22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಾವ್ಯ: ಕರ್ಂಬಲೆಕ್ಕಿಯಲ್ಲಿ ಪುರುಷರ ರಾಶಿ ಪೂಜೆ

:

ಬೆಳ್ತಂಗಡಿ : ಪುರುಷರ ಭಕ್ತರ ಸಮಿತಿ ಕರ್ಂಬಲೆಕ್ಕಿ ಸಾವ್ಯ ಇದರ ರಾಶಿ ಪೂಜೆ ಇತ್ತೀಚೆಗೆ ಕರ್ಂಬಲೆಕ್ಕಿ ಎಂಬಲ್ಲಿ ಜರಗಿತು.

ಪ್ರಾಚೀನ ಕಾಲದಿಂದ ತುಳುನಾಡಿನಲ್ಲಿ ಅತೀ ಭಕ್ತಿ ಭಾವದಿಂದ ಸುಗ್ಗಿ ತಿಂಗಳ ಹುಣ್ಣಿಮೆಯ ಸಂದರ್ಭದಲ್ಲಿ ಪುರುಷ ಕಟ್ಟುವುದು ಆಚರಿಸಲ್ಪಡುವುದಾಗಿದ್ದು ಕಳೆದ ನಾಲ್ಕು ದಶಕಗಳಿಂದ ನಡೆಯುತ್ತಿದ್ದು ಮೂರು ಅಥವಾ ಐದು ದಿವಸ ಕದ್ರಿ ದೇವರ ಹೆಸರಿನಲ್ಲಿ ದೇವರು ಸಹಿತ ವಿವಿಧ ವೇಷಗಳೊಂದಿಗೆ ಗ್ರಾಮದ ಮನೆ ಮನೆಗಳಿಗೆ ತೆರಳಿ ಹರಕೆ-ಕಾಣಿಕೆ ಸ್ವೀಕರಿಸಿ ಸುಮಾರು 30ರಿಂದ 75 ಮಂದಿಯ ತಂಡ ದಿಮಿಸೋಲೆ ಹಾಕುತ್ತಾ ಬಹು ವಿಜೃಂಭಣೆ ಕಟ್ಟು ಕಟ್ಟಲೆಯಂತೆ ನಡೆದು ಬಳಿಕ ದಿನ ನಿಗದಿಗೊಳಿಸಿ ರಾಶಿ ಪೂಜೆ ಮಾಡಿ ಪ್ರಸಾದ ಹಂಚುವ ಕಾರ್‍ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಸಮಿತಿಯ ಪದಾಧಿಕಾರಿಗಳಾದ ಕೆ. ಸದಾಶಿವ ಹೆಗ್ಡೆ , ವಸಂತ ಪಡೀಲ್, ಅಮ್ಮಿ ಪೂಜಾರಿ, ಸಂದೀಪ್ ಬೀಜದಡಿ, ಸುಂದರ ಬಂಗೇರ, ದಿನೇಶ್ ಕೋಟ್ಯಾನ್, ಪ್ರಶಾಂತ್ ಮಲ್ಲರಡ್ಡ, ಶಶಿಧರ ಆಚಾರ್ಯ, ಮತ್ತಿತರರು ರಾಶಿ ಪೂಜಾ ವಿಧಿ ನಡೆಸಿ ನೂರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಭಾಗವಹಿಸಿ ಶ್ರೀದೇವರ ಗಂಧ ಪ್ರಸಾದ ಸ್ವೀಕರಿಸಿದರು.

Related posts

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮಿನಿ-ಅನ್ವೇಷಣಾ-2024

Suddi Udaya

ಲಾಯಿಲ: ದಯಾ ವಿಶೇಷ ಶಾಲೆಯಲ್ಲಿ ವಿಶ್ವ ಅಂಗವಿಕಲರ ದಿನಾಚರಣೆ

Suddi Udaya

ಬೆಳ್ತಂಗಡಿ ತಾಲೂಕು ಕೃಷಿಕ ಸಮಾಜ ಅಧ್ಯಕ್ಷರಾಗಿ ಪಿ.ಕೆ. ರಾಜು ಪೂಜಾರಿ

Suddi Udaya

ಬೆಳ್ತಂಗಡಿ: ಜೈ ಕರ್ನಾಟಕ ಗಾಯಕರ ಬಳಗದಿಂದ ತಾಲೂಕು ಮಟ್ಟದ ಸದಸ್ಯತ್ವ ನೋಂದಾವಣೆ ಮತ್ತು ತಾಲೂಕು ಪದಾಧಿಕಾರಿಗಳ ಆಯ್ಕೆ

Suddi Udaya

ಅ.14-15: ಬೆಳ್ತಂಗಡಿಯಲ್ಲಿ ಕೋಲ್ಕತ್ತ ಸಾರಿ ಪ್ರದರ್ಶನ , ದೀಪಾವಳಿ ಬಿಗ್ ಸೇಲ್

Suddi Udaya
error: Content is protected !!