September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ : ಬೆರ್ಕೆಯಲ್ಲಿ ಒಂಟಿ ಸಲಗ ದಾಳಿ: ಅಪಾರ ಕೃಷಿ ಹಾನಿ

ಬೆಳ್ತಂಗಡಿ: ಕಲ್ಮಂಜ ಗ್ರಾಮದ ಬೆರ್ಕೆ ಎಂಬಲ್ಲಿ ಎಂ.ಎಸ್. ಪ್ರಕಾಶ್ ಎಂಬವರ ತೋಟಕ್ಕೆ ಎ.6ರಂದು ತಡರಾತ್ರಿ ಒಂಟಿ ಸಲಗ ಪ್ರವೇಶಿಸಿ ಕೃಷಿಹಾನಿ ಉಂಟುಮಾಡಿದೆ.


ಸಲಗವು ಸುಮಾರು 40ಕ್ಕಿಂತ ಅಧಿಕ ಬಾಳೆ ಗಿಡ 5 ಅಡಕೆ ಮರಗಳನ್ನು ಧ್ವಂಸಗೊಳಿಸಿದೆ.
ಕಳೆದ ಸುಮಾರು ಎರಡು ತಿಂಗಳ ಹಿಂದೆ ಇದೇ ತೋಟಕ್ಕೆ ಪ್ರವೇಶಿಸಿದ್ದ ಕಾಡಾನೆ ಆಗ ಈಚಲ ಮರವನ್ನು ಮುರಿದು ಹಾಕಿತ್ತು. ಮನೆಯವರು ಅದನ್ನು ಹಾಗೆ ಬಿಟ್ಟಿದ್ದರು. ಈ ಈಚಲ ಮರವನ್ನು ಆನೆ ಶನಿವಾರ ಸಂಪೂರ್ಣ ಪುಡಿಗಟ್ಟಿದೆ.
ತಿಂಗಳ ಹಿಂದೆ ಕಾಡಾನೆಗಳು ಚಾರ್ಮಾಡಿ, ಮುಂಡಾಜೆ, ಕಡಿರುದ್ಯಾವರ, ಕಲ್ಮಂಜ,ಬೆಳಾಲು, ಗೇರುಕಟ್ಟೆ ಮೊದಲಾದ ಕಡೆ ಸಾಕಷ್ಟು ದಾಂಧಲೆ ನಡೆಸಿ ಉಪ್ಪಿನಂಗಡಿ ಭಾಗದಲ್ಲಿಯು ಪ್ರತ್ಯಕ್ಷವಾಗಿದ್ದು, ಇದೀಗ ಮತ್ತೆ ಕಾಡಾನೆ ಉಪಟಳ ಈ ಭಾಗಗಳಲ್ಲಿ ಕಾಣಿಸಿಕೊಂಡಿದೆ.

Related posts

ಪ್ರಧಾನಿ ನರೇಂದ್ರ ಮೋದಿಜೀಯವರಿಗೆ ಧರ್ಮಸ್ಥಳದ ಪ್ರಸಾದ ನೀಡಿ ಶಾಲು ಹೊದಿಸಿ ಗೌರವಿಸಿದ ಹರೀಶ್ ಪೂಂಜ

Suddi Udaya

ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ‘ಮಗುವಿಗೊಂದು ಮರ’ ಕಲ್ಪನೆಯಂತೆ 200 ಗಿಡಗಳ ನಾಟಿ ಕಾರ್ಯಕ್ರಮ

Suddi Udaya

ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಮಗು ತೋಟದ ಕೆರೆಗೆ ಬಿದ್ದು ಮೃತ್ಯು

Suddi Udaya

ನಾವೂರು ಮತ್ತು ಕುತ್ಲೂರು ಗ್ರಾಮಗಳ ವಿದ್ಯುತ್ ಸಂಪರ್ಕಕ್ಕಾಗಿ ವನ್ಯಜೀವಿ ಮಂಡಳಿ ಅನುಮೋದನೆ: ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಅಧ್ಯಕ್ಷ ಶೇಖರ್ ಎಲ್.ಹೇಳಿಕೆ

Suddi Udaya

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಜಾತ್ರೋತ್ಸವ ಸಮಿತಿಯ ನೂತನ ಪದಾದಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿಯಲ್ಲಿ 500 ಎಕ್ರೆ ಯಾಂತ್ರಿಕೃತ ಯಂತ್ರಶ್ರೀ ನಾಟಿಗೆ ಚಾಲನೆ

Suddi Udaya
error: Content is protected !!