23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಇಂದಿನಿಂದ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಠಬಂಧ ಬ್ರಹ್ಮಕಲಶೋತ್ಸವ: ಸಂಜೆ ಹೊರೆಕಾಣಿಕೆ ವೈಭವ ಹಾಗೂ ಒಂದು ಸಾವಿರ ಅಧಿಕ ಮಕ್ಕಳಿಂದ ನೃತ್ಯ ಭಜನೆ

ಬೆಳ್ತಂಗಡಿ: ಇತಿಹಾಸ ಪ್ರಸಿದ್ದ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಎ.8ರಿಂದ ಎ.17ರವರೆಗೆ ವೇದಮೂರ್ತಿ ಉದಯ ಪಾಂಗಣ್ಣಾಯರವರ ನೇತೃತ್ವದಲ್ಲಿ ವಿಜೃಂಭಣೆಯ ಅಷ್ಠಬಂಧ ಬ್ರಹ್ಮಕಲಶೋತ್ಸವ ನೆರವೇರಲಿದೆ.

ಈಗಾಗಲೇ ಸಂಭ್ರಮದ ಬ್ರಹ್ಮಕಲಶೋತ್ಸವಕ್ಕೆ ಸಿದ್ಧತೆಗಳು ಪೂರ್ಣಗೊಂಡಿದ್ದು ಇಂದು ಸಂಜೆ 4ಗಂಟೆಗೆ ಹೊರೆಕಾಣಿಕೆಯ ಭವ್ಯ ಮೆರವಣಿಗೆಯು ದೇವಸ್ಥಾನಕ್ಕೆ ಸಂಬಂಧಪಟ್ಟ ಪಡಂಗಡಿ, ಕುವೆಟ್ಟು, ಸೋಣಂದೂರು, ಓಡಿಲ್ನಾಳ, ಗ್ರಾಮದಿಂದ ಹಸಿರುವಾಣಿ ಹೊರೆ ಕಾಣಿಕೆ ಮದ್ದಡ್ಕ ಶ್ರೀ ರಾಮ ಭಜನಾ ಮಂದಿರಕ್ಕೆ ಬಂದು ಅಲ್ಲಿಂದ ಸುಮಾರು ಒಂದು ಸಾವಿರಕ್ಕಿಂತಲೂ ಅಧಿಕ ಮಕ್ಕಳಿಂದ ನೃತ್ಯ ಭಜನೆಯ ಮೂಲಕ ಹೊರೆಕಾಣಿಕೆ ಮೆರವಣಿಗೆ ನಡೆಯಲಿದೆ. ಶ್ರೀಮತಿ ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಕುಟುಂಬಸ್ಥರು ಕೊಡುಗೆ ನೀಡಿದ ನೂತನ ಮಹಾದ್ವಾರವನ್ನು ಮಾತೃಶ್ರೀ ಶ್ರೀಮತಿ ಕಾಶಿ ಶೆಟ್ಟಿ ನವಶಕ್ತಿ ಉದ್ಘಾಟಿಸಲಿದ್ದಾರೆ.

5 ಗಂಟೆಗೆ ಉಗ್ರಾಣ ಮಹೂರ್ತ ಉದ್ಘಾಟನೆಯನ್ನು ಶಿವಶಂಕರ್ ನಾಯಕ್ ನೆರವೇರಿಸಲಿದ್ದಾರೆ. ರಾತ್ರಿ 7.30 ರಿಂದ ಧಾರ್ಮಿಕ ಸಭಾ ಕಾರ್ಯಕ್ರಮವು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಶಶಿಧರ್ ಶೆಟ್ಟಿ ನವಶಕ್ತಿ ಬರೋಡ ಸಭಾಧ್ಯಕ್ಷತೆಯಲ್ಲಿ ನಡೆಯಲಿದೆ. ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಶ್ರೀ ಧಾಮ ಮಾಣಿಲ ಆಶೀರ್ವಚನ ನೀಡಲಿದ್ದಾರೆ. ಸಭಾ ಕಾರ್ಯಕ್ರಮವನ್ನು ಅಳದಂಗಡಿ ಅರಮನೆಯ ಡಾ. ಪದ್ಮಪ್ರಸಾದ್ ಅಜಿಲರು ಉದ್ಘಾಟಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಪ್ರತಾಪ್ ಸಿಂಹ ನಾಯಕ್, ಹರೀಶ್ ಕುಮಾ‌ರ್, ಪ್ರಭಾಕರ ಬಂಗೇರ, ತಹಶೀಲ್ದಾರ್ ಪ್ರಥ್ವಿಸಾನಿಕಂ, ವಿಜಯ ಶೆಟ್ಟಿ ಪಣಕಜೆ ಮುಂಬಾಯಿ, ಸುಮಂತ್ ಕುಮಾರ್ ಜೈನ್, ಮೋಹನ್ ಕುಮಾರ್ ಲಕ್ಷ್ಮೀ ಗ್ರೂಪ್ಸ್ ಉಜಿರೆ, ಪ್ರಶಾಂತ್ ಸುವರ್ಣ, ಶೇಖ‌ರ್ ಶೆಟ್ಟಿ ಉದ್ಯಮಿಗಳು ಮಯೂರ ಗುರುವಾಯನಕೆರೆ, ಪುನೀತ್ ಕುಮಾ‌ರ್, ಅತುಲ್ ಬಂಗೇರ ಹಲೇಜಿ, ದಿನೇಶ್ ಶೆಟ್ಟಿ ಉದ್ಯಮಿ ಪುಣೆ, ಬಸವನ ಗೌಡ ಮಾನ್ವಿ ಬಸವೇಶ್ವರ ರೈಸ್ ಮಿಲ್ ರಾಯಚೂರು, ಬಾಲಕೃಷ್ಣ ಶೆಟ್ಟಿ ಕಾರ್ಯಾಣ, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಚೈತೇಶ್ ಇಳಂತಿಲ ಭಾಗವಹಿಸಲಿದ್ದಾರೆ. ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.

Related posts

ಗರ್ಡಾಡಿ ಯುವಕ ಮಂಡಲದ ಅಧ್ಯಕ್ಷರಾಗಿ ದಿನೇಶ್ ಬಂಗೇರ ಆಯ್ಕೆ

Suddi Udaya

ನ.17: ರಥಬೀದಿ ಶ್ರೀ ಗೋಕರ್ಣ ಮಠದಲ್ಲಿ ಶ್ರೀರಾಮನಾಮ ಜಪ ಮಹಾ ಅಭಿಯಾನ ನ.3 – 21: ಮಂಗಳೂರಿ ನಲ್ಲಿ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶರ ಮೊಕ್ಕಂ

Suddi Udaya

ನ.4: ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಶಾಲೆಗಳಿಗೆ ಪೀಠೋಪಕರಣಗಳ ಸಾಗಾಟ ವಾಹನಗಳ ಚಾಲನೆ

Suddi Udaya

ಬೆಳ್ತಂಗಡಿಯ ಇಬ್ಬರು ವಕೀಲರು ಕಾಂಗ್ರೆಸ್ ಪಕ್ಷ ಸೇರ್ಪಡೆ

Suddi Udaya

ಜೇಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಯುವ ದಿನಾಚರಣೆ ಪ್ರಯುಕ್ತ ಭಾಷಣ ಸ್ಪರ್ಧೆ

Suddi Udaya

ಮುತ್ತೂಟ್ ಫೈನಾನ್ಸ್ ಬೆಳ್ತಂಗಡಿ ಶಾಖೆ ಸ್ಥಳಾಂತರಗೊಂಡು ಶುಭಾರಂಭ: ಗ್ರಾಹಕರ ವಿಶ್ವಾಸ ಗಳಿಸಿದಾಗ ಸಂಸ್ಥೆ ಬೆಳೆಯುತ್ತದೆ : ಕುಸುಮಾಧರ್

Suddi Udaya
error: Content is protected !!