23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಎ.13,ವಿಷು ಕಣಿ ಆಚರಣಾ ಸಮಿತಿಯಿಂದ ಕೇರಳ ಸಂಪ್ರಾದಾಯಿಕ ವಿಷು ಕಣಿ ಆಚರಣೆ: ಕೇರಳ ಚೆಂಡೆ ಪ್ರದರ್ಶನ, ಪೂಕಳಂ, ಮನೋರಂಜನಾ ಕಾರ್ಯಕ್ರಮ, 32 ಬಗೆಯ ಉಟೋಪಚಾರ

ಬೆಳ್ತಂಗಡಿ:ವಿಷು ಕಣಿ ಆಚರಣಾ ಸಮಿತಿಯಿಂದ 3 ನೇ ವರ್ಷದ ಕೇರಳ ಸಾಂಪ್ರದಾಯಿಕ ವಿಷು ಕಣಿ ಆಚರಣೆಯು ಉಜಿರೆ ಶ್ರೀ ಕೃಷ್ಣಾನುಗ್ರಹ ಸಭಾಭವನದಲ್ಲಿ ಎ.13 ರಂದು ನಡೆಯಲಿದೆ.ಕಳೆದ ಎರಡು ವರ್ಷದ ಹಿಂದೆ ಉಜಿರೆಯಲ್ಲಿ ನಡೆದ ವಿಷು ಕಣಿ ಆಚರಣೆಯಲ್ಲಿ ಬೆಳ್ತಂಗಡಿ ತಾಲೂಕಿನ ಸಾವಿರಾರು ಜನರು ಭಾಗವಹಿಸಿದ್ದರು‌.ವಿಷು ಹಬ್ಬ ಕೃಷಿ ಪ್ರಧಾನ ಹಬ್ಬವಾಗಿದ್ದು ಮನೆಮಂದಿ ವಿಷು ಕಣಿ ಇಟ್ಟು ಬೆಳಗ್ಗೆ ಬೇಗ ಎದ್ದು ಹೆಚ್ಚಿನ ಮನೆ, ದೇವಸ್ಥಾನ, ದೈವಸ್ಥಾನಗಳಲ್ಲಿ ಪೂಜೆ ನಡೆಸುತ್ತಾರೆ.ಬಾಳೆಹಣ್ಣು, ಎಳನೀರು, ಹಲಸಿನ ಹಣ್ಣು, ಕನ್ನಡಿ, ತಂಬಿಗೆಯಲ್ಲಿ ನೀರು, ಎಲೆಅಡಿಕೆ, ಹಣ, ಕುಂಕುಮ,ಚಿನ್ನದ ಒಡವೆ ಮೊದಲಾದ ಸುವಸ್ತುಗಳನ್ನು ಜೋಡಿಸಿ ವಿಷು ಕಣಿ ಮಾಡಲಾಗುತ್ತದೆ.ಈ ಸಂದರ್ಭ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ-ಪುನಸ್ಕಾರ ನಡೆಯುತ್ತದೆ. ಸಾವಿರಾರು ಭಕ್ತರು ಪಾಲ್ಗೊಂಡು ಶ್ರೀ ದೇವರ ದರುಶನ ಪಡೆದು ಅನ್ನಪ್ರಸಾದ ಸ್ವೀಕರಿಸುತ್ತಾರೆ.ಬಹುತೇಕ ಮನೆಗಳಲ್ಲಿ ವಿಷುಕಣಿ ಇಟ್ಟು ಕುಟುಂಬದ ಸದಸ್ಯರೆಲ್ಲರೂ ಜತೆ ಸೇರಿ ಹಬ್ಬ ಆಚರಿಸಿ ಸಿಹಿಯೂಟ ಮಾಡುತ್ತಾರೆ. ಈ ಬಾರಿ ಬೆಳ್ತಂಗಡಿ ತಾಲೂಕು ವಿಷು ಕಣಿ ಆಚರಣಾ ಸಮಿತಿ ವಿನೂತನವಾಗಿ ಹಬ್ಬವನ್ನು ಆಚರಿಸಲು ನಿರ್ದರಿಸಿದೆ. ವಿಶೇಷ ಕೇರಳ ಚೆಂಡೆ ಪ್ರದರ್ಶನ,ಪೂಕಳಂ,ಕೇರಳದ ನುರಿತ ಕಲಾವಿದರಿಂದ ವಿವಿಧ ಮನೋರಂಜನಾ ಕಾರ್ಯಕ್ರಮ, ಕೇರಳ ಸಾಂಪ್ರಾದಾಯಿಕ ಶೈಲಿಯ 32 ಬಗೆಯ ಉಟೋಪಚಾರ ಇದೆಯೆಂದು ಕಾರ್ಯಕ್ರಮ ಆಯೋಜಕರು ತಿಳಿಸಿದ್ದಾರೆ.

Related posts

ನಿರ್ಮಾಣ ಹಂತದಲ್ಲಿರುವ ಗುಂಡೇರಿ ಲಯನ್ಸ್ ಬಸ್ ತಂಗುದಾನದಲ್ಲಿ ಭಗವಾನ್ ಶ್ರೀ ಕೃಷ್ಣನ ಮೂರ್ತಿ ಪ್ರತ್ಯಕ್ಷ: ಮೂರ್ತಿಗೆ ಹೂ ಹಾಕಿ, ಪ್ರಾರ್ಥಿಸಿ ಹೋದ ಅನಾಮಿಕ,

Suddi Udaya

ಮಹಾಭಾರತ ಸರಣಿ ತಾಳಮದ್ಧಳೆಯುವ ಕಲಾವಿದ ಪ್ರವೀತ ಆಚಾರ್ಯರಿಗೆ ಶ್ರದ್ದಾಂಜಲಿ ಅರ್ಪಣೆ

Suddi Udaya

ನಿಡ್ಲೆ ಗ್ರಾ,ಪಂ.ನಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರಕ್ಕೆ ಚಾಲನೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಖ್ಯವನ ಪರೀಕದಲ್ಲಿ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನಾಚರಣೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ-200 ರಲ್ಲಿ ಸ್ವೀಪ್ ಸಮಿತಿಯಿಂದ ತಾಲೂಕಿನ 241 ಬಿಎಲ್ ಒ ಗಳಿಗೆ ತರಬೇತಿ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರರ 79ನೇ ಹುಟ್ಟು ಹಬ್ಬದ ಆಚರಣೆ, ಬೃಹತ್ ರಕ್ತದಾನ ಶಿಬಿರ ಹಾಗೂ ಶ್ರೀ ಗುರುದೇವ ಕಾಲೇಜಿನ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆರ್ಥಿಕ ನೆರವು ನೀಡುವಲ್ಲಿ ಸಹಕರಿಸಿದ ದಾನಿಗಳಿಗೆ ಅಭಿನಂದನೆ

Suddi Udaya
error: Content is protected !!