23.7 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಾವ್ಯ: ಕರ್ಂಬಲೆಕ್ಕಿಯಲ್ಲಿ ಪುರುಷರ ರಾಶಿ ಪೂಜೆ

:

ಬೆಳ್ತಂಗಡಿ : ಪುರುಷರ ಭಕ್ತರ ಸಮಿತಿ ಕರ್ಂಬಲೆಕ್ಕಿ ಸಾವ್ಯ ಇದರ ರಾಶಿ ಪೂಜೆ ಇತ್ತೀಚೆಗೆ ಕರ್ಂಬಲೆಕ್ಕಿ ಎಂಬಲ್ಲಿ ಜರಗಿತು.

ಪ್ರಾಚೀನ ಕಾಲದಿಂದ ತುಳುನಾಡಿನಲ್ಲಿ ಅತೀ ಭಕ್ತಿ ಭಾವದಿಂದ ಸುಗ್ಗಿ ತಿಂಗಳ ಹುಣ್ಣಿಮೆಯ ಸಂದರ್ಭದಲ್ಲಿ ಪುರುಷ ಕಟ್ಟುವುದು ಆಚರಿಸಲ್ಪಡುವುದಾಗಿದ್ದು ಕಳೆದ ನಾಲ್ಕು ದಶಕಗಳಿಂದ ನಡೆಯುತ್ತಿದ್ದು ಮೂರು ಅಥವಾ ಐದು ದಿವಸ ಕದ್ರಿ ದೇವರ ಹೆಸರಿನಲ್ಲಿ ದೇವರು ಸಹಿತ ವಿವಿಧ ವೇಷಗಳೊಂದಿಗೆ ಗ್ರಾಮದ ಮನೆ ಮನೆಗಳಿಗೆ ತೆರಳಿ ಹರಕೆ-ಕಾಣಿಕೆ ಸ್ವೀಕರಿಸಿ ಸುಮಾರು 30ರಿಂದ 75 ಮಂದಿಯ ತಂಡ ದಿಮಿಸೋಲೆ ಹಾಕುತ್ತಾ ಬಹು ವಿಜೃಂಭಣೆ ಕಟ್ಟು ಕಟ್ಟಲೆಯಂತೆ ನಡೆದು ಬಳಿಕ ದಿನ ನಿಗದಿಗೊಳಿಸಿ ರಾಶಿ ಪೂಜೆ ಮಾಡಿ ಪ್ರಸಾದ ಹಂಚುವ ಕಾರ್‍ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಸಮಿತಿಯ ಪದಾಧಿಕಾರಿಗಳಾದ ಕೆ. ಸದಾಶಿವ ಹೆಗ್ಡೆ , ವಸಂತ ಪಡೀಲ್, ಅಮ್ಮಿ ಪೂಜಾರಿ, ಸಂದೀಪ್ ಬೀಜದಡಿ, ಸುಂದರ ಬಂಗೇರ, ದಿನೇಶ್ ಕೋಟ್ಯಾನ್, ಪ್ರಶಾಂತ್ ಮಲ್ಲರಡ್ಡ, ಶಶಿಧರ ಆಚಾರ್ಯ, ಮತ್ತಿತರರು ರಾಶಿ ಪೂಜಾ ವಿಧಿ ನಡೆಸಿ ನೂರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಭಾಗವಹಿಸಿ ಶ್ರೀದೇವರ ಗಂಧ ಪ್ರಸಾದ ಸ್ವೀಕರಿಸಿದರು.

Related posts

ಪಣಕಜೆ : ಚರಂಡಿಗೆ ವಾಲಿದ ಕೆಎಸ್ಆರ್ ಟಿಸಿ ಬಸ್ಸು

Suddi Udaya

ಇಂದು (ಆ.28) ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಹಾಗೂ ರಾಜ್ಯಪಾಲರ ಮೇಲೆ ಪ್ರಚೋದನಕಾರಿ ಹೇಳಿಕೆ ನೀಡಿರುವ ಐವನ್ ಡಿ ಸೋಜಾ ಮೇಲೆ ದೂರು ದಾಖಲಿಸಲು ಒತ್ತಾಯಿಸಿ ರಸ್ತೆ ತಡೆ- ಬೃಹತ್ ಪ್ರತಿಭಟನೆ

Suddi Udaya

ಹದಗೆಟ್ಟ ರಸ್ತೆಗಳ ಸಮಸ್ಯೆಯನ್ನು ಇತ್ಯರ್ಥ ಪಡಿಸಿದ ಶಿಬಾಜೆ ಗ್ರಾ.ಪಂ.

Suddi Udaya

ಎ.23: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್‌ ಕ್ಲಬ್‌ನಲ್ಲಿ 15ನೇ ವರ್ಷದ ಸಾಮೂಹಿಕ ವಿವಾಹ ನಿಶ್ಚಿತಾರ್ಥ

Suddi Udaya

ವೇಣೂರು: ಆಳ್ವಾಸ್ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಸುಕನ್ಯಾರವರು ಸಲ್ಲಿಸಿದ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧಕ್ಕೆ ದ.ಕ.ಜಿಲ್ಲಾಧಿಕಾರಿ ಮುಲೈ ಮುಹಿಲನ್ ಧಿಡೀರ್ ಭೇಟಿ

Suddi Udaya
error: Content is protected !!