25.7 C
ಪುತ್ತೂರು, ಬೆಳ್ತಂಗಡಿ
March 7, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

ಪುದುವೆಟ್ಟು :ಇಲ್ಲಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಕರ ಸಭೆಯನ್ನು ಎ.6 ರಂದು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದ ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪಗೌಡ ರವರು ಬೇಸಿಗೆ ಶಿಬಿರದಲ್ಲಿ ವಿದ್ಯಾರ್ಥಿ ಪೋಷಕರು ಮನೆಯಲ್ಲಿ ಮಕ್ಕಳನ್ನು ಯಾವ ರೀತಿ ನೋಡಿಕೊಳ್ಳಬೇಕು, ರಜೆಯಲ್ಲಿ ಮಕ್ಕಳು ಮನೆಯಲ್ಲಿ ಮಾಡಬೇಕಾದ ಚಟುವಟಿಕೆಗಳ ಬಗ್ಗೆ ಸಭೆಯಲ್ಲಿ ತಿಳಿಸಿಕೊಟ್ಟರು.

ಸಭಾ ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಟಿಕ್ಕಾ ಸಾಹೇಬ್ ಮಾತನಾಡಿ ಈ ವರ್ಷ ಶಾಲೆಯಲ್ಲಿ ಹಲವಾರು ಕಾರ್ಯಕ್ರಮಗಳನ್ನು ಆಯೋಜನೆ ಮಾಡಿದ್ದಾರೆ ಈ ಕಾರ್ಯಕ್ರಮದ ಸದುಪಯೋಗವನ್ನು ವಿದ್ಯಾರ್ಥಿಗಳು ರಜೆಯ ದಿನಗಳಲ್ಲಿ ಅನುಭವಿಸಬೇಕು ಎಂದು ತಿಳಿಸಿಕೊಟ್ಟರು.

ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪೋಷಕ ಬಂಧುಗಳು ಆಗಮಿಸಿ ಶಾಲೆಯ ಶೈಕ್ಷಣಿಕ ಪ್ರಗತಿಗೆ ಸೂಕ್ತ ಮಾರ್ಗದರ್ಶನವನ್ನು ನೀಡಿ ಕಾರ್ಯಕ್ರಮವನ್ನು ಚಂದಗಾಣಿಸಿಕೊಟ್ಟರು.

ಆಗಮಿಸಿದ ಪೋಷಕ ಬಂಧುಗಳನ್ನು ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪಗೌಡ ಸ್ವಾಗತಿಸಿ, ಕಾರ್ಯಕ್ರಮವನ್ನು ಶಾಲೆಯ ಹಿರಿಯ ಶಿಕ್ಷಕಿ ಶ್ರೀಮತಿ ತೇಜಾವತಿಯವರು ನಿರೂಪಿಸಿದರು. ಈ ಸಂದರ್ಭದಲ್ಲಿ ಶಾಲೆಯ ಎಲ್ಲಾ ಶಿಕ್ಷಕರು ಉಪಸ್ಥಿತರಿದ್ದು ಸಹಕರಿಸಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಭೇಟಿ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕ: ತೋರಣ ಮುಹೂರ್ತ

Suddi Udaya

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ವಿಧಾನ ಸಭಾ ಕ್ಷೇತ್ರ ಸಮಿತಿಯಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

Suddi Udaya

ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಬೆಹರಿನ್ ಇಂಡಿಯಾ ಇಂಟರ್ ನ್ಯಾಷನಲ್ ಅವಾರ್ಡ್ ಪ್ರದಾನ

Suddi Udaya

ಜನಪ್ರತಿನಿಧಿ ನೆಲೆಯಿಂದ ಶಾಸಕರಿಂದ ಆಮಂತ್ರಣ ಅನಾವರಣ : ತಾಲೂಕು ಸಾಹಿತ್ಯ ಸಮ್ಮೇಳನಕ್ಕೆ ಸರ್ವ ನೆರವಿನ ಭರವಸೆ

Suddi Udaya

ಹೊಸಂಗಡಿ: ಹಿಂದೂ ರುದ್ರ ಭೂಮಿಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಸಹಾಯಧನ

Suddi Udaya
error: Content is protected !!