25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ : ಬೆರ್ಕೆಯಲ್ಲಿ ಒಂಟಿ ಸಲಗ ದಾಳಿ: ಅಪಾರ ಕೃಷಿ ಹಾನಿ

ಬೆಳ್ತಂಗಡಿ: ಕಲ್ಮಂಜ ಗ್ರಾಮದ ಬೆರ್ಕೆ ಎಂಬಲ್ಲಿ ಎಂ.ಎಸ್. ಪ್ರಕಾಶ್ ಎಂಬವರ ತೋಟಕ್ಕೆ ಎ.6ರಂದು ತಡರಾತ್ರಿ ಒಂಟಿ ಸಲಗ ಪ್ರವೇಶಿಸಿ ಕೃಷಿಹಾನಿ ಉಂಟುಮಾಡಿದೆ.


ಸಲಗವು ಸುಮಾರು 40ಕ್ಕಿಂತ ಅಧಿಕ ಬಾಳೆ ಗಿಡ 5 ಅಡಕೆ ಮರಗಳನ್ನು ಧ್ವಂಸಗೊಳಿಸಿದೆ.
ಕಳೆದ ಸುಮಾರು ಎರಡು ತಿಂಗಳ ಹಿಂದೆ ಇದೇ ತೋಟಕ್ಕೆ ಪ್ರವೇಶಿಸಿದ್ದ ಕಾಡಾನೆ ಆಗ ಈಚಲ ಮರವನ್ನು ಮುರಿದು ಹಾಕಿತ್ತು. ಮನೆಯವರು ಅದನ್ನು ಹಾಗೆ ಬಿಟ್ಟಿದ್ದರು. ಈ ಈಚಲ ಮರವನ್ನು ಆನೆ ಶನಿವಾರ ಸಂಪೂರ್ಣ ಪುಡಿಗಟ್ಟಿದೆ.
ತಿಂಗಳ ಹಿಂದೆ ಕಾಡಾನೆಗಳು ಚಾರ್ಮಾಡಿ, ಮುಂಡಾಜೆ, ಕಡಿರುದ್ಯಾವರ, ಕಲ್ಮಂಜ,ಬೆಳಾಲು, ಗೇರುಕಟ್ಟೆ ಮೊದಲಾದ ಕಡೆ ಸಾಕಷ್ಟು ದಾಂಧಲೆ ನಡೆಸಿ ಉಪ್ಪಿನಂಗಡಿ ಭಾಗದಲ್ಲಿಯು ಪ್ರತ್ಯಕ್ಷವಾಗಿದ್ದು, ಇದೀಗ ಮತ್ತೆ ಕಾಡಾನೆ ಉಪಟಳ ಈ ಭಾಗಗಳಲ್ಲಿ ಕಾಣಿಸಿಕೊಂಡಿದೆ.

Related posts

ಎ.13,ವಿಷು ಕಣಿ ಆಚರಣಾ ಸಮಿತಿಯಿಂದ ಕೇರಳ ಸಂಪ್ರಾದಾಯಿಕ ವಿಷು ಕಣಿ ಆಚರಣೆ: ಕೇರಳ ಚೆಂಡೆ ಪ್ರದರ್ಶನ, ಪೂಕಳಂ, ಮನೋರಂಜನಾ ಕಾರ್ಯಕ್ರಮ, 32 ಬಗೆಯ ಉಟೋಪಚಾರ

Suddi Udaya

ಬಿಜೆಪಿ ಮಹಿಳಾ ಮೋರ್ಚಾದಿಂದ ಬೆಳ್ತಂಗಡಿ ಪ.ಪಂ. ಅಧ್ಯಕ್ಷರಾದ ಜಯಾನಂದ ಗೌಡ, ಉಪಾಧ್ಯಕ್ಷರಾದ ಗೌರಿ ರವರಿಗೆ ಅಭಿನಂದನೆ

Suddi Udaya

ಡಿ.17: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ, ಬಿರುಸಿನ ಪೈಪೋಟಿ: ಬಿಜೆಪಿ-ಕಾಂಗ್ರೆಸ್ ಬಿಗ್ ಫೈಟ್, 12 ಸ್ಥಾನಕ್ಕೆ 24 ನಾಮಪತ್ರ ಸಲ್ಲಿಕೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಲಾಯಿಲ ಸೈಂಟ್ ಮೇರಿಸ್ ಶಾಲಾ ಬೆಳ್ಳಿಹಬ್ಬ ಸಂಭ್ರಮಕ್ಕೆ ಚಾಲನೆ, ಲೋಗೋ ಬಿಡುಗಡೆ

Suddi Udaya

ಮದ್ದಡ್ಕ ದಿನಸಿ ಅಂಗಡಿ ವ್ಯಾಪಾರಿ ವಿಶ್ವನಾಥ್ ಶೆಣೈ ನಿಧನ

Suddi Udaya
error: Content is protected !!