25.7 C
ಪುತ್ತೂರು, ಬೆಳ್ತಂಗಡಿ
March 7, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

ಪುದುವೆಟ್ಟು :ಇಲ್ಲಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಕರ ಸಭೆಯನ್ನು ಎ.6 ರಂದು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದ ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪಗೌಡ ರವರು ಬೇಸಿಗೆ ಶಿಬಿರದಲ್ಲಿ ವಿದ್ಯಾರ್ಥಿ ಪೋಷಕರು ಮನೆಯಲ್ಲಿ ಮಕ್ಕಳನ್ನು ಯಾವ ರೀತಿ ನೋಡಿಕೊಳ್ಳಬೇಕು, ರಜೆಯಲ್ಲಿ ಮಕ್ಕಳು ಮನೆಯಲ್ಲಿ ಮಾಡಬೇಕಾದ ಚಟುವಟಿಕೆಗಳ ಬಗ್ಗೆ ಸಭೆಯಲ್ಲಿ ತಿಳಿಸಿಕೊಟ್ಟರು.

ಸಭಾ ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಟಿಕ್ಕಾ ಸಾಹೇಬ್ ಮಾತನಾಡಿ ಈ ವರ್ಷ ಶಾಲೆಯಲ್ಲಿ ಹಲವಾರು ಕಾರ್ಯಕ್ರಮಗಳನ್ನು ಆಯೋಜನೆ ಮಾಡಿದ್ದಾರೆ ಈ ಕಾರ್ಯಕ್ರಮದ ಸದುಪಯೋಗವನ್ನು ವಿದ್ಯಾರ್ಥಿಗಳು ರಜೆಯ ದಿನಗಳಲ್ಲಿ ಅನುಭವಿಸಬೇಕು ಎಂದು ತಿಳಿಸಿಕೊಟ್ಟರು.

ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪೋಷಕ ಬಂಧುಗಳು ಆಗಮಿಸಿ ಶಾಲೆಯ ಶೈಕ್ಷಣಿಕ ಪ್ರಗತಿಗೆ ಸೂಕ್ತ ಮಾರ್ಗದರ್ಶನವನ್ನು ನೀಡಿ ಕಾರ್ಯಕ್ರಮವನ್ನು ಚಂದಗಾಣಿಸಿಕೊಟ್ಟರು.

ಆಗಮಿಸಿದ ಪೋಷಕ ಬಂಧುಗಳನ್ನು ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪಗೌಡ ಸ್ವಾಗತಿಸಿ, ಕಾರ್ಯಕ್ರಮವನ್ನು ಶಾಲೆಯ ಹಿರಿಯ ಶಿಕ್ಷಕಿ ಶ್ರೀಮತಿ ತೇಜಾವತಿಯವರು ನಿರೂಪಿಸಿದರು. ಈ ಸಂದರ್ಭದಲ್ಲಿ ಶಾಲೆಯ ಎಲ್ಲಾ ಶಿಕ್ಷಕರು ಉಪಸ್ಥಿತರಿದ್ದು ಸಹಕರಿಸಿದರು.

Related posts

ಬೆಳ್ತಂಗಡಿ ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಕ್ಷೇತ್ರ ಸಮಿತಿಯಿಂದ ವಾರ್ಷಿಕ ಮಹಾಸಭೆ: ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಕಲಾಯಿತೊಟ್ಟು: ನಾಗರ ಪಂಚಮಿ ಪ್ರಯುಕ್ತ ನಾಗದೇವರ ಕಟ್ಟೆಯಲ್ಲಿ ಹಾಲಾಭಿಷೇಕ, ಪರ್ವ ಸೇವೆ

Suddi Udaya

ಅಯೋಧ್ಯೆ ರಾಮ ದೇವರ ಪ್ರತಿಷ್ಠಾಪನೆಯ ಪ್ರಯುಕ್ತ ಮದ್ದಡ್ಕ ಭಜನಾ ಮಂದಿರದಲ್ಲಿ ವಿಶೇಷ ಭಜನಾ ಕಾರ್ಯಕ್ರಮ: ಕರಸೇವರಿಗೆ ಗೌರವಾರ್ಪಣೆ

Suddi Udaya

ಅಕ್ಷಯ ಕಾಲೇಜಿನ ಬಿಕಾಂ ವಿಥ್ ಏವಿಯೇಷನ್ ಆ್ಯಂಡ್ ಹಾಸ್ಪಿಟಾಲಿಟಿ ಮ್ಯಾನೇಜ್ಮೆಂಟ್ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 4ನೇ ಸ್ಥಾನ ಪಡೆದ ಮನಶ್ರೀ ರವರಿಗೆ ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾ ವತಿಯಿಂದ ಅಭಿನಂದನೆ

Suddi Udaya

ಬಂದಾರು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
error: Content is protected !!