July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಷ್ಠಬಂಧ ಬ್ರಹ್ಮಕಲಶೋತ್ಸವ: ವೈಭಯುತ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಗಮನ‌ ಸೆಳೆದ ಕುಣಿತ ಭಜನೆ

ಬೆಳ್ತಂಗಡಿ: ಇತಿಹಾಸ ಪ್ರಸಿದ್ದ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಎ.8ರಿಂದ ಎ.17ರವರೆಗೆ ವೇದಮೂರ್ತಿ ಉದಯ ಪಾಂಗಣ್ಣಾಯರವರ ನೇತೃತ್ವದಲ್ಲಿ ವಿಜೃಂಭಣೆಯ ಅಷ್ಠಬಂಧ ಬ್ರಹ್ಮಕಲಶೋತ್ಸವ ನೆರವೇರಲಿದೆ.

ಇಂದು ಸಂಜೆ ಹೊರೆಕಾಣಿಕೆಯ ಭವ್ಯ ಮೆರವಣಿಗೆಯು ದೇವಸ್ಥಾನಕ್ಕೆ ಸಂಬಂಧಪಟ್ಟ ಪಡಂಗಡಿ, ಕುವೆಟ್ಟು, ಸೋಣಂದೂರು, ಓಡಿಲ್ನಾಳ, ಗ್ರಾಮದಿಂದ ಹಸಿರುವಾಣಿ ಹೊರೆಕಾಣಿಕಯು ಕಿನಿ ಗೋಳಿ ಬಂದು ಸುಮಾರು ಒಂದು ಸಾವಿರಕ್ಕಿಂತಲೂ ಅಧಿಕ ಮಕ್ಕಳಿಂದ ನೃತ್ಯ ಭಜನೆಯ ಮೂಲಕ ಹೊರೆಕಾಣಿಕೆ ಮೆರವಣಿಗೆ ವೈಭಯುತವಾಗಿ ನಡೆಯಿತು. ಶ್ರೀಮತಿ ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಕುಟುಂಬಸ್ಥರು ಕೊಡುಗೆ ನೀಡಿದ ನೂತನ ಮಹಾದ್ವಾರವನ್ನು ಮಾತೃಶ್ರೀ ಶ್ರೀಮತಿ ಕಾಶಿ ಶೆಟ್ಟಿ ನವಶಕ್ತಿ ಉದ್ಘಾಟಿಸಿದರು.

ಹೊರೆಕಾಣಿಕೆಯಲ್ಲಿ ನೂರಾರು ವಾಹನಗಳ ಮೂಲಕ ಕ್ಷೇತ್ರಕ್ಕೆ ಸಾಗಿ ಬಂತು. ವಿವಿಧ ಭಜನಾ ತಂಡಗಳ ಕುಣಿತಾ ಭಜನೆ ಎಲ್ಲರ ಗಮನ ಸೆಳೆಯಿತು. ಚೆಂಡೆ, ಕೀಲು ಕುದುರೆ, ವಾದ್ಯ ಘೋಷ, ವಿವಿಧ ವೇಷ ಭೂಷಣಗಳೊಂದಿಗೆ ಹಸಿರುವಾಣಿ ಹೊರೆಕಾಣಿಕೆ ವೈಭವಯುತವಾಗಿ ನಡೆಯಿತು.

ನಂತರ ಉಗ್ರಾಣ ಮಹೂರ್ತ ಉದ್ಘಾಟನೆಯನ್ನು ಶಿವಶಂಕರ್ ನಾಯಕ್ ನೆರವೇರಿಸಿದರು.

ಈ ಸಂದರ್ಭದಲ್ಲಿ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಎಮ್. ರಘುರಾಮ ಭಟ್ ಮಠ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಸಂತೋಷ್ ಕುಮಾರ್ ಜೈನ್, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಶಶಿಧರ ಶೆಟ್ಟಿ ಬರೋಡ, ಆಡಳಿತಾಧಿಕಾರಿ ರಾಘವೇಂದ್ರ ಪಾಟೀಲ್, ಕೋಶಾಧಿಕಾರಿ ವಸಂತ ಗೌಡ ವರಕಬೆ, ಪ್ರಧಾನ ಕಾರ್ಯದರ್ಶಿ ಚಿದಾನಂದ ಇಡ್ಯ, ಸೇವಾ ಸಮಿತಿಯ ಅಧ್ಯಕ್ಷ ಪ್ರಭಾಕರ ಶೆಟ್ಟಿ ಉಪ್ಪಡ್ಕ, ಹೊರೆಕಾಣಿಕೆ ಸಮಿತಿ ಸಂಚಾಲಕ ದಯಾನಂದ ಕುಲಾಲ್ ಪುತ್ಯೆ, ಸಹ ಸಂಚಾಲಕ ಪ್ರದೀಪ್ ಶೆಟ್ಟಿ ಪಾಡ್ಯಾರಮಜಲು, ವಿವಿಧ ಸಮಿತಿಯ ಪದಾಧಿಕಾರಿಗಳು ಮತ್ತು ಸದಸ್ಯರು ಹಾಗೂ ಊರ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಬುರುಡೆ ಪ್ರಕರಣ: ಚಿನ್ನಯ್ಯನಿಗೆ ಜೀವ ಬೆದರಿಕೆ ಹಿನ್ನೆಲೆ ರಕ್ಷಣೆ ನೀಡುವಂತೆ ನ್ಯಾಯಾಲಯಕ್ಕೆ ಅರ್ಜಿ

Suddi Udaya

ಶಿಬರಾಜೆ ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬಂಗಾಡಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಬೆದ್ರಬೆಟ್ಟು ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಮಚ್ಚಿನ ಅಂಗನವಾಡಿ ಕೇಂದ್ರಕ್ಕೆ ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಮಕ್ಕಳ ಬರೆಯುವ ಟೇಬಲ್ ಕೊಡುಗೆ

Suddi Udaya

ದ.ಕ.ಜಿಲ್ಲಾ ಗೊಲ್ಲ(ಯಾದವ)ಸಮಾಜ ಸೇವಾ ಸಂಘದ ವತಿಯಿಂದ ಅಶ್ವತ್ ಎಸ್ ರವರಿಗೆ ಸನ್ಮಾನ

Suddi Udaya

ಸೌತಡ್ಕ ಪಾರ್ಕಿಂಗ್ ಸ್ಥಳದಲ್ಲಿ ನೆಟ್ಟ ಗಿಡಗಳ ಬೇಲಿ ತೆರವು: ಸಂರಕ್ಷಿಸಲಾಗಿದ್ದ ಗಿಡಗಳನ್ನು ಸಾಕು ಪ್ರಾಣಿಗಳು ತಿಂದು ನಾಶ

Suddi Udaya
error: Content is protected !!