ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು : ಒಂದೇ ವರ್ಷದ ಅಡಿಕೆ ಸಸಿಯಲ್ಲಿ ಮೂಡಿದ ಚೊಚ್ಚಲ ಹಿಂಗಾರ; ಶಾಲಾ ತೋಟದಲ್ಲಿ ಹೀಗೊಂದು ಪ್ರಕೃತಿ ವೈಚಿತ್ರ್ಯ

ಬಂದಾರು : ಸರಕಾರಿ ಶಾಲೆಯ ಅಡಿಕೆ ತೋಟದಲ್ಲಿ ಒಂದೇ ವರ್ಷದ ಅಡಿಕೆ ಸಸಿಯೊಂದರಲ್ಲಿ ಕಾಂಡದ ತುದಿಯ ಗರಿಗಳ ಮಧ್ಯ ಭಾಗದಲ್ಲಿ ಚೊಚ್ಚಲ ಹಿಂಗಾರ ಮೂಡಿದ ಪ್ರಕೃತಿ ವೈಚಿತ್ರ್ಯವೊಂದು ಬಂದಾರು ಬಳಿ ಕಂಡು ಬಂದಿದೆ.

ಹೌದು, ಬೆಳ್ತಂಗಡಿ ತಾಲೂಕು ಬಂದಾರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ಒಂದು ವರ್ಷದ ಮಂಗಳ ತಳಿಯ ಅಡಿಕೆ ತೋಟದ ಅಡಿಕೆ ಸಸಿಯೊಂದರಲ್ಲಿ ಗರಿ ಮೂಡುವ ಕಾಂಡದ ತುದಿಯಲ್ಲಿ ಹೊಚ್ಚ ಹೊಸ ಹಿಂಗಾರವೇ ಚಿಗುರಿ ಅರಳಿದೆ. ಇದೀಗ ಕಡಲೆ ಕಾಳಿನ ಗಾತ್ರದಲ್ಲಿ ಎಳೆ ಅಡಿಕೆ ಕಾಯಿಯೂ ಬೆಳೆಯುತ್ತಿದೆ.ನೆಟ್ಟ ಒಂದೇ ವರ್ಷಕ್ಕೆ ಅಡಿಕೆ ಸಸಿಯಲ್ಲಿ ಕಂಡು ಬಂದ ಈ ಪ್ರಕೃತಿ ವೈಚಿತ್ರ್ಯದ ಬಗ್ಗೆ ಕುತೂಹಲ ಮೂಡಿದ್ದು ಹಿಂಗಾರದ ಮುಂದಿನ ಬೆಳವಣಿಗೆ ಬಗ್ಗೆ ಕಾತರದಿಂದ ಕಾಯುವಂತಾಗಿದೆ.

ಅಚುಶ್ರೀ ಬಾಂಗೇರು.

Related posts

ಕಸ್ತೂರಿ ರಂಗನ್ ವರದಿ ವಿರುದ್ಧ ಪ್ರತಿಭಟನೆಗೆ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸಂಪೂರ್ಣ ಬೆಂಬಲ

Suddi Udaya

ಗಮಕ ಜಿಲ್ಲಾಧ್ಯಕ್ಷರಾಗಿ ಮೋಹನ ಕಲ್ಲೂರಾಯರ ನೇಮಕ

Suddi Udaya

ವಿಧಾನ ಸಭಾ ಚುನಾವಣೆ : ಬೆಳ್ತಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಿ.ಆರ್.ಪಿ. ಎಫ್ ಯೋಧರು ಹಾಗೂ ಬೆಳ್ತಂಗಡಿ ಠಾಣೆಯ ಪೊಲೀಸರ ಪಥ ಸಂಚಲನ

Suddi Udaya

ಗೇರುಕಟ್ಟೆ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ: ವಿಧಾನಸಭೆಯಲ್ಲಿ ಪ್ರತಿಧ್ವನಿ; ತ್ವರಿತ ತನಿಖೆಗೆ ಶಾಸಕ ಹರೀಶ್ ಪೂಂಜ ಆಗ್ರಹ

Suddi Udaya

ಸಮರ್ಪಿತ ಸೇವೆಗೆ ಗೌರವದ ಬೀಳ್ಕೊಡುಗೆ – ಸಿಬ್ಬಂದಿ ಧನ್ಯ ಅವರಿಗೆ ಸೋಜಾ ಎಲೆಕ್ಟ್ರಾನಿಕ್ಸ್‌ನಿಂದ ಸನ್ಮಾನ

Suddi Udaya

ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ ವತಿಯಿಂದ ತಹಶೀಲ್ದಾರ್ ಮುಖಾಂತರ ರಾಜ್ಯ ಸರಕಾರಕ್ಕೆ ಮನವಿ

Suddi Udaya
error: Content is protected !!