July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ವಾರ್ಷಿಕ ಮಹಾಸಭೆ, ಹಿರಿಯ ನಾಗರಿಕರಿಗೆ ಸನ್ಮಾನ

ಬೆಳ್ತಂಗಡಿ: ಸಂಘದ ಸದಸ್ಯರಾದ ಅಚ್ಚಿನಡ್ಕ ವೀರಮ್ಮನವರು ಬೆಳ್ತಂಗಡಿಯಲ್ಲಿ ಕೆಲ್ಲಗುತ್ತು ಪರಿಸರದಲ್ಲಿ ಉದಾರ ಕೊಡುಗೆಯಾಗಿ ನೀಡಿದ ಹತ್ತು ಸೆಂಟ್ಸ್ ನಿವೇಶನದಲ್ಲಿ ಒಂದು ವರ್ಷದೊಳಗೆ ಸುಸಜ್ಜಿತ ನೂತನ ಕಟ್ಟಡ ನಿರ್ಮಿಸಿ ಉದ್ಘಾಟನಾ ಸಮಾರಂಭವನ್ನು ವೈಭವದಿಂದ ಆಯೋಜಿಸಲಾಗುವುದು ಎಂದು ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ಬೆಳ್ತಂಗಡಿ ತಾಲ್ಲೂಕು ಘಟಕದ ಅಧ್ಯಕ್ಷ ಹಾಗೂ ನಿವೃತ್ತ ಶಿಕ್ಷಣಾಧಿಕಾರಿ ಬಿ. ವಿಠಲ ಶೆಟ್ಟಿ ಹೇಳಿದರು.


ಅವರು ಎ.6ರಂದು ಬೆಳ್ತಂಗಡಿಯಲ್ಲಿ ರಾಜ್ಯ ಸರ್ಕಾರಿ ನೌಕರರ ಸಭಾಭವನದಲ್ಲಿ ನಡೆದ ಸಂಘದ ಮಹಾಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ನೂತನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ರಾಜ್ಯಮಟ್ಟದ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಅವರು ಪ್ರಕಟಿಸಿದರು.


ಸಂಘದ ಹಿರಿಯ ಸದಸ್ಯರುಗಳಾದ ಎಂ.ಕೆ. ಆರಿಗ, ಮಹಾಬಲ ಹೆಗ್ಡೆ, ಲಲಿತ, ಬಾಬುಗೌಡ, ಆಗ್ನೇಸ್ ಡೇಸಾ, ದೇವಪ್ಪ ಗೌಡ, ಪ್ರೊ. ಕೆ. ವಿಷ್ಣುಮೂರ್ತಿ ಭಟ್, ವಿಕ್ಟರ್ ಮೊರಾಸ್, ನಿವೃತ್ತ ಉಪನ್ಯಾಸ ಸುಬ್ರಹ್ಮಣ್ಯ ಮಧ್ಯಸ್ತ, ಸೋಮನಾಥ ಮಯ್ಯ ಅಳದಂಗಡಿ, ಜುಲಿಯಾನಾ ಲೋಬೊ, ಪ್ರೊ. ಉದಯಕುಮಾರ ಮಲ್ಲ, ಬೆಳ್ತಂಗಡಿ, ಬಾಬು ಪೂಜಾರಿ ಕೆದ್ದು, ರಾಮ ಕಾರಂತ, ಉಜಿರೆ, ಬಾಬು ಗೌಡ, ಮುಂಡಾಜೆ ಮೊದಲಾದರನ್ನು ಗೌರವಿಸಲಾಯಿತು.


ಇತ್ತೀಚೆಗೆ ನಿಧನರಾದ ಪ್ರೊ. ನಾ’ ವುಜಿರೆ ಅವರಿಗೆ ಆರ್.ಯನ್. ಪೂವಣಿ ಹಾಗೂ ನಿವೃತ್ತ ಶಿಕ್ಷಕ ಜಯರಾಜ ಕಾಡ, ಕುತ್ಲೂರು ಅವರಿಗೆ ವಸಂತರಾವ್ ನುಡಿನಮನ ಸಲ್ಲಿಸಿದರು. ಕೋಶಾಧಿಕಾರಿ ಜಗನ್ನಿವಾಸ ರಾವ್ ಮತ್ತು ಉಪಾಧ್ಯಕ್ಷರಾದ ಕುಸುಮಾವತಿ ಉಪಸ್ಥಿತರಿದ್ದರು.


ಕಾರ್ಯದರ್ಶಿ ಪದ್ಮಕುಮರ್ ವರದಿ ಸಾದರಪಡಿಸಿದರು. ಸಂಘದ  ಉಪಾಧ್ಯಕ್ಷ ಸನ್ಮತ್ ಕುಮಾರ್ ನಾರಾವಿ ಸ್ವಾಗತಿಸಿದರು. ಪದ್ಮಕುಮಾರ್ ಧನ್ಯವಾದವಿತ್ತರು.

Related posts

ಮಡಂತ್ಯಾರು ಸಿಎ ಬ್ಯಾಂಕ್‌ ವತಿಯಿಂದ ಮಡಂತ್ಯಾರು ಗ್ರಾ.ಪಂ. ಹಾಗೂ ಮಾಲಾಡಿ ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರಿಗೆ ಅಭಿನಂದನಾ ಸಮಾರಂಭ

Suddi Udaya

ಬೆಳ್ತಂಗಡಿ-ಉಪ್ಪಿನಂಗಡಿ ಖಾಸಗಿ ಬಸ್ ನೌಕರರ ಸಂಘದ ಪದಗ್ರಹಣ

Suddi Udaya

ವೇಣೂರು ಪಚ್ಚೇರಿ ಬಳಿ ಚಿರತೆ ಹಾವಳಿ: ನಾಯಿಯನ್ನು ಹೊತ್ತೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Suddi Udaya

ಬೆಳಾಲು ಶ್ರೀ ಧ‌. ಮ. ಅ. ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಲಾಯಿಲ: ಪ್ರಸನ್ನ ಫಾರ್ಮಸಿ ಕಾಲೇಜಿನ ವಿದ್ಯಾರ್ಥಿಗಳ ಉತ್ತಮ ಸಾಧನೆ

Suddi Udaya

ಬೆಳ್ತಂಗಡಿ :14ನೇ ವರ್ಷದ ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವ: ಗೌರಿ ಗಣೇಶ ವಿಗ್ರಹ ಪ್ರತಿಷ್ಠಾಪನೆ

Suddi Udaya
error: Content is protected !!