23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು : ಒಂದೇ ವರ್ಷದ ಅಡಿಕೆ ಸಸಿಯಲ್ಲಿ ಮೂಡಿದ ಚೊಚ್ಚಲ ಹಿಂಗಾರ; ಶಾಲಾ ತೋಟದಲ್ಲಿ ಹೀಗೊಂದು ಪ್ರಕೃತಿ ವೈಚಿತ್ರ್ಯ

ಬಂದಾರು : ಸರಕಾರಿ ಶಾಲೆಯ ಅಡಿಕೆ ತೋಟದಲ್ಲಿ ಒಂದೇ ವರ್ಷದ ಅಡಿಕೆ ಸಸಿಯೊಂದರಲ್ಲಿ ಕಾಂಡದ ತುದಿಯ ಗರಿಗಳ ಮಧ್ಯ ಭಾಗದಲ್ಲಿ ಚೊಚ್ಚಲ ಹಿಂಗಾರ ಮೂಡಿದ ಪ್ರಕೃತಿ ವೈಚಿತ್ರ್ಯವೊಂದು ಬಂದಾರು ಬಳಿ ಕಂಡು ಬಂದಿದೆ.

ಹೌದು, ಬೆಳ್ತಂಗಡಿ ತಾಲೂಕು ಬಂದಾರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ಒಂದು ವರ್ಷದ ಮಂಗಳ ತಳಿಯ ಅಡಿಕೆ ತೋಟದ ಅಡಿಕೆ ಸಸಿಯೊಂದರಲ್ಲಿ ಗರಿ ಮೂಡುವ ಕಾಂಡದ ತುದಿಯಲ್ಲಿ ಹೊಚ್ಚ ಹೊಸ ಹಿಂಗಾರವೇ ಚಿಗುರಿ ಅರಳಿದೆ. ಇದೀಗ ಕಡಲೆ ಕಾಳಿನ ಗಾತ್ರದಲ್ಲಿ ಎಳೆ ಅಡಿಕೆ ಕಾಯಿಯೂ ಬೆಳೆಯುತ್ತಿದೆ.ನೆಟ್ಟ ಒಂದೇ ವರ್ಷಕ್ಕೆ ಅಡಿಕೆ ಸಸಿಯಲ್ಲಿ ಕಂಡು ಬಂದ ಈ ಪ್ರಕೃತಿ ವೈಚಿತ್ರ್ಯದ ಬಗ್ಗೆ ಕುತೂಹಲ ಮೂಡಿದ್ದು ಹಿಂಗಾರದ ಮುಂದಿನ ಬೆಳವಣಿಗೆ ಬಗ್ಗೆ ಕಾತರದಿಂದ ಕಾಯುವಂತಾಗಿದೆ.

ಅಚುಶ್ರೀ ಬಾಂಗೇರು.

Related posts

ಧರ್ಮಸ್ಥಳದಲ್ಲಿ ವಿಜಯದಶಮಿ ಪ್ರಯುಕ್ತ ತೆನೆಹಬ್ಬ ಆಚರಣೆ

Suddi Udaya

ಪಟ್ರಮೆಯ ಕೂಟೇಲು – ಸಂಕೇಶ – ಮಣಿಯೇರು ಪಂಚಾಯತ್ ರಸ್ತೆಯ ಕಿರು ಸೇತುವೆ ಕುಸಿತ

Suddi Udaya

ಬಂದಾರು: ಕುಂಟಾಲಪಲ್ಕೆ ಸ.ಹಿ.ಪ್ರಾ. ಶಾಲಾ ಎಸ್.ಡಿ.ಎಂ.ಸಿ ಪುನರ್ ರಚನೆ

Suddi Udaya

ಪೆರಿಂಜೆ : ಭಗವಾನ್ ಪುಷ್ಪದಂತ ಸ್ವಾಮಿ ಬಸದಿಯಲ್ಲಿ ಮಂಗಲಪ್ರವಚನ

Suddi Udaya

ಅಪಘಾತದಲ್ಲಿ ಗಂಭೀರ ಗಾಯಗೊಂಡ ಕರಾಯದ ಬಾಲಕೃಷ್ಣ ನಾಯ್ಕ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದಿಂದ ಆಟಿಡೊಂಜಿ ದಿನ

Suddi Udaya
error: Content is protected !!