27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೈಲಂಗಡಿ ಶ್ರೀ ಸೋಮನಾಥೇಶ್ವರ ಭಜನಾ ತಂಡದಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ಭಜನಾ ತಂಡದ ಸದಸ್ಯ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ

ತೋಟತ್ತಾಡಿ : ಶ್ರೀ ಸೋಮನಾಥೇಶ್ವರ ಭಜನಾ ತಂಡ ಬೈಲಂಗಡಿ, ತೋಟತ್ತಾಡಿ ಇದರ ವತಿಯಿಂದ 2022-2023ನೇ ಸಾಲಿನಲ್ಲಿ ಎಸ್. ಎಸ್. ಎಲ್. ಸಿ. ಪಬ್ಲಿಕ್ ಪರೀಕ್ಷೆಯಲ್ಲಿ 500ಕ್ಕಿಂತ ಮೇಲ್ಪಟ್ಟು ಅಂಕಗಳಿಸಿದ ಭಜನಾ ತಂಡದ ಸದಸ್ಯ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ ಮತ್ತು ಭಜನಾ ತಂಡದ ಎಲ್ಲ ವಿದ್ಯಾರ್ಥಿಗಳಿಗೆ ಸಮವಸ್ತ್ರದ ಶಾಲು ವಿತರಣೆಯು ಎ.7ರಂದು ಕೇಶವ ಪೂಜಾರಿ ಬರಮೇಲು ಇವರ ಮನೆ ವಠಾರದಲ್ಲಿ ನಡೆಯಿತು.

ಸಮಾರಂಭದ ಅಧ್ಯಕ್ಷತೆಯನ್ನು ಭಜನಾ ತಂಡದ ಅಧ್ಯಕ್ಷರಾದ ದಿವಾಕರ ಪೂಜಾರಿ ಕಲೆಂಜೊಟ್ಟು ವಹಿಸಿದರು.

ಮುಖ್ಯ ಅತಿಥಿಗಳಾಗಿ ಶ್ರೀ ಉಳ್ಳಾಳ್ತಿ ಭಜನಾ ಮಂಡಳಿ ಆರಂತಬೈಲು ಇದರ ಅಧ್ಯಕ್ಷರಾದ ದಿನೇಶ್ ನಾಯ್ಕ ಕೋಟೆ, ಸತೀಶ್ ಪೂಜಾರಿ ಮೂರ್ಜೆ, ಜಯಪ್ರಸಾದ್ ಗೌಡ ಪರಾರಿ, ಚಂದ್ರಶೇಖರ್ ಗೌಡ ಪರಾರಿ, ಶ್ರೀಮತಿ ದಮಯಂತಿ ಕಜೆ, ಭಾಗವಹಿಸಿದ್ದರು.

ಗೌರವಾರ್ಪಣೆ ಸ್ವೀಕರಿಸಿದ ಕುಮಾರಿ ಸ್ವಾತಿ ಕಜೆ, ಕುಮಾರಿ ಕೃತಿ ಅರ್ಬಿ, ಕುಮಾರಿ ಹರ್ಷಿತಾ ಪಿತ್ತಿಲು ತಮ್ಮ ಸಂತಸದ ಅನುಭವಗಳನ್ನು ಹಂಚಿಕೊಂಡರು. ಭಜನಾ ತಂಡದ ಉಸ್ತುವಾರಿ ನೋಡಿಕೊಳ್ಳುತ್ತಿರುವ ಸನತ್ ಕುಮಾರ್ ಮೂರ್ಜೆ ಪ್ರಾಸ್ತಾವಿಕ ಮಾತಾಡಿ ನಮ್ಮ ಭಜನಾ ತಂಡವು ಕೇವಲ ಭಜನೆಗೆ ಮಾತ್ರ ಪ್ರೋತ್ಸಾಹ ನೀಡದೆ ಮಕ್ಕಳ ಶಿಕ್ಷಣ, ಹಿಂದೂ ಧರ್ಮದ ಬೋಧನೆ, ಧಾರ್ಮಿಕ ಪ್ರವಾಸಕ್ಕೆ ಹೆಚ್ಚು ಒತ್ತನ್ನು ನೀಡುತ್ತಿದ್ದು. ಮಕ್ಕಳಿಂದ ಒಂದು ರೂಪಾಯಿ ಹಣವನ್ನು ಪಡೆಯದೆ ಭಜನಾ ತರಬೇತಿಯನ್ನು ನೀಡುತ್ತಿದ್ದು. ಮಕ್ಕಳಿಗೆ ಬೇಕಾದ ಎಲ್ಲ ವಸ್ತುಗಳನ್ನು ದಾನಿಗಳಿಂದ ಸ್ವೀಕರಿಸಿದ್ದೇವೆ ಎಂದರು.

ಕಾರ್ಯಕ್ರಮವು ಭಜನಾ ತಂಡದ ಸದಸ್ಯರಾದ ರಚನಾ, ಮೈತ್ರಿ, ರಶ್ಮಿ ಇವರ ಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡು ಭಜನಾ ತಂಡದ ಸಂಚಾಲಕಿ ಕುಮಾರಿ ಸ್ವಾತಿ ಅರ್ಬಿ ಸ್ವಾಗತಿಸಿ, ಕುಮಾರಿ ದೀಕ್ಷಾ ಅರ್ಬಿ ಕಾರ್ಯಕ್ರಮ ನಿರೂಪಿಸಿ, ಕುಮಾರಿ ಉಷಾ ಕಜೆ, ಧನ್ಯವಾದವಿತ್ತರು.

Related posts

‘ಸರ್ಕಾರದ ನಡೆ ಕಾರ್ಯಕರ್ತರ ಕಡೆ’ ಕಾಂಗ್ರೆಸ್ ಸಮಾವೇಶದ ಬಗ್ಗೆ ಮಚ್ಚಿನ ಕಾಂಗ್ರೆಸ್ ಗ್ರಾಮ ಸಮಿತಿ ಸಭೆ

Suddi Udaya

ಕಳೆಂಜ ಗ್ರಾ.ಪಂ. ಮಾಜಿ ಸದಸ್ಯ ಕುಶಾಲಪ್ಪ ಗೌಡ ರಿಗೆ ಮಾತೃ ವಿಯೋಗ

Suddi Udaya

ಮಚ್ಚಿನ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದ ಪೂರ್ವ ತಯಾರಿಯಾಗಿ ಶ್ರಮದಾನ ಕಾರ್ಯಕ್ರಮ

Suddi Udaya

ಸಿಯೋನ್ ಆಶ್ರಮ: ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಎಸ್.ಡಿ.ಎಂ ಕಾಲೇಜು: ಟಾಟಾ ಬಿಗ್ ಬಾಸ್ಕೆಟ್ ನಿಂದ ಕ್ಯಾಂಪಸ್ ಆಯ್ಕೆ ಪ್ರಕ್ರಿಯೆ

Suddi Udaya

ಗುರುವಾಯನಕೆರೆ ಅಯ್ಯಪ್ಪ ಸ್ವಾಮಿ ಮಂದಿರದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!