೆ.
ತಿಂಗಳ ಹಿಂದೆ ಕಾಡಾನೆಗಳು ಚಾರ್ಮಾಡಿ, ಮುಂಡಾಜೆ, ಕಡಿರುದ್ಯಾವರ, ಕಲ್ಮಂಜ,ಬೆಳಾಲು, ಗೇರುಕಟ್ಟೆ ಮೊದಲಾದ ಕಡೆ ಸಾಕಷ್ಟು ದಾಂಧಲೆ ನಡೆಸಿ ಉಪ್ಪಿನಂಗಡಿ ಭಾಗದಲ್ಲಿಯು ಪ್ರತ್ಯಕ್ಷವಾಗಿದ್ದು, ಇದೀಗ ಮತ್ತೆ ಕಾಡಾನೆ ಉಪಟಳ ಈ ಭಾಗಗಳಲ್ಲಿ ಕಾಣಿಸಿಕೊಂಡಿದೆ.

Related posts

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಚಪ್ಪರ ಮೂಹೂರ್ತ, ಕಾರ್ಯಾಲಯ ಉದ್ಘಾಟನೆ

Suddi Udaya

ಕುವೆಟ್ಟು ಕೋಡಿಮನೆ ನಿವಾಸಿ ಕಲ್ಯಾಣಿ ನಿಧನ

Suddi Udaya

ನಿಷೇಧಿತ ಅರಣ್ಯದಲ್ಲಿ ಟ್ರಕ್ಕಿಂಗ್: 103 ಪ್ರವಾಸಿಗರು ಪೊಲೀಸರ ವಶಕ್ಕೆ

Suddi Udaya

ಹಿಂದೂ ಸಂಘಟನೆಯ ಮುಖಂಡ ಅರುಣ್ ಕುಮಾರ್ ಪುತ್ತಿಲ್ಲ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಸಂಸ್ಥೆಗೆ ಭೇಟಿ: ಆತ್ಮೀಯವಾಗಿ ಬರಮಾಡಿಕೊಂಡು ಗೌರವಿಸಿದ ಸಂಸ್ಥೆಯ ಮಾಲಕರಾದ ಕೆ.ಮೋಹನ್ ಕುಮಾರ್

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮತ್ತು ಡಾ.ಹೆಗ್ಗಡೆಯವರ ವ್ಯಕ್ತಿತ್ವದ ತೇಜೋವಧೆ: ಭಾರತೀಯ ಜೈನ್ ಮಿಲನ್ ಸಭೆಯಲ್ಲಿ ಖಂಡನಾ ನಿರ್ಣಯ

Suddi Udaya

ಜೂ.14: ಬೆಳ್ತಂಗಡಿ ರೋಟರಿ ಕ್ಲಬ್ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya
error: Content is protected !!