July 23, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

ಪುದುವೆಟ್ಟು :ಇಲ್ಲಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಕರ ಸಭೆಯನ್ನು ಎ.6 ರಂದು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದ ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪಗೌಡ ರವರು ಬೇಸಿಗೆ ಶಿಬಿರದಲ್ಲಿ ವಿದ್ಯಾರ್ಥಿ ಪೋಷಕರು ಮನೆಯಲ್ಲಿ ಮಕ್ಕಳನ್ನು ಯಾವ ರೀತಿ ನೋಡಿಕೊಳ್ಳಬೇಕು, ರಜೆಯಲ್ಲಿ ಮಕ್ಕಳು ಮನೆಯಲ್ಲಿ ಮಾಡಬೇಕಾದ ಚಟುವಟಿಕೆಗಳ ಬಗ್ಗೆ ಸಭೆಯಲ್ಲಿ ತಿಳಿಸಿಕೊಟ್ಟರು.

ಸಭಾ ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಟಿಕ್ಕಾ ಸಾಹೇಬ್ ಮಾತನಾಡಿ ಈ ವರ್ಷ ಶಾಲೆಯಲ್ಲಿ ಹಲವಾರು ಕಾರ್ಯಕ್ರಮಗಳನ್ನು ಆಯೋಜನೆ ಮಾಡಿದ್ದಾರೆ ಈ ಕಾರ್ಯಕ್ರಮದ ಸದುಪಯೋಗವನ್ನು ವಿದ್ಯಾರ್ಥಿಗಳು ರಜೆಯ ದಿನಗಳಲ್ಲಿ ಅನುಭವಿಸಬೇಕು ಎಂದು ತಿಳಿಸಿಕೊಟ್ಟರು.

ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪೋಷಕ ಬಂಧುಗಳು ಆಗಮಿಸಿ ಶಾಲೆಯ ಶೈಕ್ಷಣಿಕ ಪ್ರಗತಿಗೆ ಸೂಕ್ತ ಮಾರ್ಗದರ್ಶನವನ್ನು ನೀಡಿ ಕಾರ್ಯಕ್ರಮವನ್ನು ಚಂದಗಾಣಿಸಿಕೊಟ್ಟರು.

ಆಗಮಿಸಿದ ಪೋಷಕ ಬಂಧುಗಳನ್ನು ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪಗೌಡ ಸ್ವಾಗತಿಸಿ, ಕಾರ್ಯಕ್ರಮವನ್ನು ಶಾಲೆಯ ಹಿರಿಯ ಶಿಕ್ಷಕಿ ಶ್ರೀಮತಿ ತೇಜಾವತಿಯವರು ನಿರೂಪಿಸಿದರು. ಈ ಸಂದರ್ಭದಲ್ಲಿ ಶಾಲೆಯ ಎಲ್ಲಾ ಶಿಕ್ಷಕರು ಉಪಸ್ಥಿತರಿದ್ದು ಸಹಕರಿಸಿದರು.

Related posts

ಧರ್ಮಸ್ಥಳ: ದೊಂಡೋಲೆ ನಿವಾಸಿ ಗೃಹೋದ್ಯಮಿ ಸಂಧ್ಯಾ ಎಸ್ ಭಟ್ ನಿಧನ

Suddi Udaya

ನೆರಿಯ: ಮನೆಗೆ ಆಕಸ್ಮಿಕ ಬೆಂಕಿ ತಗುಲಿ ಮನೆ ಸಂಪೂರ್ಣ ಹಾನಿ

Suddi Udaya

ನಾರಾವಿ ಪೇಟೆಯಲ್ಲಿ ಬಿಜೆಪಿ ಬಿರುಸಿನ ಮತಪ್ರಚಾರ

Suddi Udaya

ಮಾಜಿ ಶಾಸಕ ವಸಂತ ಬಂಗೇರರ ನಿಧನಕ್ಕೆ ಬೆಳ್ತಂಗಡಿ ಮಾಜಿ ಸೈನಿಕರ ಸಂಘದಿಂದ ಸಂತಾಪ

Suddi Udaya

ಎಸ್.ಡಿ.ಎಂ ಪಾಲಿಟೆಕ್ನಿಕ್:‌ ವ್ಯಕ್ತಿತ್ವ ವಿಕಸನ ಹಾಗೂ ನಾಯಕತ್ವ ಗುಣ ಕುರಿತು ಕಾರ್ಯಾಗಾರ

Suddi Udaya

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಆಟಿಡೊಂಜಿ ದಿನ

Suddi Udaya
error: Content is protected !!