September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ: ದರ್ಶನ ಬಲಿ, ಬಟ್ಟಲು ಕಾಣಿಕೆ

ಬಂದಾರು: ಇಲ್ಲಿಯ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವವು ಬ್ರಹ್ಮಶ್ರೀ ನೀಲೇಶ್ವರ ವಾಸುದೇವ ತಂತ್ರಿಯವರ ಹಿರಿತನದಲ್ಲಿ ನೀಲೇಶ್ವರ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ಎ.2ರಿಂದ ಆರಂಭಗೊಂಡು ಎ.10ರ ತನಕ ವಿಜೃಂಭಣೆಯಿಂದ ನಡೆಯಲಿದೆ

ಇಂದು (ಎ.8) ಬೆಳಿಗ್ಗೆ ದರ್ಶನ ಬಲಿ ನಂತರ ಬಟ್ಟಲು ಕಾಣಿಕೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.

ಈ ಸಂದರ್ಭದಲ್ಲಿ ಜಾತ್ರೋತ್ಸವ ಸಮಿತಿ ಮತ್ತು ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಬಾಬು ಗೌಡ ಮಡ್ಯಲಖಂಡ, ಅರ್ಚಕರು, ಸದಾಶಿವ ದೇವಸ್ಥಾನ ಅಭಿವೃದ್ಧಿ ಸಮಿತಿಯ ಅಧ್ಯಕ್ಷರು, ಸದಸ್ಯರು, ಯಕ್ಷಗಾನ ಸಮಿತಿಯ ಅಧ್ಯಕ್ಷರು, ಸದಸ್ಯರು, ಸದಾಶಿವ ಭಜನಾ ಮಂಡಳಿಯ ಅಧ್ಯಕ್ಷರು, ಸದಸ್ಯರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ.ಯೋ ಹಾಗೂ ಪ್ರಗತಿಬಂಧು ಒಕ್ಕೂಟ ಮೈರೋಳಡ್ಕ ಬಂದಾರು ಅಧ್ಯಕ್ಷ, ಸದಸ್ಯರು ಹಾಗೂ ಊರವರು ಉಪಸ್ಥಿತರಿದ್ದರು.

ಸಂಜೆ ಭಜನೆ, ರಾತ್ರಿ ರಕೇಶ್ವರಿ ದೈವದ ನೇಮೋತ್ಸವ, ರಥೋತ್ಸವ ಮತ್ತು ಶಯನೋತ್ಸವ ನಡೆಯಲಿದೆ .

Related posts

ನಾಳೆ (ಜ.14): ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ನಾರಾವಿ ಮಹಾಶಕ್ತಿ ಕೇಂದ್ರದ ವ್ಯಾಪ್ತಿಯ ಪ.ಜಾತಿಯ ಕಾಲೋನಿಗಳಲ್ಲಿ ಸಾಮರಸ್ಯದ ಸಂಕ್ರಾಂತಿ

Suddi Udaya

ಉರುವಾಲು ಗ್ರಾಮದ ಬನಾರಿಯಲ್ಲಿ ರಸ್ತೆಗೆ ಉರುಳಿದ ಬೃಹತ್ ಮರ

Suddi Udaya

ಕಳೆಂಜ ಸದಾಶಿವೇಶ್ವರ ದೇವಸ್ಥಾನ ಕಳೆಂಜದ ಸಭಾಭವನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 2 ಲಕ್ಷ ಅನುದಾನ

Suddi Udaya

ಮರಾಠಿ ನಾಯ್ಕ ಸಮುದಾಯದ ಅಶ್ವಥ್ ಎಂಬ ಯುವಕನ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಖಂಡನೀಯ: ಸೂಕ್ತ ಕ್ರಮಕೈಗೊಳ್ಳುವಂತೆ ತಾಲೂಕು ಮರಾಠಿ ಸೇವಾ ಸಂಘದ ಉಪಾಧ್ಯಕ್ಷ ವಸಂತ ನಡ ಆಗ್ರಹ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಮಾಯಾ ಒಕ್ಕೂಟದ ಮೈಕ್ರೋ ಬಚತ್ ಪಾಲಿಸಿಯಿಂದ ಮಂಜೂರಾದ ರೂ.2 ಲಕ್ಷ ಸಹಾಯಧನ ಹಸ್ತಾಂತರ

Suddi Udaya

ಕೊಯ್ಯೂರು ತಾಲೂಕು ಮಟ್ಟದ ಬಾಲಕ, ಬಾಲಕಿಯರ ಮ್ಯಾಟ್ ಕಬ್ಬಡಿ ಪಂದ್ಯಾಟ

Suddi Udaya
error: Content is protected !!