38.6 C
ಪುತ್ತೂರು, ಬೆಳ್ತಂಗಡಿ
April 1, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ವೇಣೂರು: ಪಲ್ಗುಣಿ ನದಿಯಿಂದ ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ: ಆರೋಪಿಗಳ ಸಹಿತ ಪಿಕಪ್‌ ವಾಹನ ವಶ

ವೇಣೂರು :ಇಲ್ಲಿಯ ಪಲ್ಗುಣಿ ನದಿಯಲ್ಲಿ ಅಕ್ರಮವಾಗಿ, ಮರಳು ಕಳ್ಳತನ ಮಾಡಿ ಸಾಗಾಟ ಮಾಡುತ್ತಿದ್ದ ಸ್ಥಳಕ್ಕೆ ವೇಣೂರು ಪೊಲೀಸರು ದಾಳಿ ನಡೆಸಿ ವಾಹನಗಳನ್ನು ಹಾಗೂ ಆರೋಪಿಗಳನ್ನು ವಶಕ್ಕೆ ಪಡೆದ ಘಟನೆ ಎ.7ರಂದು ವರದಿಯಾಗಿದೆ.

ಎ.07 ರಂದು ರಾತ್ರಿ ಬೆಳ್ತಂಗಡಿ ತಾಲೂಕು ವೇಣೂರು ಗ್ರಾಮದ ಪಲ್ಗುಣಿ ನದಿಯಲ್ಲಿ ಅಕ್ರಮವಾಗಿ, ಮರಳು ಕಳ್ಳತನ ಮಾಡಿ ಸಾಗಾಟ ಮಾಡುತ್ತಿರುವುದಾಗಿ ಮಾಹಿತಿ ಬಂದ‌ ಮೇರೆಗೆ, ಶ್ರೀಶೈಲ್‌ ಡಿ ಮುರಗೋಡ್‌ ಪಿ.ಎಸ್‌.ಐ ವೇಣೂರು ಪೊಲೀಸ್ ಠಾಣೆರವರು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ಹೋದಾಗ, ವೇಣೂರು ಡ್ಯಾಂ ಬಳಿ ಪಲ್ಗುಣಿ ನದಿಯಲ್ಲಿ, ಆಪಾದಿತರಾದ ಕರಿಮಣೇಲು ಗ್ರಾಮ, ಬೆಳ್ತಂಗಡಿ ನಿವಾಸಿ ಸತೀಶ್‌ (44) ಮತ್ತು ಮೂಡುಕೋಡಿ ಗ್ರಾಮ, ಬೆಳ್ತಂಗಡಿ ನವೀನ್‌ [35] ಎಂಬವರು, ನದಿಯಿಂದ ಮರಳು ತೆಗೆದು, ಕೆ ಎ 12 5150 ಹಾಗೂ ಕೆ ಎ 19 ಎಎ 4650ನೇ ಪಿಕಪ್‌ ಗಳಲ್ಲಿ ತಲಾ 30 ಬುಟ್ಟಿಗಳಷ್ಟು ಮರಳನ್ನು ತುಂಬಿಸಿರುವುದು ಕಂಡುಬಂದಿರುತ್ತದೆ.

ಆರೋಪಿಗಳು ಸಂಬಂಧಪಟ್ಟ ಇಲಾಖೆಯಿಂದ ಯಾವುದೇ ಅನುಮತಿಯನ್ನು ಪಡೆಯದೇ ಅನಧೀಕೃತವಾಗಿ ನದಿಯಿಂದ ಅಕ್ರಮವಾಗಿ ಮರಳನ್ನು ಕಳವು ಮಾಡಿಕೊಂಡು ಸಾಗಾಟ ಮಾಡುತ್ತಿರುವುದು ಕಂಡು ಬಂದ ಮೇರೆಗೆ, ವಾಹನಗಳನ್ನು ಹಾಗೂ ಆರೋಪಿಗಳನ್ನು ವಶಕ್ಕೆ ಪಡೆದು, ವೇಣೂರು ಠಾಣೆಯಲ್ಲಿ ಅಕ್ರ: 37/2024 ಕಲಂ: 379 ಜೊತೆಗೆ 34 ಐಪಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಮಚ್ಚಿನ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ನಾರಾಯಣ ಶೆಟ್ಟಿ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಗಣಿತ ಪ್ರಯೋಗಾಲಯದ ಮಹತ್ವದ ಕುರಿತು ತರಬೇತಿ ಕಾರ್ಯಾಗಾರ

Suddi Udaya

ಮಾಜಿ ಶಾಸಕ ಕೆ ವಸಂತ ಬಂಗೇರ ರವರನ್ನು ಭೇಟಿ ಮಾಡಿದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಮ್

Suddi Udaya

ಬೆಳ್ತಂಗಡಿ: ಬಂಟರ ಮಹಿಳಾ ವಿಭಾಗದ ವತಿಯಿಂದ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಡಾನ್ಸ್ ರಿಯಾಲಿಟಿ ಶೋ: ಬೆಳ್ತಂಗಡಿಯ ಟಿವಾ ಡಾನ್ಸ್ ಕ್ರೀವ್ ವಿದ್ಯಾರ್ಥಿನಿ ಕು| ವಂಶಿ ತಂಡ ದ್ವಿತೀಯ ಸ್ಥಾನ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಎಕ್ಸೆಲ್ ಪರ್ಬ-2023

Suddi Udaya
error: Content is protected !!