25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ವೇಣೂರು: ಪಲ್ಗುಣಿ ನದಿಯಿಂದ ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ: ಆರೋಪಿಗಳ ಸಹಿತ ಪಿಕಪ್‌ ವಾಹನ ವಶ

ವೇಣೂರು :ಇಲ್ಲಿಯ ಪಲ್ಗುಣಿ ನದಿಯಲ್ಲಿ ಅಕ್ರಮವಾಗಿ, ಮರಳು ಕಳ್ಳತನ ಮಾಡಿ ಸಾಗಾಟ ಮಾಡುತ್ತಿದ್ದ ಸ್ಥಳಕ್ಕೆ ವೇಣೂರು ಪೊಲೀಸರು ದಾಳಿ ನಡೆಸಿ ವಾಹನಗಳನ್ನು ಹಾಗೂ ಆರೋಪಿಗಳನ್ನು ವಶಕ್ಕೆ ಪಡೆದ ಘಟನೆ ಎ.7ರಂದು ವರದಿಯಾಗಿದೆ.

ಎ.07 ರಂದು ರಾತ್ರಿ ಬೆಳ್ತಂಗಡಿ ತಾಲೂಕು ವೇಣೂರು ಗ್ರಾಮದ ಪಲ್ಗುಣಿ ನದಿಯಲ್ಲಿ ಅಕ್ರಮವಾಗಿ, ಮರಳು ಕಳ್ಳತನ ಮಾಡಿ ಸಾಗಾಟ ಮಾಡುತ್ತಿರುವುದಾಗಿ ಮಾಹಿತಿ ಬಂದ‌ ಮೇರೆಗೆ, ಶ್ರೀಶೈಲ್‌ ಡಿ ಮುರಗೋಡ್‌ ಪಿ.ಎಸ್‌.ಐ ವೇಣೂರು ಪೊಲೀಸ್ ಠಾಣೆರವರು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ಹೋದಾಗ, ವೇಣೂರು ಡ್ಯಾಂ ಬಳಿ ಪಲ್ಗುಣಿ ನದಿಯಲ್ಲಿ, ಆಪಾದಿತರಾದ ಕರಿಮಣೇಲು ಗ್ರಾಮ, ಬೆಳ್ತಂಗಡಿ ನಿವಾಸಿ ಸತೀಶ್‌ (44) ಮತ್ತು ಮೂಡುಕೋಡಿ ಗ್ರಾಮ, ಬೆಳ್ತಂಗಡಿ ನವೀನ್‌ [35] ಎಂಬವರು, ನದಿಯಿಂದ ಮರಳು ತೆಗೆದು, ಕೆ ಎ 12 5150 ಹಾಗೂ ಕೆ ಎ 19 ಎಎ 4650ನೇ ಪಿಕಪ್‌ ಗಳಲ್ಲಿ ತಲಾ 30 ಬುಟ್ಟಿಗಳಷ್ಟು ಮರಳನ್ನು ತುಂಬಿಸಿರುವುದು ಕಂಡುಬಂದಿರುತ್ತದೆ.

ಆರೋಪಿಗಳು ಸಂಬಂಧಪಟ್ಟ ಇಲಾಖೆಯಿಂದ ಯಾವುದೇ ಅನುಮತಿಯನ್ನು ಪಡೆಯದೇ ಅನಧೀಕೃತವಾಗಿ ನದಿಯಿಂದ ಅಕ್ರಮವಾಗಿ ಮರಳನ್ನು ಕಳವು ಮಾಡಿಕೊಂಡು ಸಾಗಾಟ ಮಾಡುತ್ತಿರುವುದು ಕಂಡು ಬಂದ ಮೇರೆಗೆ, ವಾಹನಗಳನ್ನು ಹಾಗೂ ಆರೋಪಿಗಳನ್ನು ವಶಕ್ಕೆ ಪಡೆದು, ವೇಣೂರು ಠಾಣೆಯಲ್ಲಿ ಅಕ್ರ: 37/2024 ಕಲಂ: 379 ಜೊತೆಗೆ 34 ಐಪಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಅಂಡಿಂಜೆ : ನೆಲ್ಲಿಂಗೇರಿ ಸ.ಕಿ.ಪ್ರಾ. ಶಾಲೆ ಮತ್ತು ಅಂಗನವಾಡಿ ಕೇಂದ್ರದಲ್ಲಿ ಶ್ರೀಮತಿ ಇಂದಿರಾ ಗಾಂಧಿಯವರ ಜನ್ಮದಿನಾಚರಣೆ

Suddi Udaya

ಚಾರ್ಮಾಡಿ ತಿರುವಿನಲ್ಲಿ ಟರ್ನ್ ಆಗದೇ ನಿಂತ 12 ಚಕ್ರದ ಲಾರಿ: ಬೆಳಗ್ಗೆಯಿಂದ ಚಾರ್ಮಾಡಿ ಘಾಟ್ ನಲ್ಲಿ ವಾಹನ ಸವಾರರ ಪರದಾಟ

Suddi Udaya

ವಿದ್ಯಾರ್ಥಿ ಕೀರ್ತನ್ ಕೈಚಳಕದಿಂದ ಸಾಸಿವೆಯಲ್ಲಿ ಮೂಡಿದ`ಭಗತ್ ಸಿಂಗ್’ ಚಿತ್ರ :ಇಂಡಿಯಾ ಬುಕ್ ಆಫ್ ರೆಕಾರ್ಡ್ಗೆ ಸೇರ್ಪಡೆ

Suddi Udaya

ಚಾರ್ಮಾಡಿ: ಪರ್ಲಾಣಿ ಸ. ಹಿ.ಪ್ರಾ. ಶಾಲೆಯ ನೂತನ ವಿವೇಕ ಕೊಠಡಿ ಉದ್ಘಾಟನೆ

Suddi Udaya

ಉಜಿರೆ: ಶ್ರೀ. ಧ.ಮಂ.ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವದ ಸಂಭ್ರಮ -ಮಕ್ಕಳಿಗೆ ಅದ್ದೂರಿಯ ಸ್ವಾಗತ

Suddi Udaya

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕ್ಯಾಂಪೋರಿಯಲ್ಲಿ ಸಮಗ್ರ ಪ್ರಶಸ್ತಿ ಮುಡಿಗೇರಿಸಿಕೊಂಡ ಬೆಳ್ತಂಗಡಿ ಸ್ಥಳೀಯ ಸಂಸ್ಥೆ

Suddi Udaya
error: Content is protected !!