23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ : ಬೆರ್ಕೆಯಲ್ಲಿ ಒಂಟಿ ಸಲಗ ದಾಳಿ: ಅಪಾರ ಕೃಷಿ ಹಾನಿ

ಬೆಳ್ತಂಗಡಿ: ಕಲ್ಮಂಜ ಗ್ರಾಮದ ಬೆರ್ಕೆ ಎಂಬಲ್ಲಿ ಎಂ.ಎಸ್. ಪ್ರಕಾಶ್ ಎಂಬವರ ತೋಟಕ್ಕೆ ಎ.6ರಂದು ತಡರಾತ್ರಿ ಒಂಟಿ ಸಲಗ ಪ್ರವೇಶಿಸಿ ಕೃಷಿಹಾನಿ ಉಂಟುಮಾಡಿದೆ.


ಸಲಗವು ಸುಮಾರು 40ಕ್ಕಿಂತ ಅಧಿಕ ಬಾಳೆ ಗಿಡ 5 ಅಡಕೆ ಮರಗಳನ್ನು ಧ್ವಂಸಗೊಳಿಸಿದೆ.
ಕಳೆದ ಸುಮಾರು ಎರಡು ತಿಂಗಳ ಹಿಂದೆ ಇದೇ ತೋಟಕ್ಕೆ ಪ್ರವೇಶಿಸಿದ್ದ ಕಾಡಾನೆ ಆಗ ಈಚಲ ಮರವನ್ನು ಮುರಿದು ಹಾಕಿತ್ತು. ಮನೆಯವರು ಅದನ್ನು ಹಾಗೆ ಬಿಟ್ಟಿದ್ದರು. ಈ ಈಚಲ ಮರವನ್ನು ಆನೆ ಶನಿವಾರ ಸಂಪೂರ್ಣ ಪುಡಿಗಟ್ಟಿದೆ.
ತಿಂಗಳ ಹಿಂದೆ ಕಾಡಾನೆಗಳು ಚಾರ್ಮಾಡಿ, ಮುಂಡಾಜೆ, ಕಡಿರುದ್ಯಾವರ, ಕಲ್ಮಂಜ,ಬೆಳಾಲು, ಗೇರುಕಟ್ಟೆ ಮೊದಲಾದ ಕಡೆ ಸಾಕಷ್ಟು ದಾಂಧಲೆ ನಡೆಸಿ ಉಪ್ಪಿನಂಗಡಿ ಭಾಗದಲ್ಲಿಯು ಪ್ರತ್ಯಕ್ಷವಾಗಿದ್ದು, ಇದೀಗ ಮತ್ತೆ ಕಾಡಾನೆ ಉಪಟಳ ಈ ಭಾಗಗಳಲ್ಲಿ ಕಾಣಿಸಿಕೊಂಡಿದೆ.

Related posts

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಕಾಂಗ್ರೇಸ್ ಪಕ್ಷದ ಚುನಾವಣಾ ಕಛೇರಿಯ ಉದ್ಘಾಟನೆ

Suddi Udaya

ನಿಡ್ಲೆ: ತಲೇಕಿ ಎಂಬಲ್ಲಿ ಕಾಡಾನೆ ದಾಳಿ: ಅಪಾರ ಕೃಷಿ ನಾಶ

Suddi Udaya

ಹಿರಿಯ ಯಕ್ಷಗಾನ ಭಾಗವತ ಧರ್ಣಪ್ಪ ಆಚಾರ್ಯ ಅಳದಂಗಡಿ ನಿಧನ

Suddi Udaya

ಸುದ್ದಿ ಉದಯ ವಾರಪತ್ರಿಕೆಯ ವತಿಯಿಂದ ಮುಳಿಯ ಸಂಸ್ಥೆಯ ಪ್ರಾಯೋಜಕತ್ವದಲ್ಲಿ ಶ್ರೀ ಕೃಷ್ಣಜನ್ಮಾಷ್ಟಮಿ ಪ್ರಯುಕ್ತ ಹಮ್ಮಿಕೊಂಡ ‘ರಾಧೆ-ಕೃಷ್ಣ’ ಪೋಟೋ ಸ್ಪರ್ಧಾ ವಿಜೇತ ಪುಟಾಣಿ ಮಕ್ಕಳಿಗೆ ಬಹುಮಾನ ವಿತರಣೆ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಸಂಸ್ಕೃತ ಸಂಘ ಹಾಗೂ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಇವುಗಳ ಪದಾಧಿಕಾರಿಗಳ ಪದಪ್ರದಾನ ಸಮಾರಂಭ

Suddi Udaya

ಧರ್ಮಸ್ಥಳ ಗ್ರಾ.ಪಂ ಗೆ ಎಸ್.ಐ.ಟಿ ಎಂಟ್ರಿ : ಕರ್ತವ್ಯ ನಿರ್ವಹಿಸುತ್ತಿದವರ ವಿವರ ಪಡೆದ ಎಸ್.ಐ.ಟಿ

Suddi Udaya
error: Content is protected !!