23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ: ದರ್ಶನ ಬಲಿ, ಬಟ್ಟಲು ಕಾಣಿಕೆ

ಬಂದಾರು: ಇಲ್ಲಿಯ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವವು ಬ್ರಹ್ಮಶ್ರೀ ನೀಲೇಶ್ವರ ವಾಸುದೇವ ತಂತ್ರಿಯವರ ಹಿರಿತನದಲ್ಲಿ ನೀಲೇಶ್ವರ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ಎ.2ರಿಂದ ಆರಂಭಗೊಂಡು ಎ.10ರ ತನಕ ವಿಜೃಂಭಣೆಯಿಂದ ನಡೆಯಲಿದೆ

ಇಂದು (ಎ.8) ಬೆಳಿಗ್ಗೆ ದರ್ಶನ ಬಲಿ ನಂತರ ಬಟ್ಟಲು ಕಾಣಿಕೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.

ಈ ಸಂದರ್ಭದಲ್ಲಿ ಜಾತ್ರೋತ್ಸವ ಸಮಿತಿ ಮತ್ತು ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಬಾಬು ಗೌಡ ಮಡ್ಯಲಖಂಡ, ಅರ್ಚಕರು, ಸದಾಶಿವ ದೇವಸ್ಥಾನ ಅಭಿವೃದ್ಧಿ ಸಮಿತಿಯ ಅಧ್ಯಕ್ಷರು, ಸದಸ್ಯರು, ಯಕ್ಷಗಾನ ಸಮಿತಿಯ ಅಧ್ಯಕ್ಷರು, ಸದಸ್ಯರು, ಸದಾಶಿವ ಭಜನಾ ಮಂಡಳಿಯ ಅಧ್ಯಕ್ಷರು, ಸದಸ್ಯರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ.ಯೋ ಹಾಗೂ ಪ್ರಗತಿಬಂಧು ಒಕ್ಕೂಟ ಮೈರೋಳಡ್ಕ ಬಂದಾರು ಅಧ್ಯಕ್ಷ, ಸದಸ್ಯರು ಹಾಗೂ ಊರವರು ಉಪಸ್ಥಿತರಿದ್ದರು.

ಸಂಜೆ ಭಜನೆ, ರಾತ್ರಿ ರಕೇಶ್ವರಿ ದೈವದ ನೇಮೋತ್ಸವ, ರಥೋತ್ಸವ ಮತ್ತು ಶಯನೋತ್ಸವ ನಡೆಯಲಿದೆ .

Related posts

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ವತಿಯಿಂದ ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ ಮತ್ತು ಅರ್ಹ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣಾ

Suddi Udaya

ಅಳದಂಗಡಿ ಸ.ಪ.ಪೂ. ಕಾಲೇಜಿನಲ್ಲಿ ಪೋಕ್ಸೋ ಕಾಯ್ದೆ ಮತ್ತು ಬಾಲ್ಯ ವಿವಾಹ ಬಗ್ಗೆ ಕಾನೂನು ಅರಿವು ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಬಿಲ್ಲವ ಸಂಘದಿಂದ ಶಿವಗಿರಿ ಮಠಕ್ಕೆ ಧಾರ್ಮಿಕ ಪ್ರವಾಸ

Suddi Udaya

ಅಖಿಲ ಭಾರತ ಬ್ಯಾರಿ ಪರಿಷತ್ ಮಹಿಳಾ ಘಟಕದ ವತಿಯಿಂದ ಮರ್ಹೂಮ್ ಮುಹಮ್ಮದ್ ಕುಂಜತ್ತಬೈಲು ರವರಿಗೆ ನುಡಿನಮನ.

Suddi Udaya

ಪತ್ನಿಯಿಂದ ಪತಿಯ ಕೊಲೆ ಪ್ರಕರಣ: ಕೊಲೆ ಪ್ರಕರಣ ಸಾಬೀತಾದರೂ ಪತ್ನಿಗಿಲ್ಲ ಶಿಕ್ಷೆ

Suddi Udaya

ಕಲ್ಮಂಜ: ದನದ ಮೇವು ತುಂಬಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿ

Suddi Udaya
error: Content is protected !!