24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಷ್ಠಬಂಧ ಬ್ರಹ್ಮಕಲಶೋತ್ಸವ: ವೈಭಯುತ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಗಮನ‌ ಸೆಳೆದ ಕುಣಿತ ಭಜನೆ

ಬೆಳ್ತಂಗಡಿ: ಇತಿಹಾಸ ಪ್ರಸಿದ್ದ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಎ.8ರಿಂದ ಎ.17ರವರೆಗೆ ವೇದಮೂರ್ತಿ ಉದಯ ಪಾಂಗಣ್ಣಾಯರವರ ನೇತೃತ್ವದಲ್ಲಿ ವಿಜೃಂಭಣೆಯ ಅಷ್ಠಬಂಧ ಬ್ರಹ್ಮಕಲಶೋತ್ಸವ ನೆರವೇರಲಿದೆ.

ಇಂದು ಸಂಜೆ ಹೊರೆಕಾಣಿಕೆಯ ಭವ್ಯ ಮೆರವಣಿಗೆಯು ದೇವಸ್ಥಾನಕ್ಕೆ ಸಂಬಂಧಪಟ್ಟ ಪಡಂಗಡಿ, ಕುವೆಟ್ಟು, ಸೋಣಂದೂರು, ಓಡಿಲ್ನಾಳ, ಗ್ರಾಮದಿಂದ ಹಸಿರುವಾಣಿ ಹೊರೆಕಾಣಿಕಯು ಕಿನಿ ಗೋಳಿ ಬಂದು ಸುಮಾರು ಒಂದು ಸಾವಿರಕ್ಕಿಂತಲೂ ಅಧಿಕ ಮಕ್ಕಳಿಂದ ನೃತ್ಯ ಭಜನೆಯ ಮೂಲಕ ಹೊರೆಕಾಣಿಕೆ ಮೆರವಣಿಗೆ ವೈಭಯುತವಾಗಿ ನಡೆಯಿತು. ಶ್ರೀಮತಿ ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಕುಟುಂಬಸ್ಥರು ಕೊಡುಗೆ ನೀಡಿದ ನೂತನ ಮಹಾದ್ವಾರವನ್ನು ಮಾತೃಶ್ರೀ ಶ್ರೀಮತಿ ಕಾಶಿ ಶೆಟ್ಟಿ ನವಶಕ್ತಿ ಉದ್ಘಾಟಿಸಿದರು.

ಹೊರೆಕಾಣಿಕೆಯಲ್ಲಿ ನೂರಾರು ವಾಹನಗಳ ಮೂಲಕ ಕ್ಷೇತ್ರಕ್ಕೆ ಸಾಗಿ ಬಂತು. ವಿವಿಧ ಭಜನಾ ತಂಡಗಳ ಕುಣಿತಾ ಭಜನೆ ಎಲ್ಲರ ಗಮನ ಸೆಳೆಯಿತು. ಚೆಂಡೆ, ಕೀಲು ಕುದುರೆ, ವಾದ್ಯ ಘೋಷ, ವಿವಿಧ ವೇಷ ಭೂಷಣಗಳೊಂದಿಗೆ ಹಸಿರುವಾಣಿ ಹೊರೆಕಾಣಿಕೆ ವೈಭವಯುತವಾಗಿ ನಡೆಯಿತು.

ನಂತರ ಉಗ್ರಾಣ ಮಹೂರ್ತ ಉದ್ಘಾಟನೆಯನ್ನು ಶಿವಶಂಕರ್ ನಾಯಕ್ ನೆರವೇರಿಸಿದರು.

ಈ ಸಂದರ್ಭದಲ್ಲಿ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಎಮ್. ರಘುರಾಮ ಭಟ್ ಮಠ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಸಂತೋಷ್ ಕುಮಾರ್ ಜೈನ್, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಶಶಿಧರ ಶೆಟ್ಟಿ ಬರೋಡ, ಆಡಳಿತಾಧಿಕಾರಿ ರಾಘವೇಂದ್ರ ಪಾಟೀಲ್, ಕೋಶಾಧಿಕಾರಿ ವಸಂತ ಗೌಡ ವರಕಬೆ, ಪ್ರಧಾನ ಕಾರ್ಯದರ್ಶಿ ಚಿದಾನಂದ ಇಡ್ಯ, ಸೇವಾ ಸಮಿತಿಯ ಅಧ್ಯಕ್ಷ ಪ್ರಭಾಕರ ಶೆಟ್ಟಿ ಉಪ್ಪಡ್ಕ, ಹೊರೆಕಾಣಿಕೆ ಸಮಿತಿ ಸಂಚಾಲಕ ದಯಾನಂದ ಕುಲಾಲ್ ಪುತ್ಯೆ, ಸಹ ಸಂಚಾಲಕ ಪ್ರದೀಪ್ ಶೆಟ್ಟಿ ಪಾಡ್ಯಾರಮಜಲು, ವಿವಿಧ ಸಮಿತಿಯ ಪದಾಧಿಕಾರಿಗಳು ಮತ್ತು ಸದಸ್ಯರು ಹಾಗೂ ಊರ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Related posts

ಸುಲ್ಕೇರಿ ಅ.ಹಿ. ಪ್ರಾ. ಶಾಲೆ, ಶ್ರೀರಾಮ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳ ಪ್ರವೇಶೋತ್ಸವ ಕಾರ್ಯಕ್ರಮ

Suddi Udaya

ಡಿ.19: ನವಚೇತನಾ ತೋಟಗಾರಿಕಾ ರೈತ ಉತ್ಪಾದಕರ ಕಂಪೆನಿ (ನಿ.) ವಾರ್ಷಿಕ ಸಾಮಾನ್ಯ ಸಭೆ ಹಾಗೂ ನೂತನ ಕಟ್ಟಡದ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಚರ್ಮರೋಗ ತಪಾಸಣಾ ಶಿಬಿರ : 200 ಕ್ಕೂ ಅಧಿಕ ಮಂದಿ ಶಿಬಿರದಲ್ಲಿ ಭಾಗಿ

Suddi Udaya

ಮಾಯಿಲ ಕೋಟೆ ಸೀಮೆ ದೈವಸ್ಥಾನದಲ್ಲಿ ಸಂಕ್ರಮಣ ಪೂಜೆ ಹಾಗೂ ಕಲ್ಲುರ್ಟಿ ಅಗೇಲು ಸೇವೆ

Suddi Udaya

ಯಾವುದೇ ಭ್ರಷ್ಟಾಚಾರ ನಡೆದಿಲ್ಲ ಇಂದಬೆಟ್ಟು ಗ್ರಾಮ ಪಂಚಾಯಿತ್ ನಿಕಟಪೂರ್ವ ಅಧ್ಯಕ್ಷ ಆನಂದ್ ಅಡಿಲು ಸ್ಪಷ್ಟನೆ

Suddi Udaya

ಚಾರ್ಮಾಡಿಯಲ್ಲಿ ಕಾಡಾನೆ ಹಾವಳಿ

Suddi Udaya
error: Content is protected !!