September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ವಾರ್ಷಿಕ ಮಹಾಸಭೆ, ಹಿರಿಯ ನಾಗರಿಕರಿಗೆ ಸನ್ಮಾನ

ಬೆಳ್ತಂಗಡಿ: ಸಂಘದ ಸದಸ್ಯರಾದ ಅಚ್ಚಿನಡ್ಕ ವೀರಮ್ಮನವರು ಬೆಳ್ತಂಗಡಿಯಲ್ಲಿ ಕೆಲ್ಲಗುತ್ತು ಪರಿಸರದಲ್ಲಿ ಉದಾರ ಕೊಡುಗೆಯಾಗಿ ನೀಡಿದ ಹತ್ತು ಸೆಂಟ್ಸ್ ನಿವೇಶನದಲ್ಲಿ ಒಂದು ವರ್ಷದೊಳಗೆ ಸುಸಜ್ಜಿತ ನೂತನ ಕಟ್ಟಡ ನಿರ್ಮಿಸಿ ಉದ್ಘಾಟನಾ ಸಮಾರಂಭವನ್ನು ವೈಭವದಿಂದ ಆಯೋಜಿಸಲಾಗುವುದು ಎಂದು ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ಬೆಳ್ತಂಗಡಿ ತಾಲ್ಲೂಕು ಘಟಕದ ಅಧ್ಯಕ್ಷ ಹಾಗೂ ನಿವೃತ್ತ ಶಿಕ್ಷಣಾಧಿಕಾರಿ ಬಿ. ವಿಠಲ ಶೆಟ್ಟಿ ಹೇಳಿದರು.


ಅವರು ಎ.6ರಂದು ಬೆಳ್ತಂಗಡಿಯಲ್ಲಿ ರಾಜ್ಯ ಸರ್ಕಾರಿ ನೌಕರರ ಸಭಾಭವನದಲ್ಲಿ ನಡೆದ ಸಂಘದ ಮಹಾಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ನೂತನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ರಾಜ್ಯಮಟ್ಟದ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಅವರು ಪ್ರಕಟಿಸಿದರು.


ಸಂಘದ ಹಿರಿಯ ಸದಸ್ಯರುಗಳಾದ ಎಂ.ಕೆ. ಆರಿಗ, ಮಹಾಬಲ ಹೆಗ್ಡೆ, ಲಲಿತ, ಬಾಬುಗೌಡ, ಆಗ್ನೇಸ್ ಡೇಸಾ, ದೇವಪ್ಪ ಗೌಡ, ಪ್ರೊ. ಕೆ. ವಿಷ್ಣುಮೂರ್ತಿ ಭಟ್, ವಿಕ್ಟರ್ ಮೊರಾಸ್, ನಿವೃತ್ತ ಉಪನ್ಯಾಸ ಸುಬ್ರಹ್ಮಣ್ಯ ಮಧ್ಯಸ್ತ, ಸೋಮನಾಥ ಮಯ್ಯ ಅಳದಂಗಡಿ, ಜುಲಿಯಾನಾ ಲೋಬೊ, ಪ್ರೊ. ಉದಯಕುಮಾರ ಮಲ್ಲ, ಬೆಳ್ತಂಗಡಿ, ಬಾಬು ಪೂಜಾರಿ ಕೆದ್ದು, ರಾಮ ಕಾರಂತ, ಉಜಿರೆ, ಬಾಬು ಗೌಡ, ಮುಂಡಾಜೆ ಮೊದಲಾದರನ್ನು ಗೌರವಿಸಲಾಯಿತು.


ಇತ್ತೀಚೆಗೆ ನಿಧನರಾದ ಪ್ರೊ. ನಾ’ ವುಜಿರೆ ಅವರಿಗೆ ಆರ್.ಯನ್. ಪೂವಣಿ ಹಾಗೂ ನಿವೃತ್ತ ಶಿಕ್ಷಕ ಜಯರಾಜ ಕಾಡ, ಕುತ್ಲೂರು ಅವರಿಗೆ ವಸಂತರಾವ್ ನುಡಿನಮನ ಸಲ್ಲಿಸಿದರು. ಕೋಶಾಧಿಕಾರಿ ಜಗನ್ನಿವಾಸ ರಾವ್ ಮತ್ತು ಉಪಾಧ್ಯಕ್ಷರಾದ ಕುಸುಮಾವತಿ ಉಪಸ್ಥಿತರಿದ್ದರು.


ಕಾರ್ಯದರ್ಶಿ ಪದ್ಮಕುಮರ್ ವರದಿ ಸಾದರಪಡಿಸಿದರು. ಸಂಘದ  ಉಪಾಧ್ಯಕ್ಷ ಸನ್ಮತ್ ಕುಮಾರ್ ನಾರಾವಿ ಸ್ವಾಗತಿಸಿದರು. ಪದ್ಮಕುಮಾರ್ ಧನ್ಯವಾದವಿತ್ತರು.

Related posts

ಎಸ್.ಡಿ.ಎಂ. ಪ.ಪೂ. ಕಾಲೇಜಿನಲ್ಲಿ ಮಾದಕ ದ್ರವ್ಯ ವಿರೋಧಿ ವ್ಯಸನದ ಬಗ್ಗೆ ಅಂತರ್ಜಾಲ ಬಳಸಿ ಪಿಪಿಟಿ ಸ್ಪರ್ಧಾ ಕಾರ್ಯಕ್ರಮ

Suddi Udaya

ಡಾ|| ಹೇಮಾವತಿ ವೀ. ಹೆಗ್ಗಡೆಯವರ ಹುಟ್ಟುಹಬ್ಬ: ಬಳಂಜ ವಲಯದಲ್ಲಿ ಮಾಸಾಶನ ಸದಸ್ಯರಿಗೆ ಹಣ್ಣು ಹಂಪಲು ವಿತರಣೆ

Suddi Udaya

ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ರಂಜನ್ ಜಿ ಗೌಡ, ಹಾಗೂ ಕಾರ್ಯದರ್ಶಿಯಾಗಿ ಅಭಿನಂದನ್ ಹರೀಶ್ ಕುಮಾರ್ ನೇಮಕ

Suddi Udaya

ಪಟ್ರಮೆ ನಿವಾಸಿ ಕೊರಗಪ್ಪ ನಾಯ್ಕ ಡೆಂಗ್ಯೂ ಜ್ವರದಿಂದ ನಿಧನ

Suddi Udaya

ಬೆಳ್ತಂಗಡಿ ಪವರ್ ಆನ್ ಸಂಸ್ಥೆಗೆ ದಶಕದ ಸಂಭ್ರಮ: ಕೇಕ್ ಕತ್ತರಿಸಿ ಸಂಭ್ರಮಾಚರಣೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!