23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಾವ್ಯ: ಕರ್ಂಬಲೆಕ್ಕಿಯಲ್ಲಿ ಪುರುಷರ ರಾಶಿ ಪೂಜೆ

:

ಬೆಳ್ತಂಗಡಿ : ಪುರುಷರ ಭಕ್ತರ ಸಮಿತಿ ಕರ್ಂಬಲೆಕ್ಕಿ ಸಾವ್ಯ ಇದರ ರಾಶಿ ಪೂಜೆ ಇತ್ತೀಚೆಗೆ ಕರ್ಂಬಲೆಕ್ಕಿ ಎಂಬಲ್ಲಿ ಜರಗಿತು.

ಪ್ರಾಚೀನ ಕಾಲದಿಂದ ತುಳುನಾಡಿನಲ್ಲಿ ಅತೀ ಭಕ್ತಿ ಭಾವದಿಂದ ಸುಗ್ಗಿ ತಿಂಗಳ ಹುಣ್ಣಿಮೆಯ ಸಂದರ್ಭದಲ್ಲಿ ಪುರುಷ ಕಟ್ಟುವುದು ಆಚರಿಸಲ್ಪಡುವುದಾಗಿದ್ದು ಕಳೆದ ನಾಲ್ಕು ದಶಕಗಳಿಂದ ನಡೆಯುತ್ತಿದ್ದು ಮೂರು ಅಥವಾ ಐದು ದಿವಸ ಕದ್ರಿ ದೇವರ ಹೆಸರಿನಲ್ಲಿ ದೇವರು ಸಹಿತ ವಿವಿಧ ವೇಷಗಳೊಂದಿಗೆ ಗ್ರಾಮದ ಮನೆ ಮನೆಗಳಿಗೆ ತೆರಳಿ ಹರಕೆ-ಕಾಣಿಕೆ ಸ್ವೀಕರಿಸಿ ಸುಮಾರು 30ರಿಂದ 75 ಮಂದಿಯ ತಂಡ ದಿಮಿಸೋಲೆ ಹಾಕುತ್ತಾ ಬಹು ವಿಜೃಂಭಣೆ ಕಟ್ಟು ಕಟ್ಟಲೆಯಂತೆ ನಡೆದು ಬಳಿಕ ದಿನ ನಿಗದಿಗೊಳಿಸಿ ರಾಶಿ ಪೂಜೆ ಮಾಡಿ ಪ್ರಸಾದ ಹಂಚುವ ಕಾರ್‍ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಸಮಿತಿಯ ಪದಾಧಿಕಾರಿಗಳಾದ ಕೆ. ಸದಾಶಿವ ಹೆಗ್ಡೆ , ವಸಂತ ಪಡೀಲ್, ಅಮ್ಮಿ ಪೂಜಾರಿ, ಸಂದೀಪ್ ಬೀಜದಡಿ, ಸುಂದರ ಬಂಗೇರ, ದಿನೇಶ್ ಕೋಟ್ಯಾನ್, ಪ್ರಶಾಂತ್ ಮಲ್ಲರಡ್ಡ, ಶಶಿಧರ ಆಚಾರ್ಯ, ಮತ್ತಿತರರು ರಾಶಿ ಪೂಜಾ ವಿಧಿ ನಡೆಸಿ ನೂರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಭಾಗವಹಿಸಿ ಶ್ರೀದೇವರ ಗಂಧ ಪ್ರಸಾದ ಸ್ವೀಕರಿಸಿದರು.

Related posts

ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ ಅ.ವಂ. ಜೇಮ್ಸ್ ಪಟ್ಟೇರಿಲ್ ರವರನ್ನು ಅಭಿನಂದಿಸಿದ ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್

Suddi Udaya

ನಾಳೆ(ಅ.19): ಅನುಗ್ರಹದಲ್ಲಿ ಹಿರಿಯ ವಿದ್ಯಾರ್ಥಿಗಳ “ಅನುಗ್ರಹ ಸಮಾಗಮ 2025”

Suddi Udaya

ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ರಿಂದ ಮತ ಚಲಾವಣೆ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಹೆತ್ತವರ ಸಭೆ

Suddi Udaya

ಮಾ.18-23: ಮಣ್ಣಿನ ಹರಕೆಯ ಪ್ರಖ್ಯಾತ ಕ್ಷೇತ್ರ ಸುರ್ಯ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಕಡಿರುದ್ಯಾವರ ಗ್ರಾ.ಪಂ. ಹಾಗೂ ಶ್ರೀ ಕ್ಷೇ.ಧ.ಗ್ರಾ.ಯೋಜನೆ ಸಹಭಾಗಿತ್ವದಲ್ಲಿ ನಿರ್ಮಾಣಗೊಂಡ ರುದ್ರಭೂಮಿ ಲೋಕಾರ್ಪಣೆ

Suddi Udaya
error: Content is protected !!