24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಷ್ಠಬಂಧ ಬ್ರಹ್ಮಕಲಶೋತ್ಸವ: ವೈಭಯುತ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಗಮನ‌ ಸೆಳೆದ ಕುಣಿತ ಭಜನೆ

ಬೆಳ್ತಂಗಡಿ: ಇತಿಹಾಸ ಪ್ರಸಿದ್ದ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಎ.8ರಿಂದ ಎ.17ರವರೆಗೆ ವೇದಮೂರ್ತಿ ಉದಯ ಪಾಂಗಣ್ಣಾಯರವರ ನೇತೃತ್ವದಲ್ಲಿ ವಿಜೃಂಭಣೆಯ ಅಷ್ಠಬಂಧ ಬ್ರಹ್ಮಕಲಶೋತ್ಸವ ನೆರವೇರಲಿದೆ.

ಇಂದು ಸಂಜೆ ಹೊರೆಕಾಣಿಕೆಯ ಭವ್ಯ ಮೆರವಣಿಗೆಯು ದೇವಸ್ಥಾನಕ್ಕೆ ಸಂಬಂಧಪಟ್ಟ ಪಡಂಗಡಿ, ಕುವೆಟ್ಟು, ಸೋಣಂದೂರು, ಓಡಿಲ್ನಾಳ, ಗ್ರಾಮದಿಂದ ಹಸಿರುವಾಣಿ ಹೊರೆಕಾಣಿಕಯು ಕಿನಿ ಗೋಳಿ ಬಂದು ಸುಮಾರು ಒಂದು ಸಾವಿರಕ್ಕಿಂತಲೂ ಅಧಿಕ ಮಕ್ಕಳಿಂದ ನೃತ್ಯ ಭಜನೆಯ ಮೂಲಕ ಹೊರೆಕಾಣಿಕೆ ಮೆರವಣಿಗೆ ವೈಭಯುತವಾಗಿ ನಡೆಯಿತು. ಶ್ರೀಮತಿ ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಕುಟುಂಬಸ್ಥರು ಕೊಡುಗೆ ನೀಡಿದ ನೂತನ ಮಹಾದ್ವಾರವನ್ನು ಮಾತೃಶ್ರೀ ಶ್ರೀಮತಿ ಕಾಶಿ ಶೆಟ್ಟಿ ನವಶಕ್ತಿ ಉದ್ಘಾಟಿಸಿದರು.

ಹೊರೆಕಾಣಿಕೆಯಲ್ಲಿ ನೂರಾರು ವಾಹನಗಳ ಮೂಲಕ ಕ್ಷೇತ್ರಕ್ಕೆ ಸಾಗಿ ಬಂತು. ವಿವಿಧ ಭಜನಾ ತಂಡಗಳ ಕುಣಿತಾ ಭಜನೆ ಎಲ್ಲರ ಗಮನ ಸೆಳೆಯಿತು. ಚೆಂಡೆ, ಕೀಲು ಕುದುರೆ, ವಾದ್ಯ ಘೋಷ, ವಿವಿಧ ವೇಷ ಭೂಷಣಗಳೊಂದಿಗೆ ಹಸಿರುವಾಣಿ ಹೊರೆಕಾಣಿಕೆ ವೈಭವಯುತವಾಗಿ ನಡೆಯಿತು.

ನಂತರ ಉಗ್ರಾಣ ಮಹೂರ್ತ ಉದ್ಘಾಟನೆಯನ್ನು ಶಿವಶಂಕರ್ ನಾಯಕ್ ನೆರವೇರಿಸಿದರು.

ಈ ಸಂದರ್ಭದಲ್ಲಿ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಎಮ್. ರಘುರಾಮ ಭಟ್ ಮಠ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಸಂತೋಷ್ ಕುಮಾರ್ ಜೈನ್, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಶಶಿಧರ ಶೆಟ್ಟಿ ಬರೋಡ, ಆಡಳಿತಾಧಿಕಾರಿ ರಾಘವೇಂದ್ರ ಪಾಟೀಲ್, ಕೋಶಾಧಿಕಾರಿ ವಸಂತ ಗೌಡ ವರಕಬೆ, ಪ್ರಧಾನ ಕಾರ್ಯದರ್ಶಿ ಚಿದಾನಂದ ಇಡ್ಯ, ಸೇವಾ ಸಮಿತಿಯ ಅಧ್ಯಕ್ಷ ಪ್ರಭಾಕರ ಶೆಟ್ಟಿ ಉಪ್ಪಡ್ಕ, ಹೊರೆಕಾಣಿಕೆ ಸಮಿತಿ ಸಂಚಾಲಕ ದಯಾನಂದ ಕುಲಾಲ್ ಪುತ್ಯೆ, ಸಹ ಸಂಚಾಲಕ ಪ್ರದೀಪ್ ಶೆಟ್ಟಿ ಪಾಡ್ಯಾರಮಜಲು, ವಿವಿಧ ಸಮಿತಿಯ ಪದಾಧಿಕಾರಿಗಳು ಮತ್ತು ಸದಸ್ಯರು ಹಾಗೂ ಊರ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Related posts

ಉಜಿರೆ: ಹೊಳೆಯಂತಾದ ಉಜಿರೆ ಹಳೆಪೇಟೆ ರಸ್ತೆ, ಹಲವೆಡೆ ಅಂಗಡಿಗೆ ನುಗ್ಗಿದ ನೀರು, ಶಾಶ್ವತ ಪರಿಹಾರಕ್ಕೆ ಆಗ್ರಹ

Suddi Udaya

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಪರಿವಾರ ದೈವಗಳ ನರ್ತನ ಸೇವೆ: ಹಸಿರು ವಾಣಿ ಮತ್ತು ಪುಷ್ಪಗನ್ನಡಿ ಸಮರ್ಪಣೆ

Suddi Udaya

ಕಲ್ಲೇರಿಯಲ್ಲಿ ಜನಔಷಧಿ ಕೇಂದ್ರ ಶುಭಾರಂಭ

Suddi Udaya

ಪುದುವೆಟ್ಟು: ಡಿಸೇಲ್ ಪೈಪ್ ಲೈನ್ ಕೊರೆದು ರೂ. 9 ಲಕ್ಷ ಮೌಲ್ಯದ ಡಿಸೇಲ್ ಕಳ್ಳತನ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಲಾಯಿಲ ಗ್ರಾ.ಪಂ. ವತಿಯಿಂದ ಶಾಲಾ ಬಳಿಯ ಅಪಾಯಕಾರಿ ಮರ ತೆರವು

Suddi Udaya

ಗರ್ಡಾಡಿ: ಜೀಪು ಮತ್ತು ಬೈಕ್ ನಡುವೆ ಭೀಕರ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ

Suddi Udaya
error: Content is protected !!