September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ವೇಣೂರು: ಪಲ್ಗುಣಿ ನದಿಯಿಂದ ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ: ಆರೋಪಿಗಳ ಸಹಿತ ಪಿಕಪ್‌ ವಾಹನ ವಶ

ವೇಣೂರು :ಇಲ್ಲಿಯ ಪಲ್ಗುಣಿ ನದಿಯಲ್ಲಿ ಅಕ್ರಮವಾಗಿ, ಮರಳು ಕಳ್ಳತನ ಮಾಡಿ ಸಾಗಾಟ ಮಾಡುತ್ತಿದ್ದ ಸ್ಥಳಕ್ಕೆ ವೇಣೂರು ಪೊಲೀಸರು ದಾಳಿ ನಡೆಸಿ ವಾಹನಗಳನ್ನು ಹಾಗೂ ಆರೋಪಿಗಳನ್ನು ವಶಕ್ಕೆ ಪಡೆದ ಘಟನೆ ಎ.7ರಂದು ವರದಿಯಾಗಿದೆ.

ಎ.07 ರಂದು ರಾತ್ರಿ ಬೆಳ್ತಂಗಡಿ ತಾಲೂಕು ವೇಣೂರು ಗ್ರಾಮದ ಪಲ್ಗುಣಿ ನದಿಯಲ್ಲಿ ಅಕ್ರಮವಾಗಿ, ಮರಳು ಕಳ್ಳತನ ಮಾಡಿ ಸಾಗಾಟ ಮಾಡುತ್ತಿರುವುದಾಗಿ ಮಾಹಿತಿ ಬಂದ‌ ಮೇರೆಗೆ, ಶ್ರೀಶೈಲ್‌ ಡಿ ಮುರಗೋಡ್‌ ಪಿ.ಎಸ್‌.ಐ ವೇಣೂರು ಪೊಲೀಸ್ ಠಾಣೆರವರು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ಹೋದಾಗ, ವೇಣೂರು ಡ್ಯಾಂ ಬಳಿ ಪಲ್ಗುಣಿ ನದಿಯಲ್ಲಿ, ಆಪಾದಿತರಾದ ಕರಿಮಣೇಲು ಗ್ರಾಮ, ಬೆಳ್ತಂಗಡಿ ನಿವಾಸಿ ಸತೀಶ್‌ (44) ಮತ್ತು ಮೂಡುಕೋಡಿ ಗ್ರಾಮ, ಬೆಳ್ತಂಗಡಿ ನವೀನ್‌ [35] ಎಂಬವರು, ನದಿಯಿಂದ ಮರಳು ತೆಗೆದು, ಕೆ ಎ 12 5150 ಹಾಗೂ ಕೆ ಎ 19 ಎಎ 4650ನೇ ಪಿಕಪ್‌ ಗಳಲ್ಲಿ ತಲಾ 30 ಬುಟ್ಟಿಗಳಷ್ಟು ಮರಳನ್ನು ತುಂಬಿಸಿರುವುದು ಕಂಡುಬಂದಿರುತ್ತದೆ.

ಆರೋಪಿಗಳು ಸಂಬಂಧಪಟ್ಟ ಇಲಾಖೆಯಿಂದ ಯಾವುದೇ ಅನುಮತಿಯನ್ನು ಪಡೆಯದೇ ಅನಧೀಕೃತವಾಗಿ ನದಿಯಿಂದ ಅಕ್ರಮವಾಗಿ ಮರಳನ್ನು ಕಳವು ಮಾಡಿಕೊಂಡು ಸಾಗಾಟ ಮಾಡುತ್ತಿರುವುದು ಕಂಡು ಬಂದ ಮೇರೆಗೆ, ವಾಹನಗಳನ್ನು ಹಾಗೂ ಆರೋಪಿಗಳನ್ನು ವಶಕ್ಕೆ ಪಡೆದು, ವೇಣೂರು ಠಾಣೆಯಲ್ಲಿ ಅಕ್ರ: 37/2024 ಕಲಂ: 379 ಜೊತೆಗೆ 34 ಐಪಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಬೆಳ್ತಂಗಡಿ: ಉತ್ತರ ಕನ್ನಡದಲ್ಲಿ ನಡೆಯುವ ಗಂಗಾಷ್ಟಮಿ ಉತ್ಸವಕ್ಕೆ ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಗೆ ಆಹ್ವಾನ

Suddi Udaya

ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆ : ಮೊಹಮ್ಮದ್ ಅಫ್ಹಾನ್ ಕಟಾ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ

Suddi Udaya

ಕುಂಟಿನಿಯ ಕಾಂಗ್ರೆಸ್ ಬೂತ್ ಸಮಿತಿಯ ಮನವಿಗೆ ಸ್ಪಂದನೆ: ಹಳೆಪೇಟೆಯಿಂದ ಕುತ್ರೋಟ್ಟು ರಸ್ತೆ ದುರಸ್ತಿ ಆರಂಭ

Suddi Udaya

ದ.ಕ. ಜಿಲ್ಲೆಯಲ್ಲಿ ಕೆಂಪುಕಲ್ಲು, ಮರಳಿನ ಅಭಾವಕ್ಕೆ ಕಾಂಗ್ರೆಸ್ ಸರ್ಕಾರದ ದಿವ್ಯ ನಿರ್ಲಕ್ಷ್ಯವೇ ನೇರ ಕಾರಣ: ಸಂಸದ ಕ್ಯಾ. ಚೌಟ ಆರೋಪ

Suddi Udaya

ಕಿಡ್ನಿ ಮತ್ತು ಬ್ರೈನ್ ಸ್ಟ್ರೋಕ್ ಸಮಸ್ಯೆಯಿಂದ ಬಳಲುತ್ತಿರುವ ಕುವೆಟ್ಟು ಹೊನ್ನಪ್ಪ ಪೂಜಾರಿಯವರ ಚಿಕಿತ್ಸೆಗೆ ನೆರವಾಗಿ

Suddi Udaya

ನಾಳ ವಾರ್ಷಿಕ ಜಾತ್ರಾ ಮಹೋತ್ಸವ ಹಾಗೂ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಮಾಲೋಚನೆ ಸಭೆ

Suddi Udaya
error: Content is protected !!