22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಾವ್ಯ: ಕರ್ಂಬಲೆಕ್ಕಿಯಲ್ಲಿ ಪುರುಷರ ರಾಶಿ ಪೂಜೆ

:

ಬೆಳ್ತಂಗಡಿ : ಪುರುಷರ ಭಕ್ತರ ಸಮಿತಿ ಕರ್ಂಬಲೆಕ್ಕಿ ಸಾವ್ಯ ಇದರ ರಾಶಿ ಪೂಜೆ ಇತ್ತೀಚೆಗೆ ಕರ್ಂಬಲೆಕ್ಕಿ ಎಂಬಲ್ಲಿ ಜರಗಿತು.

ಪ್ರಾಚೀನ ಕಾಲದಿಂದ ತುಳುನಾಡಿನಲ್ಲಿ ಅತೀ ಭಕ್ತಿ ಭಾವದಿಂದ ಸುಗ್ಗಿ ತಿಂಗಳ ಹುಣ್ಣಿಮೆಯ ಸಂದರ್ಭದಲ್ಲಿ ಪುರುಷ ಕಟ್ಟುವುದು ಆಚರಿಸಲ್ಪಡುವುದಾಗಿದ್ದು ಕಳೆದ ನಾಲ್ಕು ದಶಕಗಳಿಂದ ನಡೆಯುತ್ತಿದ್ದು ಮೂರು ಅಥವಾ ಐದು ದಿವಸ ಕದ್ರಿ ದೇವರ ಹೆಸರಿನಲ್ಲಿ ದೇವರು ಸಹಿತ ವಿವಿಧ ವೇಷಗಳೊಂದಿಗೆ ಗ್ರಾಮದ ಮನೆ ಮನೆಗಳಿಗೆ ತೆರಳಿ ಹರಕೆ-ಕಾಣಿಕೆ ಸ್ವೀಕರಿಸಿ ಸುಮಾರು 30ರಿಂದ 75 ಮಂದಿಯ ತಂಡ ದಿಮಿಸೋಲೆ ಹಾಕುತ್ತಾ ಬಹು ವಿಜೃಂಭಣೆ ಕಟ್ಟು ಕಟ್ಟಲೆಯಂತೆ ನಡೆದು ಬಳಿಕ ದಿನ ನಿಗದಿಗೊಳಿಸಿ ರಾಶಿ ಪೂಜೆ ಮಾಡಿ ಪ್ರಸಾದ ಹಂಚುವ ಕಾರ್‍ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಸಮಿತಿಯ ಪದಾಧಿಕಾರಿಗಳಾದ ಕೆ. ಸದಾಶಿವ ಹೆಗ್ಡೆ , ವಸಂತ ಪಡೀಲ್, ಅಮ್ಮಿ ಪೂಜಾರಿ, ಸಂದೀಪ್ ಬೀಜದಡಿ, ಸುಂದರ ಬಂಗೇರ, ದಿನೇಶ್ ಕೋಟ್ಯಾನ್, ಪ್ರಶಾಂತ್ ಮಲ್ಲರಡ್ಡ, ಶಶಿಧರ ಆಚಾರ್ಯ, ಮತ್ತಿತರರು ರಾಶಿ ಪೂಜಾ ವಿಧಿ ನಡೆಸಿ ನೂರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಭಾಗವಹಿಸಿ ಶ್ರೀದೇವರ ಗಂಧ ಪ್ರಸಾದ ಸ್ವೀಕರಿಸಿದರು.

Related posts

ಅಳದಂಗಡಿ 39ನೇ ವರ್ಷದ ಶ್ರೀ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ವಿಶ್ವ ಹಿಂದೂ ಪರಿಷತ್ ಭಜರಂಗದಳ ಮಚ್ಚಿನ ಘಟಕ ಹಾಗೂ ವಿವಿಧ ಸಂಘಗಳಿಂದ ರಾಮ ದೀಪೋತ್ಸವ

Suddi Udaya

ಧರ್ಮಸ್ಥಳ ಶ್ರೀ ಕ್ಷೇತ್ರ ಮಂಜುನಾಥೇಶ್ವರ ಸ್ವಾಮಿ ಸನ್ನಿಧಿಯಲ್ಲಿ ನಾಗರಪಂಚಮಿ ಪ್ರಯುಕ್ತ ನಾಗದೇವರಿಗೆ ವಿಶೇಷ ಪೂಜೆ

Suddi Udaya

ಪ್ರಧಾನಿ ನರೇಂದ್ರ ಮೋದಿಜಿಯವರ ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆಯಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಎರಡನೇ ಭಾರಿಗೆ ರಾಜ್ಯದಲ್ಲಿ ಪ್ರಥಮ ಸ್ಥಾನ

Suddi Udaya

ಕುತ್ಲೂರು ಅಂಗನವಾಡಿ ಕೇಂದ್ರಕ್ಕೆ ಟಿ.ವಿ. ಮತ್ತು ಇಂಟರ್ನೆಟ್ ಕೊಡುಗೆ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ “ನ್ಯೂ ಏಜ್ ಕೆರಿಯರ್ ಆಪರ್ಚುನಿಟಿಸ್” ವಿಷಯದ ಮೇಲೆ ಉಪನ್ಯಾಸ

Suddi Udaya
error: Content is protected !!