38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ : ಬೆರ್ಕೆಯಲ್ಲಿ ಒಂಟಿ ಸಲಗ ದಾಳಿ: ಅಪಾರ ಕೃಷಿ ಹಾನಿ

ಬೆಳ್ತಂಗಡಿ: ಕಲ್ಮಂಜ ಗ್ರಾಮದ ಬೆರ್ಕೆ ಎಂಬಲ್ಲಿ ಎಂ.ಎಸ್. ಪ್ರಕಾಶ್ ಎಂಬವರ ತೋಟಕ್ಕೆ ಎ.6ರಂದು ತಡರಾತ್ರಿ ಒಂಟಿ ಸಲಗ ಪ್ರವೇಶಿಸಿ ಕೃಷಿಹಾನಿ ಉಂಟುಮಾಡಿದೆ.


ಸಲಗವು ಸುಮಾರು 40ಕ್ಕಿಂತ ಅಧಿಕ ಬಾಳೆ ಗಿಡ 5 ಅಡಕೆ ಮರಗಳನ್ನು ಧ್ವಂಸಗೊಳಿಸಿದೆ.
ಕಳೆದ ಸುಮಾರು ಎರಡು ತಿಂಗಳ ಹಿಂದೆ ಇದೇ ತೋಟಕ್ಕೆ ಪ್ರವೇಶಿಸಿದ್ದ ಕಾಡಾನೆ ಆಗ ಈಚಲ ಮರವನ್ನು ಮುರಿದು ಹಾಕಿತ್ತು. ಮನೆಯವರು ಅದನ್ನು ಹಾಗೆ ಬಿಟ್ಟಿದ್ದರು. ಈ ಈಚಲ ಮರವನ್ನು ಆನೆ ಶನಿವಾರ ಸಂಪೂರ್ಣ ಪುಡಿಗಟ್ಟಿದೆ.
ತಿಂಗಳ ಹಿಂದೆ ಕಾಡಾನೆಗಳು ಚಾರ್ಮಾಡಿ, ಮುಂಡಾಜೆ, ಕಡಿರುದ್ಯಾವರ, ಕಲ್ಮಂಜ,ಬೆಳಾಲು, ಗೇರುಕಟ್ಟೆ ಮೊದಲಾದ ಕಡೆ ಸಾಕಷ್ಟು ದಾಂಧಲೆ ನಡೆಸಿ ಉಪ್ಪಿನಂಗಡಿ ಭಾಗದಲ್ಲಿಯು ಪ್ರತ್ಯಕ್ಷವಾಗಿದ್ದು, ಇದೀಗ ಮತ್ತೆ ಕಾಡಾನೆ ಉಪಟಳ ಈ ಭಾಗಗಳಲ್ಲಿ ಕಾಣಿಸಿಕೊಂಡಿದೆ.

Related posts

ಉಜಿರೆ: ಪ.ಪೂ ಕಾಲೇಜುಗಳ ಜಿಲ್ಲಾ ಮಟ್ಟದ ಹ್ಯಾಂಡ್ ಬಾಲ್ ಪಂದ್ಯಾಟ: ಎಸ್.ಡಿ.ಎಂ ಪ.ಪೂ ಕಾಲೇಜಿಗೆ ಚಾಂಪಿಯನ್ ಪ್ರಶಸ್ತಿ:

Suddi Udaya

ಗರ್ಡಾಡಿ ಜನಮಂಗಳ ಕಾರ್ಯಕ್ರಮದಡಿಯಲ್ಲಿ ವೀಲ್ ಚೇರ್ ವಿತರಣೆ

Suddi Udaya

ಗಾಯತ್ರಿ ಮಂತ್ರವೇ ಸರ್ವಶ್ರೇಷ್ಠ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಬೆಳ್ತಂಗಡಿ ತಹಶೀಲ್ದಾರ್ ಆಗಿ ಮತ್ತೆ ಪೃಥ್ವಿ ಸಾನಿಕಂ ನೇಮಕ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಉಚಿತ ಪುಸ್ತಕ ವಿತರಣೆ

Suddi Udaya
error: Content is protected !!