ಬಳಂಜ ಶ್ರೀ ಪಂಚಲಿಂಗೇಶ್ವರ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವರ ಜಾತ್ರೋತ್ಸವಕ್ಕೆ ಚಾಲನೆ: ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಉಗ್ರಾಣ ಮುಹೂರ್ತ,

Suddi Udaya

ಬಳಂಜ: ಇತಿಹಾಸ ಪ್ರಸಿದ್ಧ ಬಳಂಜ ಶ್ರೀ ಪಂಚಲಿಂಗೇಶ್ವರ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು.

ಬೆಳಿಗ್ಗೆ ವೈದಿಕ ವಿಧಿ ವಿಧಾನಗಳು ಪ್ರಾರಂಭಗೊಂಡು. ದೇವರಿಗೆ ವಿಶೇಷ ಪೂಜೆ ನೇರವೇರಿಸಲಾಯಿತು. ಬಳಂಜ,ನಾಲ್ಕೂರು ಗ್ರಾಮದಿಂದ ಆಗಮಿಸಿದ ಹಸಿರುವಾಣಿ ಹೊರೆಕಾಣಿಕೆಯನ್ನು ದೇವಸ್ಥಾನಕ್ಕೆ ಸಮರ್ಪಿಸಲಾಯಿತು. ಉಗ್ರಾಹ್ನ ಮುಹೂರ್ತದ ಉದ್ಘಾಟನೆಯನ್ನು ಪ್ರಗತಿಪರ ಕೃಷಿಕ ತಿಮ್ಮಪ್ಪ ಪೂಜಾರಿ ನಿಟ್ಟಡ್ಕ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಶುಭಕೋರಿದರು.

ತೋರಣ ಮುಹೂರ್ತ ನೇರವೇರಿಸಲಾಯಿತು.ಈ ಸಂದರ್ಭದಲ್ಲಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಅನುವಂಶೀಯ‌ ಆಡಳಿತ ಮೊಕ್ತೇಸರ ಬಿ.ಶೀತಲ್ ಪಡಿವಾಳ್ ಹಾಗೂ ಭಕ್ತರು ಉಪಸ್ಥಿತರಿದ್ದರು.

Leave a Comment

error: Content is protected !!