September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಾವ್ಯ: ಕರ್ಂಬಲೆಕ್ಕಿಯಲ್ಲಿ ಪುರುಷರ ರಾಶಿ ಪೂಜೆ

:

ಬೆಳ್ತಂಗಡಿ : ಪುರುಷರ ಭಕ್ತರ ಸಮಿತಿ ಕರ್ಂಬಲೆಕ್ಕಿ ಸಾವ್ಯ ಇದರ ರಾಶಿ ಪೂಜೆ ಇತ್ತೀಚೆಗೆ ಕರ್ಂಬಲೆಕ್ಕಿ ಎಂಬಲ್ಲಿ ಜರಗಿತು.

ಪ್ರಾಚೀನ ಕಾಲದಿಂದ ತುಳುನಾಡಿನಲ್ಲಿ ಅತೀ ಭಕ್ತಿ ಭಾವದಿಂದ ಸುಗ್ಗಿ ತಿಂಗಳ ಹುಣ್ಣಿಮೆಯ ಸಂದರ್ಭದಲ್ಲಿ ಪುರುಷ ಕಟ್ಟುವುದು ಆಚರಿಸಲ್ಪಡುವುದಾಗಿದ್ದು ಕಳೆದ ನಾಲ್ಕು ದಶಕಗಳಿಂದ ನಡೆಯುತ್ತಿದ್ದು ಮೂರು ಅಥವಾ ಐದು ದಿವಸ ಕದ್ರಿ ದೇವರ ಹೆಸರಿನಲ್ಲಿ ದೇವರು ಸಹಿತ ವಿವಿಧ ವೇಷಗಳೊಂದಿಗೆ ಗ್ರಾಮದ ಮನೆ ಮನೆಗಳಿಗೆ ತೆರಳಿ ಹರಕೆ-ಕಾಣಿಕೆ ಸ್ವೀಕರಿಸಿ ಸುಮಾರು 30ರಿಂದ 75 ಮಂದಿಯ ತಂಡ ದಿಮಿಸೋಲೆ ಹಾಕುತ್ತಾ ಬಹು ವಿಜೃಂಭಣೆ ಕಟ್ಟು ಕಟ್ಟಲೆಯಂತೆ ನಡೆದು ಬಳಿಕ ದಿನ ನಿಗದಿಗೊಳಿಸಿ ರಾಶಿ ಪೂಜೆ ಮಾಡಿ ಪ್ರಸಾದ ಹಂಚುವ ಕಾರ್‍ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಸಮಿತಿಯ ಪದಾಧಿಕಾರಿಗಳಾದ ಕೆ. ಸದಾಶಿವ ಹೆಗ್ಡೆ , ವಸಂತ ಪಡೀಲ್, ಅಮ್ಮಿ ಪೂಜಾರಿ, ಸಂದೀಪ್ ಬೀಜದಡಿ, ಸುಂದರ ಬಂಗೇರ, ದಿನೇಶ್ ಕೋಟ್ಯಾನ್, ಪ್ರಶಾಂತ್ ಮಲ್ಲರಡ್ಡ, ಶಶಿಧರ ಆಚಾರ್ಯ, ಮತ್ತಿತರರು ರಾಶಿ ಪೂಜಾ ವಿಧಿ ನಡೆಸಿ ನೂರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಭಾಗವಹಿಸಿ ಶ್ರೀದೇವರ ಗಂಧ ಪ್ರಸಾದ ಸ್ವೀಕರಿಸಿದರು.

Related posts

ಎಸ್.ಡಿ.ಎಂ ಕಾಲೇಜು ಉಜಿರೆ : “ವಿಜ್ಞಾನ ಸಿಂಚನ -2026” ಅಂತರ್ ಕಾಲೇಜು ರಾಜ್ಯಮಟ್ಟದ ಉತ್ಸವಕ್ಕೆ ಚಾಲನೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ವಿದ್ಯಾರ್ಥಿ ಸಂಘ ರಚನೆ

Suddi Udaya

ಸುಲ್ಕೇರಿ ಬ್ರಹ್ಮ ಶ್ರೀ ಗುರುನಾರಾಯಣ ಸೇವಾ ಸಮಿತಿಯ ಮಾಸಿಕ ಸಭೆ

Suddi Udaya

ಬೆಳ್ತಂಗಡಿ ಬಿಜೆಪಿ ಯುವಮೋರ್ಚಾದ ಕಾರ್ಯಕಾರಣಿ ಸಭೆ

Suddi Udaya

ಎ.2: ಬಿಜೆಪಿ ಬೆಳ್ತಂಗಡಿ ಮಂಡಲ ಪದಾಧಿಕಾರಿಗಳ, ವಿವಿಧ ಮೋರ್ಚಾಗಳ, ಮಹಾಶಕ್ತಿಕೇಂದ್ರ, ಶಕ್ತಿಕೇಂದ್ರ ಹಾಗೂ ಬೂತ್ ಸಮಿತಿ ಪದಾಧಿಕಾರಿಗಳ ಪದಗ್ರಹಣ ಹಾಗೂ ಕಾರ್ಯಕರ್ತರ ಸಮಾವೇಶ

Suddi Udaya

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ವಾಣಿ ಕಾಲೇಜಿನ ಮೋಹಿತ್ ಅವರಿಗೆ ಚಿನ್ನದ ಪದಕ

Suddi Udaya
error: Content is protected !!